AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ

‘ಆರ್​ಆರ್​ಆರ್’ ಸಿನಿಮಾ ಗೆಲುವಿನ ಬಳಿಕ ರಾಜಮೌಳಿ ಅವರ ಸಂಪೂರ್ಣ ಗಮನ ‘SSMB29’ ಕಡೆ ಇದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಹೊಸ ಸಿನಿಮಾ ಆರಂಭಕ್ಕೆ ರಾಜಮೌಳಿ ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ
ಹೊಸ ಸಿನಿಮಾ ಆರಂಭಕ್ಕೆ ಜ್ಯೋತಿಷ್ಯದ ಮೊರೆ ಹೋದ ರಾಜಮೌಳಿ
Follow us
ರಾಜೇಶ್ ದುಗ್ಗುಮನೆ
|

Updated on: Jul 11, 2024 | 6:58 AM

ನಿರ್ದೇಶಕ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ಸ್ಟಾರ್​ಗಳು ಕಾದು ಕುಳಿತಿರುತ್ತಾರೆ. ಆದರೆ, ಎಲ್ಲರಿಗೂ ಅವರ ಜೊತೆ ಕೆಲಸ ಮಾಡೋ ಅವಕಾಶ ಸಿಗುವುದಿಲ್ಲ. ಈ ರೀತಿ ಅವಕಾಶ ಸಿಕ್ಕ ಮೇಲೆ ಕೆಲವು ವರ್ಷ ಅವರು ಬೇರೆ ಯಾವುದೇ ಸಿನಿಮಾನೂ ಒಪ್ಪಿಕೊಳ್ಳುವಂತಿಲ್ಲ. ಈಗ ಮಹೇಶ್ ಬಾಬು ಅವರ ಜೊತೆಗಿನ ಹೊಸ ಸಿನಿಮಾದ ತಯಾರಿಯಲ್ಲಿ ರಾಜಮೌಳಿ ಇದ್ದಾರೆ. ಹೊಸ ಸಿನಿಮಾ ಮುಹೂರ್ತಕ್ಕೆ ರಾಜಮೌಳಿ ಅವರು ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಸದ್ಯ ಆಷಾಢ ಮಾಸ ನಡೆಯುತ್ತಿದೆ. ಜೂನ್ 23ರಿಂದ ಜುಲೈ 21ರವರೆಗೆ ಆಷಾಢ ಮಾಸ ಇರುತ್ತದೆ. ಈ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಲು ಯಾರೂ ಆಸಕ್ತಿ ತೋರಿಸುವುದಿಲ್ಲ. ಈ ಕಾರಣದಿಂದಲೇ ರಾಜಮೌಳಿ ಅವರು ಹೊಸ ಸಿನಿಮಾ ಮುಹೂರ್ತವನ್ನು ಈ ಸಮಯದಲ್ಲಿ ಮಾಡದೆ ಇರಲು ನಿರ್ಧರಿಸಿದ್ದಾರೆ.

ರಾಜಮೌಳಿ ಅವರು ಈ ರೀತಿಯ ವಿಚಾರಗಳನ್ನು ಹೆಚ್ಚು ನಂಬುತ್ತಾರಂತೆ. ಹೀಗಾಗಲೇ ಸಿನಿಮಾನ ಆಷಾಢದಲ್ಲಿ ಪ್ರಾರಂಭಿಸೋದು ಬೇಡ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ರಾಜಮೌಳಿ ಅವರು ಆಗಾಗ ದೇವಸ್ಥಾನಗಳಿಗೂ ಭೇಟಿ ನೀಡುತ್ತಾ ಇರುತ್ತಾರೆ. ಅವರು ಹೆಚ್ಚೆಚ್ಚು ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಾರೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಚಿತ್ರಕ್ಕೆ ‘SSMB29’ ಎನ್ನುವ ಶೀರ್ಷಿಕೆ ಇಡಲಾಗಿದೆ. ರಾಜಮೌಳಿ ಅವರು ನಿರ್ದೇಶನಗಳ ಮೂಲಕ ತಮ್ಮ ಪವರ್​ನ ತೋರಿಸಿದ್ದಾರೆ. ಅದೇ ರೀತಿ ಮಹೇಶ್ ಬಾಬು ಅವರು ಹಲವುಸೂಪರ್ ಹಿಟ್ ಚಿತ್ರಗಳನ್ನು ನೀಡಿ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇವರು ಸಿನಿಮಾ ಮಾಡುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ.

ಇದನ್ನೂ ಓದಿ: ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

ರಾಜಮೌಳಿ ಚಿತ್ರಕ್ಕಾಗಿ ಮಹೇಶ್ ಬಾಬು ಅವರು ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿದೇಶಕ್ಕೆ ತೆರಳಿ ಅವರು ವಿಶೇಷ ಫೈಟ್​ಗಳನ್ನು ಕಲಿತು ಬಂದಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ