AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು

SS Rajamouli Birthday: ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿತ್ತು.

SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು
ರಾಜಮೌಳಿ
TV9 Web
| Edited By: |

Updated on:Oct 10, 2022 | 11:04 AM

Share

ಭಾರತೀಯ ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಅವರದ್ದು ದೊಡ್ಡ ಹೆಸರು. ಅವರು ಮಾಡುವ ಪ್ರತಿ ಸಿನಿಮಾ ಕೂಡ ಡಿಫರೆಂಟ್​ ಆಗಿರುತ್ತದೆ. ಆ ಕಾರಣಕ್ಕಾಗಿ ಅವರ ಮೇಲೆ ಸಿನಿಪ್ರಿಯರಿಗೆ ಎಲ್ಲಿಲ್ಲದಷ್ಟು ಅಭಿಮಾನ. ಹೈ ಬಜೆಟ್​ ಚಿತ್ರಗಳ ಮೂಲಕ ಬೇರೊಂದು ಲೋಕವನ್ನು ಅವರು ಪ್ರೇಕ್ಷಕರ ಮುಂದಿಡುತ್ತಾರೆ. ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಆರ್​ಆರ್​ಆರ್​’ (RRR) ಮುಂತಾದ ಸಿನಿಮಾಗಳ ಮೂಲಕ ರಾಜಮೌಳಿ ಅವರ ಸಾಮರ್ಥ್ಯ ಏನು ಎಂಬುದು ಸಾಬೀತಾಗಿದೆ. ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದಂತಹ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇಂದು (ಅ.10) ರಾಜಮೌಳಿ ಅವರಿಗೆ ಜನ್ಮದಿನದ (SS Rajamouli Birthday) ಸಂಭ್ರಮ. ಆ ಪ್ರಯುಕ್ತ ಅವರ ಸಿನಿಮಾ ಪಯಣವನ್ನು ಮೆಕುಲು ಹಾಕುತ್ತ, ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗುತ್ತಿದೆ.

ರಾಜಮೌಳಿ ಅವರ ಇಡೀ ಕುಟುಂಬವೇ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದೆ. ಅವರ ತಂದೆ ವಿಜಯೇಂದ್ರ ಪ್ರಸಾದ್​ ಕೂಡ ಕೆಲವು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಹಲವಾರು ಸಿನಿಮಾಗಳಿಗೆ ಕಥೆ ಬರೆದ ಖ್ಯಾತಿ ಅವರಿಗೆ ಸಲ್ಲುತ್ತದೆ. ತಂದೆಯ ಜೊತೆಗಿದ್ದು ಸಿನಿಮಾದ ತಂ​ತ್ರಗಳನ್ನು ರಾಜಮೌಳಿ ಕಲಿತುಕೊಂಡರು.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಇಂದು ಸ್ಟಾರ್​ ನಿರ್ದೇಶಕನಾಗಿ ಬೆಳೆದುನಿಂತಿರುವ ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ಜ್ಯೂ. ಎನ್​ಟಿಆರ್​ ನಟನೆಯ ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಸೂಪರ್​ ಹಿಟ್​ ಆಯಿತು. ಆಗಿನ ಕಾಲಕ್ಕೆ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿದ್ದು ಆ ಸಿನಿಮಾದ ಹೆಚ್ಚುಗಾರಿಕೆ. ನಂತರ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಾ ರಾಜಮೌಳಿ ಇತಿಹಾಸ ಬರೆದರು.

ರಾಜಮೌಳಿ ಅವರ ಸಿನಿಮಾ ಬದುಕಿಗೆ ಟರ್ನಿಂಗ್​ ಪಾಯಿಂಟ್​ ಆಗಿದ್ದು ‘ಮಗಧೀರ’ ಚಿತ್ರ. ರಾಮ್​ ಚರಣ್​ ನಟನೆಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳಿದ್ದವು. ಗ್ರಾಫಿಕ್ಸ್​ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗಿತ್ತು. ಅಂದಾಜು 44 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬರೋಬ್ಬರಿ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ದಾಖಲೆ ಸೃಷ್ಟಿಸಿತು. ಆ ಬಳಿಕ ರಾಜಮೌಳಿ ಅವರ ಚಾರ್ಮ್​ ಹೆಚ್ಚಿತು.

ಪ್ರತಿ ಸಿನಿಮಾದಲ್ಲೂ ರಾಜಮೌಳಿ ಅವರು ಹೊಸ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸುತ್ತಲೇ ಸಾಗುತ್ತಿದ್ದಾರೆ. ‘ಬಾಹುಬಲಿ’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿತು. ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರ ಕೂಡ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಮಾಯಿ ಮಾಡಿ ಸೈ ಎನಿಸಿಕೊಂಡಿತು. ಹೀಗೆ ‘ಸ್ಟೂಡೆಂಟ್​ ನಂ.1’ ಚಿತ್ರದಿಂದ ಶುರುವಾದ ರಾಜಮೌಳಿ ಅವರ ಜರ್ನಿ ಇಂದಿಗೂ ಯಶಸ್ವಿಯಾಗಿ ಸಾಗುತ್ತಿದೆ.

ಮುಂದಿನ ಸಿನಿಮಾಗಾಗಿ ರಾಜಮೌಳಿ ಅವರು ತಯಾರಿ ನಡೆಸುತ್ತಿದ್ದಾರೆ. ಟಾಲಿವುಡ್​ನ ‘ಪ್ರಿನ್ಸ್​’ ಮಹೇಶ್​ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದು, ಆ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Mon, 10 October 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’