AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

‘ಸರ್ಕಾರು ವಾರಿ ಪಾಟ' ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌' ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿದೆ.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ
ಪವನ್​ ಕಲ್ಯಾಣ್​-ರಾಜಮೌಳಿ
TV9 Web
| Edited By: |

Updated on: Dec 21, 2021 | 10:04 PM

Share

ತೆಲುಗಿನಲ್ಲಿ ಸಿದ್ಧಗೊಂಡಿರುವ ‘ಭೀಮ್ಲಾ ನಾಯಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪವನ್​ ಕಲ್ಯಾಣ್​​ ಪೊಲೀಸ್​ ಆಗಿ ಕಾಣಿಸಿಕೊಂಡರೆ, ರಾನಾ ದಗ್ಗುಬಾಟಿ ಮಾಜಿ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸಂಕ್ರಾಂತಿ ರೇಸ್​ನಲ್ಲಿತ್ತು. ಆದರೆ, ಈಗ ಚಿತ್ರ ಇದರಿಂದ ಹಿಂದೆ ಸರಿದಿದೆ. ಇದಕ್ಕಾಗಿ ‘ಭೀಮ್ಲಾ ನಾಯಕ್​’ ನಿರ್ಮಾಪಕ ನಾಗ ವಂಶಿ ಅವರು ಪವನ್​ ಕಲ್ಯಾಣ್​ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

‘ಎಲ್ಲಾ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಇದು ನನ್ನ ಕೈಯಲ್ಲಿ ಇರಲಿಲ್ಲ. ನಮ್ಮ ನಾಯಕ ಪವನ್ ಕಲ್ಯಾಣ್ ಅವರ ಮಾತುಗಳನ್ನು ನಾನು ಪಾಲಿಸಬೇಕಿತ್ತು. ಅವರು ಯಾವಾಗಲೂ ಈ ಉದ್ಯಮದ ಕಲ್ಯಾಣಕ್ಕೆ ಮಹತ್ವ ಕೊಡುತ್ತಾರೆ. ಈ ಶಿವರಾತ್ರಿಯಲ್ಲಿ ಒಂದು ಬಿರುಗಾಳಿ ಬರಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಫೆಬ್ರವರಿ 25ರಂದು ಭೀಮ್ಲಾ ನಾಯಕ್’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸಿನಿಮಾ ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಾಕ್ಸ್​ ಆಫೀಸ್​ ಕ್ಲ್ಯಾಶ್​ ತಪ್ಪಿಸಿದ್ದಕ್ಕೆ ರಾಜಮೌಳಿ ಖುಷಿಪಟ್ಟಿದ್ದು, ಪವನ್​ ಕಲ್ಯಾಣ್​ ತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌’ ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿ, ‘ಆರ್‌ಆರ್‌ಆರ್’ ಮತ್ತು ‘ರಾಧೆ ಶ್ಯಾಮ್‌’ ಸಿನಿಮಾಗಳ ಜೊತೆಗೆ ಆಗುತ್ತಿದ್ದ ಬಾಕ್ಸ್ ಆಫೀಸ್‌ ಕ್ಲ್ಯಾಶ್​​ಅನ್ನು  ತಪ್ಪಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭಿಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ