AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು

SS Rajamouli Birthday: ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿತ್ತು.

SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು
ರಾಜಮೌಳಿ
Follow us
TV9 Web
| Updated By: ಮದನ್​ ಕುಮಾರ್​

Updated on:Oct 10, 2022 | 11:04 AM

ಭಾರತೀಯ ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಅವರದ್ದು ದೊಡ್ಡ ಹೆಸರು. ಅವರು ಮಾಡುವ ಪ್ರತಿ ಸಿನಿಮಾ ಕೂಡ ಡಿಫರೆಂಟ್​ ಆಗಿರುತ್ತದೆ. ಆ ಕಾರಣಕ್ಕಾಗಿ ಅವರ ಮೇಲೆ ಸಿನಿಪ್ರಿಯರಿಗೆ ಎಲ್ಲಿಲ್ಲದಷ್ಟು ಅಭಿಮಾನ. ಹೈ ಬಜೆಟ್​ ಚಿತ್ರಗಳ ಮೂಲಕ ಬೇರೊಂದು ಲೋಕವನ್ನು ಅವರು ಪ್ರೇಕ್ಷಕರ ಮುಂದಿಡುತ್ತಾರೆ. ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಆರ್​ಆರ್​ಆರ್​’ (RRR) ಮುಂತಾದ ಸಿನಿಮಾಗಳ ಮೂಲಕ ರಾಜಮೌಳಿ ಅವರ ಸಾಮರ್ಥ್ಯ ಏನು ಎಂಬುದು ಸಾಬೀತಾಗಿದೆ. ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದಂತಹ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇಂದು (ಅ.10) ರಾಜಮೌಳಿ ಅವರಿಗೆ ಜನ್ಮದಿನದ (SS Rajamouli Birthday) ಸಂಭ್ರಮ. ಆ ಪ್ರಯುಕ್ತ ಅವರ ಸಿನಿಮಾ ಪಯಣವನ್ನು ಮೆಕುಲು ಹಾಕುತ್ತ, ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗುತ್ತಿದೆ.

ರಾಜಮೌಳಿ ಅವರ ಇಡೀ ಕುಟುಂಬವೇ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದೆ. ಅವರ ತಂದೆ ವಿಜಯೇಂದ್ರ ಪ್ರಸಾದ್​ ಕೂಡ ಕೆಲವು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಹಲವಾರು ಸಿನಿಮಾಗಳಿಗೆ ಕಥೆ ಬರೆದ ಖ್ಯಾತಿ ಅವರಿಗೆ ಸಲ್ಲುತ್ತದೆ. ತಂದೆಯ ಜೊತೆಗಿದ್ದು ಸಿನಿಮಾದ ತಂ​ತ್ರಗಳನ್ನು ರಾಜಮೌಳಿ ಕಲಿತುಕೊಂಡರು.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಇಂದು ಸ್ಟಾರ್​ ನಿರ್ದೇಶಕನಾಗಿ ಬೆಳೆದುನಿಂತಿರುವ ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ಜ್ಯೂ. ಎನ್​ಟಿಆರ್​ ನಟನೆಯ ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಸೂಪರ್​ ಹಿಟ್​ ಆಯಿತು. ಆಗಿನ ಕಾಲಕ್ಕೆ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿದ್ದು ಆ ಸಿನಿಮಾದ ಹೆಚ್ಚುಗಾರಿಕೆ. ನಂತರ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಾ ರಾಜಮೌಳಿ ಇತಿಹಾಸ ಬರೆದರು.

ರಾಜಮೌಳಿ ಅವರ ಸಿನಿಮಾ ಬದುಕಿಗೆ ಟರ್ನಿಂಗ್​ ಪಾಯಿಂಟ್​ ಆಗಿದ್ದು ‘ಮಗಧೀರ’ ಚಿತ್ರ. ರಾಮ್​ ಚರಣ್​ ನಟನೆಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳಿದ್ದವು. ಗ್ರಾಫಿಕ್ಸ್​ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗಿತ್ತು. ಅಂದಾಜು 44 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬರೋಬ್ಬರಿ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ದಾಖಲೆ ಸೃಷ್ಟಿಸಿತು. ಆ ಬಳಿಕ ರಾಜಮೌಳಿ ಅವರ ಚಾರ್ಮ್​ ಹೆಚ್ಚಿತು.

ಪ್ರತಿ ಸಿನಿಮಾದಲ್ಲೂ ರಾಜಮೌಳಿ ಅವರು ಹೊಸ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸುತ್ತಲೇ ಸಾಗುತ್ತಿದ್ದಾರೆ. ‘ಬಾಹುಬಲಿ’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿತು. ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರ ಕೂಡ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಮಾಯಿ ಮಾಡಿ ಸೈ ಎನಿಸಿಕೊಂಡಿತು. ಹೀಗೆ ‘ಸ್ಟೂಡೆಂಟ್​ ನಂ.1’ ಚಿತ್ರದಿಂದ ಶುರುವಾದ ರಾಜಮೌಳಿ ಅವರ ಜರ್ನಿ ಇಂದಿಗೂ ಯಶಸ್ವಿಯಾಗಿ ಸಾಗುತ್ತಿದೆ.

ಮುಂದಿನ ಸಿನಿಮಾಗಾಗಿ ರಾಜಮೌಳಿ ಅವರು ತಯಾರಿ ನಡೆಸುತ್ತಿದ್ದಾರೆ. ಟಾಲಿವುಡ್​ನ ‘ಪ್ರಿನ್ಸ್​’ ಮಹೇಶ್​ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದು, ಆ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Mon, 10 October 22

ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್