AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ

Academy Members: ‘ಆರ್​ಆರ್​ಆರ್​’ ಚಿತ್ರದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಆಸ್ಕರ್​ ಸದಸ್ಯತ್ವ ಸಿಕ್ಕಿದೆ. ತಮ್ಮ ತಂಡದವರಿಗೆ ಇಂಥ ಗೌರವ ಸಿಕ್ಕಿರುವುದು ನಿರ್ದೇಶಕ ರಾಜಮೌಳಿ ಅವರಿಗೆ ಹೆಮ್ಮೆ ತಂದಿದೆ.

SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ
ಎಸ್​ಎಸ್​ ರಾಜಮೌಳಿ
ಮದನ್​ ಕುಮಾರ್​
|

Updated on: Jun 30, 2023 | 11:51 AM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ (RRR Movie) ಸಿನಿಮಾ ಮಾಡಿದ ಸಾಧನೆ ದೊಡ್ಡದು. ಮೊದಲ ಬಾರಿಗೆ ಆಸ್ಕರ್​ ಪ್ರಶಸ್ತಿ ಪಡೆದ ಭಾರತೀಯ ಸಿನಿಮಾ (ನಾಟು ನಾಟು ಹಾಡು) ಎಂಬ ಖ್ಯಾತಿ ಈ ಚಿತ್ರಕ್ಕೆ ಸಲ್ಲುತ್ತದೆ. ಆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತದ ಸಿನಿಮಾಗಳು ಮಿಂಚುವಂತೆ ಮಾಡಿದ ನಿರ್ದೇಶಕರಲ್ಲಿ ರಾಜಮೌಳಿ ಪ್ರಮುಖರು. ‘ಆರ್​ಆರ್​ಆರ್​’ ಚಿತ್ರದಲ್ಲಿ ಕೆಲಸ ಮಾಡಿದ ನಟರು ಮತ್ತು ತಂತ್ರಜ್ಞರಿಗೆ ಆಸ್ಕರ್​ನಿಂದ (Oscars) ವಿಶೇಷ ಗೌರವ ಸಂದಿದೆ. ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ಎಂಎಂ ಕೀರವಾಣಿ ಮುಂತಾದವರಿಗೆ ಆಸ್ಕರ್​ ಸದಸ್ಯತ್ವ ನೀಡಲಾಗಿದೆ. ಇವರೆಲ್ಲರಿಗೂ ರಾಜಮೌಳಿ (SS Rajamouli) ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

‘ಆರ್​ಆರ್​ಆರ್​’ ಸಿನಿಮಾ ತೆರೆಕಂಡು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಹಾಗಿದ್ದರೂ ಕೂಡ ಆ ಸಿನಿಮಾದ ಹವಾ ಇನ್ನೂ ಕಡಿಮೆ ಆಗಿಲ್ಲ. ಇಂದಿಗೂ ಆ ಚಿತ್ರದ ಕುರಿತು ಚರ್ಚೆ ನಡೆಯುತ್ತಿದೆ. ಈ ಸಿನಿಮಾದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಆಸ್ಕರ್​ ಸದಸ್ಯತ್ವ ಸಿಕ್ಕಿರುವುದೇ ಇದಕ್ಕೆ ಸಾಕ್ಷಿ. ತಮ್ಮ ತಂಡದವರಿಗೆ ಇಂಥ ಗೌರವ ಸಿಕ್ಕಿರುವುದು ನಿರ್ದೇಶಕ ರಾಜಮೌಳಿ ಅವರಿಗೆ ಹೆಮ್ಮೆ ತಂದಿದೆ. ನಿರ್ದೇಶಕರಾದ ಕರಣ್​ ಜೋಹರ್​, ಮಣಿರತ್ನಂ ಸೇರಿದಂತೆ ಇನ್ನೂ ಕೆಲವರಿಗೆ ಆಸ್ಕರ್​ ಸದಸ್ಯತ್ವ ನೀಡಲಾಗಿದೆ. ಅವರ ಅಭಿಮಾನಿಗಳು ಇದರಿಂದ ಖುಷಿ ಆಗಿದ್ದಾರೆ.

‘ಈ ವರ್ಷ ಆಸ್ಕರ್​ ಸದಸ್ಯತ್ವ ಪಡೆಯಲು ನಮ್ಮ ಆರ್​ಆರ್​ಆರ್​ ಸಿನಿಮಾ ತಂಡದ 6 ಜನರಿಗೆ ಆಹ್ವಾನ ಬಂದಿರುವುದಕ್ಕೆ ನನಗೆ ತುಂಬ ಹೆಮ್ಮೆ ಎನಿಸುತ್ತಿದೆ. ತಾರಕ್​, ಚರಣ್​, ಪೆದ್ದಣ್ಣ, ಸಾಬು ಸರ್​, ಸೇಂಥಿಲ್​ ಮತ್ತು ಚಂದ್ರಬೋಸ್​ ಅವರಿಗೆ ಅಭಿನಂದನೆಗಳು. ಈ ವರ್ಷ ಆಸ್ಕರ್​ ಸದಸ್ಯಕ್ಕೆ ಆಹ್ವಾನಿತರಾಗಿರುವ ಭಾರತೀಯ ಚಿತ್ರರಂಗದ ಇತರರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ರಾಜಮೌಳಿ ಅವರು ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ‘ಮಗಧೀರ’ ಸಿನಿಮಾದಿಂದ ಅವರ ಹೆಸರು ಅಕ್ಕಪಕ್ಕದ ರಾಜ್ಯಗಳಲ್ಲಿ ಪಸರಿಸಿತು. ‘ಬಾಹುಬಲಿ’ ಚಿತ್ರದಿಂದ ಅವರು ಪ್ಯಾನ್​ ಇಂಡಿಯಾ ನಿರ್ದೇಶಕನಾಗಿ ಬೆಳೆದರು. ‘ಆರ್​ಆರ್​ಆರ್​’ ತೆರೆಕಂಡ ನಂತರ ಅವರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದರು. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ಸ್ಟಾರ್​ ನಟರು ಕಾಯುತ್ತಿದ್ದಾರೆ. ಮಹೇಶ್​ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡಲಿದ್ದು, ಆ ಚಿತ್ರದ ಸ್ಕ್ರಿಪ್ಟ್​ ಸಿದ್ಧವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ