AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಥವಾ ಹೈದರಾಬಾದ್: ‘ಸಲಾರ್’ ಎಲ್ಲಿ ನೋಡ್ತಾರೆ ರಾಜಮೌಳಿ? ಗೊಂದಲಕ್ಕೆ ಕಾರಣವೇನು?

SS Rajamouli: ನಿರ್ದೇಶಕ ಎಸ್​ಎಸ್ ರಾಜಮೌಳಿಗೆ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾವನ್ನು ಎಲ್ಲಿ ನೋಡಬೇಕು ಎಂಬ ಗೊಂದಲ ಶುರುವಾಗಿದೆ. ಅದಕ್ಕೆ ಕಾರಣವೂ ಇದೆ.

ಬೆಂಗಳೂರು ಅಥವಾ ಹೈದರಾಬಾದ್: ‘ಸಲಾರ್’ ಎಲ್ಲಿ ನೋಡ್ತಾರೆ ರಾಜಮೌಳಿ? ಗೊಂದಲಕ್ಕೆ ಕಾರಣವೇನು?
ಮಂಜುನಾಥ ಸಿ.
|

Updated on:Dec 21, 2023 | 7:29 PM

Share

ಪ್ರಭಾಸ್ (Prabhas) ನಟನೆಯ ‘ಸಲಾರ್’ (Salaar) ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳು ಬಾಕಿ ಇವೆ. 5 ಗಂಟೆಯಿಂದಲೇ ಸಿನಿಮಾದ ಮೊದಲ ಶೋಗಳು ಹಲವೆಡೆ ಆರಂಭವಾಗಲಿದೆ. ಪ್ರಭಾಸ್ ಅಭಿಮಾನಿಗಳು, ಪ್ರಶಾಂತ್ ನೀಲ್ ಅಭಿಮಾನಿಗಳು, ಪೃಥ್ವಿರಾಜ್ ಸುಕುಮಾರನ್ ಅಭಿಮಾನಿಗಳು ಸಿನಿಮಾ ನೋಡಲು ಕಾತರರಾಗಿದ್ದಾರೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಮೊದಲ ದಿನ ಮೊದಲ ಶೋ ನೋಡಲು ಕಾತರರಾಗಿದ್ದಾರೆ ಅದರಲ್ಲಿ ನಿರ್ದೇಶಕ ರಾಜಮೌಳಿ ಸಹ ಒಬ್ಬರು. ಆದರೆ ‘ಸಲಾರ್’ ಸಿನಿಮಾವನ್ನು ಬೆಂಗಳೂರಿನಲ್ಲಿ ನೋಡಬೇಕಾ? ಅಥವಾ ಹೈದರಾಬಾದ್​ನಲ್ಲಿ ನೋಡಬೇಕಾ ಎಂಬ ಗೊಂದಲ ಸೃಷ್ಟಿಯಾಗಿದೆ. ಅದಕ್ಕೆ ಕಾರಣವೂ ಇದೆ…

ಪ್ರಭಾಸ್​ರ ಯಾವುದೇ ಸಿನಿಮಾ ಬಿಡುಗಡೆ ಆದರೂ ಸಹ ರಾಜಮೌಳಿ ಅದನ್ನು ಮೊದಲ ದಿನವೇ ನೋಡುತ್ತಾರಂತೆ, ಅವರು ಮಾತ್ರವಲ್ಲ ಅವರ ಇಡೀ ಕುಟುಂಬವನ್ನು ಒಟ್ಟಿಗೆ ಹೋಗಿ ಪ್ರಭಾಸ್​ರ ಸಿನಿಮಾವನ್ನು ಮೊದಲ ದಿನ ನೋಡುತ್ತಾರೆ. ಹಲವು ವರ್ಷಗಳಿಂದಲೂ ಈ ಸಂಪ್ರದಾಯ ಚಾಲ್ತಿಯಲ್ಲಿದೆ. ಆದರೆ ಈ ಬಾರಿ ಅದು ಮುರಿಯುವ ಸಾಧ್ಯತೆ ಇದೆ. ರಾಜಮೌಳಿ, ಇತ್ತೀಚೆಗಷ್ಟೆ ಪ್ರಭಾಸ್, ಪ್ರಶಾಂತ್ ನೀಲ್ ಹಾಗೂ ಪೃಥ್ವಿರಾಜ್ ಸುಕುಮಾರನ್ ಅವರನ್ನು ಸಂದರ್ಶನ ಮಾಡಿದ್ದು, ಸಂದರ್ಶನದಲ್ಲಿ ಈ ವಿಷಯ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:‘ಕೆಜಿಎಫ್’ ಬಗ್ಗೆ ವ್ಯಂಗ್ಯವಾಡಿದ್ದ ನಿರ್ದೇಶಕ ಈಗ ಪ್ರಭಾಸ್ ಅಭಿಮಾನಿಗಳಿಗೂ ವಿಲನ್

ಪ್ರಭಾಸ್​ರ ಯಾವುದೇ ಸಿನಿಮಾ ಬಿಡುಗಡೆ ಆದರೂ ನಮ್ಮ ಇಡೀ ಕುಟುಂಬ ಒಟ್ಟಿಗೆ ಹೋಗಿ ಮೊದಲ ದಿನವೇ ಮೊದಲ ಶೋ ನೋಡುವುದು ವಾಡಿಕೆ. ಆದರೆ ನನ್ನ ಪತ್ನಿ ಬೆಂಗಳೂರಿನಲ್ಲಿದ್ದಾರೆ, ಆಕೆ ಹೈದರಾಬಾದ್​ಗೆ ಬರುವುದು ರಿಲೀಸ್ ದಿನ ಸಂಜೆ, ಅಲ್ಲಿಯವರೆಗೆ ಕಾಯಲಾ? ಅಥವಾ ಎಲ್ಲರನ್ನೂ ಕರೆದುಕೊಂಡು ಬೆಂಗಳೂರಿಗೆ ಹೋಗಿ ಅಲ್ಲಿಯೇ ಸಿನಿಮಾ ನೋಡಲಾ ಎಂಬ ಗೊಂದಲ ಪ್ರಾರಂಭವಾಗಿದೆ. ಏನು ಮಾಡುವುದು ಎಂದು ಇನ್ನೂ ನಿರ್ಣಯ ಮಾಡಿಲ್ಲ ಎಂದಿದ್ದಾರೆ.

‘ನಿಮ್ಮ ಮಗ ಕಾರ್ತಿಕೇಯ ಮಾತ್ರ ನಿಮಗೆ ಕಾಯುವುದಿಲ್ಲ ಬಿಡಿ, ಅವನು ಮೊದಲ ಶೋ ನೋಡಿಕೊಂಡು ಬಿಡುತ್ತಾನೆ’ ಎಂದು ಪ್ರಭಾಸ್ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ರಾಜಮೌಳಿ, ‘‘ಹೌದು, ಅವನು ಈ ಬಾರಿ ಕಾಯುವುದಿಲ್ಲ ಅನಿಸುತ್ತೆ, ಬೆನ್ನಿಗೆ ಚೂರಿ ಹಾಕುವವನು’’ ಎಂದು ತಮಾಷೆಯಾಗಿ ಹೇಳಿದ್ದಾರೆ ರಾಜಮೌಳಿ. ಅಂದಹಾಗೆ, ‘ಸಲಾರ್’ ಸಿನಿಮಾದ ಮೊದಲ ಟಿಕೆಟ್ ಅನ್ನು ಹೊಂಬಾಳೆ ಫಿಲ್ಮ್ಸ್​ನವರು ರಾಜಮೌಳಿಗೆ ನೀಡಿದ್ದಾರೆ. ಗೌರವಾರ್ಥ ಈ ಟಿಕೆಟ್ ಅನ್ನು ರಾಜಮೌಳಿಗೆ ನೀಡಲಾಗಿದೆ.

‘ಸಲಾರ್’ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಸಿನಿಮಾದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರ್, ಶ್ರುತಿ ಹಾಸನ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಜಗಪತಿ ಬಾಬು, ಕನ್ನಡಿಗರಾದ ಗರುಡ ರಾಮಚಂದ್ರ, ಗುರುಸ್ವಾಮಿ, ರತ್ನನ್ ಪ್ರಪಂಚ ಖ್ಯಾತಿಯ ಪಂಜು ಅವರುಗಳು ಸಹ ಇದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Thu, 21 December 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ