AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

‘ಸರ್ಕಾರು ವಾರಿ ಪಾಟ' ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌' ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿದೆ.

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ
ಪವನ್​ ಕಲ್ಯಾಣ್​-ರಾಜಮೌಳಿ
TV9 Web
| Edited By: |

Updated on: Dec 21, 2021 | 10:04 PM

Share

ತೆಲುಗಿನಲ್ಲಿ ಸಿದ್ಧಗೊಂಡಿರುವ ‘ಭೀಮ್ಲಾ ನಾಯಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪವನ್​ ಕಲ್ಯಾಣ್​​ ಪೊಲೀಸ್​ ಆಗಿ ಕಾಣಿಸಿಕೊಂಡರೆ, ರಾನಾ ದಗ್ಗುಬಾಟಿ ಮಾಜಿ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸಂಕ್ರಾಂತಿ ರೇಸ್​ನಲ್ಲಿತ್ತು. ಆದರೆ, ಈಗ ಚಿತ್ರ ಇದರಿಂದ ಹಿಂದೆ ಸರಿದಿದೆ. ಇದಕ್ಕಾಗಿ ‘ಭೀಮ್ಲಾ ನಾಯಕ್​’ ನಿರ್ಮಾಪಕ ನಾಗ ವಂಶಿ ಅವರು ಪವನ್​ ಕಲ್ಯಾಣ್​ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

‘ಎಲ್ಲಾ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಇದು ನನ್ನ ಕೈಯಲ್ಲಿ ಇರಲಿಲ್ಲ. ನಮ್ಮ ನಾಯಕ ಪವನ್ ಕಲ್ಯಾಣ್ ಅವರ ಮಾತುಗಳನ್ನು ನಾನು ಪಾಲಿಸಬೇಕಿತ್ತು. ಅವರು ಯಾವಾಗಲೂ ಈ ಉದ್ಯಮದ ಕಲ್ಯಾಣಕ್ಕೆ ಮಹತ್ವ ಕೊಡುತ್ತಾರೆ. ಈ ಶಿವರಾತ್ರಿಯಲ್ಲಿ ಒಂದು ಬಿರುಗಾಳಿ ಬರಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಫೆಬ್ರವರಿ 25ರಂದು ಭೀಮ್ಲಾ ನಾಯಕ್’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸಿನಿಮಾ ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಾಕ್ಸ್​ ಆಫೀಸ್​ ಕ್ಲ್ಯಾಶ್​ ತಪ್ಪಿಸಿದ್ದಕ್ಕೆ ರಾಜಮೌಳಿ ಖುಷಿಪಟ್ಟಿದ್ದು, ಪವನ್​ ಕಲ್ಯಾಣ್​ ತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾವನ್ನು ಈ ಹಿಂದೆಯೇ ಏ.1ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ‘ಭೀಮ್ಲಾ ನಾಯಕ್‌’ ತಂಡದವರು ಕೂಡ ತಮ್ಮ ಸಿನಿಮಾವನ್ನು ಫೆ.25ಕ್ಕೆ ಮುಂದೂಡಿಕೆ ಮಾಡಿ, ‘ಆರ್‌ಆರ್‌ಆರ್’ ಮತ್ತು ‘ರಾಧೆ ಶ್ಯಾಮ್‌’ ಸಿನಿಮಾಗಳ ಜೊತೆಗೆ ಆಗುತ್ತಿದ್ದ ಬಾಕ್ಸ್ ಆಫೀಸ್‌ ಕ್ಲ್ಯಾಶ್​​ಅನ್ನು  ತಪ್ಪಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭಿಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್