AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ

‘ಆರ್​ಆರ್​ಆರ್’ ಸಿನಿಮಾ ಗೆಲುವಿನ ಬಳಿಕ ರಾಜಮೌಳಿ ಅವರ ಸಂಪೂರ್ಣ ಗಮನ ‘SSMB29’ ಕಡೆ ಇದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಹೊಸ ಸಿನಿಮಾ ಆರಂಭಕ್ಕೆ ರಾಜಮೌಳಿ ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ
ಹೊಸ ಸಿನಿಮಾ ಆರಂಭಕ್ಕೆ ಜ್ಯೋತಿಷ್ಯದ ಮೊರೆ ಹೋದ ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jul 11, 2024 | 6:58 AM

Share

ನಿರ್ದೇಶಕ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ಸ್ಟಾರ್​ಗಳು ಕಾದು ಕುಳಿತಿರುತ್ತಾರೆ. ಆದರೆ, ಎಲ್ಲರಿಗೂ ಅವರ ಜೊತೆ ಕೆಲಸ ಮಾಡೋ ಅವಕಾಶ ಸಿಗುವುದಿಲ್ಲ. ಈ ರೀತಿ ಅವಕಾಶ ಸಿಕ್ಕ ಮೇಲೆ ಕೆಲವು ವರ್ಷ ಅವರು ಬೇರೆ ಯಾವುದೇ ಸಿನಿಮಾನೂ ಒಪ್ಪಿಕೊಳ್ಳುವಂತಿಲ್ಲ. ಈಗ ಮಹೇಶ್ ಬಾಬು ಅವರ ಜೊತೆಗಿನ ಹೊಸ ಸಿನಿಮಾದ ತಯಾರಿಯಲ್ಲಿ ರಾಜಮೌಳಿ ಇದ್ದಾರೆ. ಹೊಸ ಸಿನಿಮಾ ಮುಹೂರ್ತಕ್ಕೆ ರಾಜಮೌಳಿ ಅವರು ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಸದ್ಯ ಆಷಾಢ ಮಾಸ ನಡೆಯುತ್ತಿದೆ. ಜೂನ್ 23ರಿಂದ ಜುಲೈ 21ರವರೆಗೆ ಆಷಾಢ ಮಾಸ ಇರುತ್ತದೆ. ಈ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಲು ಯಾರೂ ಆಸಕ್ತಿ ತೋರಿಸುವುದಿಲ್ಲ. ಈ ಕಾರಣದಿಂದಲೇ ರಾಜಮೌಳಿ ಅವರು ಹೊಸ ಸಿನಿಮಾ ಮುಹೂರ್ತವನ್ನು ಈ ಸಮಯದಲ್ಲಿ ಮಾಡದೆ ಇರಲು ನಿರ್ಧರಿಸಿದ್ದಾರೆ.

ರಾಜಮೌಳಿ ಅವರು ಈ ರೀತಿಯ ವಿಚಾರಗಳನ್ನು ಹೆಚ್ಚು ನಂಬುತ್ತಾರಂತೆ. ಹೀಗಾಗಲೇ ಸಿನಿಮಾನ ಆಷಾಢದಲ್ಲಿ ಪ್ರಾರಂಭಿಸೋದು ಬೇಡ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ರಾಜಮೌಳಿ ಅವರು ಆಗಾಗ ದೇವಸ್ಥಾನಗಳಿಗೂ ಭೇಟಿ ನೀಡುತ್ತಾ ಇರುತ್ತಾರೆ. ಅವರು ಹೆಚ್ಚೆಚ್ಚು ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಾರೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಚಿತ್ರಕ್ಕೆ ‘SSMB29’ ಎನ್ನುವ ಶೀರ್ಷಿಕೆ ಇಡಲಾಗಿದೆ. ರಾಜಮೌಳಿ ಅವರು ನಿರ್ದೇಶನಗಳ ಮೂಲಕ ತಮ್ಮ ಪವರ್​ನ ತೋರಿಸಿದ್ದಾರೆ. ಅದೇ ರೀತಿ ಮಹೇಶ್ ಬಾಬು ಅವರು ಹಲವುಸೂಪರ್ ಹಿಟ್ ಚಿತ್ರಗಳನ್ನು ನೀಡಿ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇವರು ಸಿನಿಮಾ ಮಾಡುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ.

ಇದನ್ನೂ ಓದಿ: ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

ರಾಜಮೌಳಿ ಚಿತ್ರಕ್ಕಾಗಿ ಮಹೇಶ್ ಬಾಬು ಅವರು ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿದೇಶಕ್ಕೆ ತೆರಳಿ ಅವರು ವಿಶೇಷ ಫೈಟ್​ಗಳನ್ನು ಕಲಿತು ಬಂದಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ