AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಬದಲಾಯಿತು ರಾಜಮೌಳಿ ತಂಡ; ಪ್ರಮುಖರನ್ನೇ ಕೈಬಿಟ್ಟ ಸ್ಟಾರ್ ನಿರ್ದೇಶಕ

ರಾಜಮೌಳಿ ಚಿತ್ರಗಳಲ್ಲಿ ಸಿನಿಮಾಟೋಗ್ರಫಿಗೆ ವಿಶೇಷ ಪ್ರಾಮುಖ್ಯತೆ ಇರುತ್ತದೆ. ನಿರ್ದೇಶಕ ಆಲೋಚಿಸಿದಂತೆ ದೃಶ್ಯವನ್ನು ಸೆರೆ ಹಿಡಿಯೋದು ಒಂದು ಚಾಲೆಂಜ್. ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದುದು ಸೇಂಥಿಲ್ ಕುಮಾರ್. ಈಗ ಅವರನ್ನು ಕೈ ಬಿಡಲಾಗಿದೆ. ಇದರ ಜೊತೆ ಇನ್ನೂ ಹಲವು ಬದಲಾವಣೆಗಳು ತಂಡದಲ್ಲಿ ಆಗಿವೆ ಎನ್ನಲಾಗುತ್ತಿದೆ.

SS Rajamouli: ಬದಲಾಯಿತು ರಾಜಮೌಳಿ ತಂಡ; ಪ್ರಮುಖರನ್ನೇ ಕೈಬಿಟ್ಟ ಸ್ಟಾರ್ ನಿರ್ದೇಶಕ
ರಾಜಮೌಳಿ-ಕೀರವಾಣಿ
ರಾಜೇಶ್ ದುಗ್ಗುಮನೆ
|

Updated on:Feb 06, 2024 | 8:36 AM

Share

ಸ್ಟಾರ್ ನಿರ್ದೇಶಕ ರಾಜಮೌಳಿ (SS Rajamouli) ಮಾಡುವ ಸಿನಿಮಾಗಳಿಗೆ ಪ್ರೇಕ್ಷಕರನ್ನು ಆಕರ್ಷಿಸುವ ಶಕ್ತಿ ಇದೆ. ಅವರು ನಿರ್ದೇಶನ ಮಾಡುವ ಚಿತ್ರಗಳು ಎಲ್ಲರ ಗಮನ ಸೆಳೆಯುತ್ತವೆ. ಇದಕ್ಕೆ ಅವರ ತಾಂತ್ರಿಕ ವರ್ಗದ ಕೊಡುಗೆಯೂ ಇದೆ. ತಾಂತ್ರಿಕ ವರ್ಗದ ವಿಚಾರದಲ್ಲಿ ಅವರು ಒಂದು ಪದ್ಧತಿ ಇಟ್ಟುಕೊಂಡಿದ್ದರು. ರಾಜಮೌಳಿ ಒಂದು ಸಿನಿಮಾದಲ್ಲಿ ಯಾರದ್ದಾದರೂ ಜೊತೆ ಕೆಲಸ ಮಾಡಿ, ಅವರ ಕೆಲಸ ಇಷ್ಟ ಆಯಿತು ಎಂದರೆ ಮುಂದಿನ ಸಿನಿಮಾಗಳಿಗೆ ಅವರಿಗೇ ಅವಕಾಶ ನೀಡುತ್ತಿದ್ದರು. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಈ ಪದ್ಧತಿಯನ್ನು ಅವರು ಕೈ ಬಿಡಲು ಮುಂದಾಗಿದ್ದಾರೆ. ಈ ಬೆಳವಣಿಗೆ ಅಚ್ಚರಿ ತಂದಿದೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಒಟ್ಟಾಗಿ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಸ್ಕ್ರಿಪ್ಟ್ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಮಹೇಶ್ ಬಾಬು ಅವರು ಈಗಾಗಲೇ ವಿದೇಶಕ್ಕೆ ತೆರಳಿ ವಿಶೇಷ ತರಬೇತಿ ಪಡೆದು ಬಂದಿದ್ದಾರೆ. ರಾಜಮೌಳಿ ಅವರು ಶೀಘ್ರವೇ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಈ ಸಿನಿಮಾ ಕೆಲಸಕ್ಕೂ ಮೊದಲು ಅವರು ಹೊಸ ತಾಂತ್ರಿಕವರ್ಗವನ್ನು ಹುಡುಕಿಕೊಂಡಿದ್ದಾರೆ.

ರಾಜಮೌಳಿ ಸಿನಿಮಾಗಳಲ್ಲಿ ಛಾಯಾಗ್ರಹಣಕ್ಕೆ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಅವರು ಆಲೋಚಿಸಿದಂತೆ ದೃಶ್ಯವನ್ನು ಸೆರೆ ಹಿಡಿಯೋದು ಒಂದು ಚಾಲೆಂಜ್. ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದುದು ಸೇಂಥಿಲ್ ಕುಮಾರ್. ಈಗ ಅವರನ್ನು ಕೈ ಬಿಡಲಾಗಿದೆ. ಅವರ ಬದಲು ಪಿಎಸ್​ ವಿನೋದ್ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ರಾಜಮೌಳಿ ಸಿನಿಮಾಗಳಿಗೆ ಛಾಯಾಗ್ರಹಣದ ಜೊತೆ ವಿಎಫ್​ಎಕ್ಸ್ ಕೂಡ ಮುಖ್ಯ. ಈ ಮೊದಲು ಶ್ರೀನಿವಾಸ್ ಮೋಹನ್ ಅವರು ಇದರ ಮೇಲುಸ್ತುವಾರಿ ನಿರ್ವಹಿಸುತ್ತಿದ್ದರು. ಈಗ ಈ ಜವಾಬ್ದಾರಿ ಕಮಲ್ ಕಣ್ಣನ್ ಪಾಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: SSMB 29: ರಾಜಮೌಳಿ ಜೊತೆಗಿನ ಚಿತ್ರಕ್ಕೆ ಮಹೇಶ್ ಬಾಬು ಪಡೆಯುತ್ತಿರೋ ಸಂಭಾವನೆ ಎಷ್ಟು?

ರಾಜಮೌಳಿ ಸಿನಿಮಾಗಳನ್ನು ಶ್ರೀಕರ್ ಪ್ರಸಾದ್ ಎಡಿಟ್ ಮಾಡುತ್ತಿದ್ದರು. ಪ್ರೊಡಕ್ಷನ್ ಡಿಸೈನರ್ ಆಗಿ ಸಾಬು ಸೈರಿಲ್ ಕೆಲಸ ಮಾಡುತ್ತಿದ್ದರು. ಇವರ ಸ್ಥಾನಕ್ಕೆ ಬೇರೆಯವರು ಬರಲಿದ್ದಾರೆ. ಅವರ ಹುಡುಕಾಟದಲ್ಲಿ ರಾಜಮೌಳಿ ಇದ್ದಾರೆ. ರಾಜಮೌಳಿ ಹಾಗೂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಹಲವು ವರ್ಷಗಳಿಂದ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಕಾಂಬಿನೇಷನ್ ಮುಂದುವರಿಯಲಿದೆ. ರಾಜಮೌಳಿ ಹಾಗೂ ಮಹೇಶ್ ಬಾಬು ಸಿನಿಮಾಗೆ ಕೀರವಾಣಿ ಸಂಗೀತ ಸಂಯೋಜನೆ ಇರಲಿದೆ. ‘ಆರ್​ಆರ್​ಆರ್’ ಸಿನಿಮಾದ ಸಂಗೀತ ಸಂಯೋಜನೆಗೆ ಕೀರವಾಣಿ ಆಸ್ಕರ್ ಪಡೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:59 am, Tue, 6 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್