AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

‘ಸರ್ಕಾರು ವಾರಿ ಪಾಟ' ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌' ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿದೆ.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ
ಪವನ್​ ಕಲ್ಯಾಣ್​-ರಾಜಮೌಳಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 21, 2021 | 10:04 PM

Share

ತೆಲುಗಿನಲ್ಲಿ ಸಿದ್ಧಗೊಂಡಿರುವ ‘ಭೀಮ್ಲಾ ನಾಯಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪವನ್​ ಕಲ್ಯಾಣ್​​ ಪೊಲೀಸ್​ ಆಗಿ ಕಾಣಿಸಿಕೊಂಡರೆ, ರಾನಾ ದಗ್ಗುಬಾಟಿ ಮಾಜಿ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸಂಕ್ರಾಂತಿ ರೇಸ್​ನಲ್ಲಿತ್ತು. ಆದರೆ, ಈಗ ಚಿತ್ರ ಇದರಿಂದ ಹಿಂದೆ ಸರಿದಿದೆ. ಇದಕ್ಕಾಗಿ ‘ಭೀಮ್ಲಾ ನಾಯಕ್​’ ನಿರ್ಮಾಪಕ ನಾಗ ವಂಶಿ ಅವರು ಪವನ್​ ಕಲ್ಯಾಣ್​ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

‘ಎಲ್ಲಾ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಇದು ನನ್ನ ಕೈಯಲ್ಲಿ ಇರಲಿಲ್ಲ. ನಮ್ಮ ನಾಯಕ ಪವನ್ ಕಲ್ಯಾಣ್ ಅವರ ಮಾತುಗಳನ್ನು ನಾನು ಪಾಲಿಸಬೇಕಿತ್ತು. ಅವರು ಯಾವಾಗಲೂ ಈ ಉದ್ಯಮದ ಕಲ್ಯಾಣಕ್ಕೆ ಮಹತ್ವ ಕೊಡುತ್ತಾರೆ. ಈ ಶಿವರಾತ್ರಿಯಲ್ಲಿ ಒಂದು ಬಿರುಗಾಳಿ ಬರಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಫೆಬ್ರವರಿ 25ರಂದು ಭೀಮ್ಲಾ ನಾಯಕ್’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸಿನಿಮಾ ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಾಕ್ಸ್​ ಆಫೀಸ್​ ಕ್ಲ್ಯಾಶ್​ ತಪ್ಪಿಸಿದ್ದಕ್ಕೆ ರಾಜಮೌಳಿ ಖುಷಿಪಟ್ಟಿದ್ದು, ಪವನ್​ ಕಲ್ಯಾಣ್​ ತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌’ ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿ, ‘ಆರ್‌ಆರ್‌ಆರ್’ ಮತ್ತು ‘ರಾಧೆ ಶ್ಯಾಮ್‌’ ಸಿನಿಮಾಗಳ ಜೊತೆಗೆ ಆಗುತ್ತಿದ್ದ ಬಾಕ್ಸ್ ಆಫೀಸ್‌ ಕ್ಲ್ಯಾಶ್​​ಅನ್ನು  ತಪ್ಪಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭಿಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!