AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ

ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ಸುದೀಪ್ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
ರಾಜಮೌಳಿ-ಸುದೀಪ್​
TV9 Web
| Edited By: |

Updated on:Jul 27, 2022 | 10:02 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರ ಸೃಷ್ಟಿಸಿರುವ ಹೈಪ್ ತುಂಬಾನೇ ದೊಡ್ಡ ಮಟ್ಟದಲ್ಲಿದೆ. ಈಗಾಗಲೇ ಹಲವು ಶೋಗಳು ಸೋಲ್ಡ್​ಔಟ್ ಆಗಿದೆ. 3ಡಿ ಅವತರಣಿಕೆಗೆ ಹೆಚ್ಚು ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಸೆಲೆಬ್ರಿಟಿಗಳು ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ನಂತಹ ಹಿಟ್ ಚಿತ್ರಗಳನ್ನು ನೀಡಿದ ತೆಲುಗು ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಕೂಡ ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ರಾಜಮೌಳಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಮಾಡಿದ್ದ ನೆಗೆಟಿವ್ ಶೇಡ್​​ನ​ ಪಾತ್ರ ಸಾಕಷ್ಟು ಹೈಲೈಟ್ ಆಗಿತ್ತು. ಆ ಬಳಿಕ ‘ಬಾಹುಬಲಿ’ ಚಿತ್ರದಲ್ಲಿ ಸುದೀಪ್ ಒಂದು ಅತಿಥಿ ಪಾತ್ರ ಮಾಡಿದ್ದರು. ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಪ್ರಯೋಗಗಳನ್ನು ಮಾಡುವಲ್ಲಿ ಮತ್ತು ಸವಾಲುಗಳನ್ನು ಸ್ವೀಕರಿಸುವಲ್ಲಿ ಸುದೀಪ್ ಯಾವಾಗಲೂ ಮೊದಲಿಗರು. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಅವರು ಏನು ಮಾಡಿದ್ದಾರೆ ಎಂಬುದನ್ನು ನೋಡಲು ಕಾತುರನಾಗಿದ್ದೇನೆ. ವಿಶ್ಯುವಲ್ಸ್​ ಅದ್ಭುತವಾಗಿದೆ. ಸುದೀಪ್​ ಹಾಗೂ ಅವರ ತಂಡಕ್ಕೆ ನನ್ನ ಶುಭಾಶಯ’ ಎಂದು ರಾಜಮೌಳಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಪ್ರೀ-ರಿಲೀಸ್​ನಲ್ಲಿ ಮಗಳಿಗಾಗಿ ಸುಮಧುರವಾಗಿ ಹಾಡು ಹಾಡಿದ ಸುದೀಪ್​; ಇಲ್ಲಿದೆ ವಿಡಿಯೋ

‘ವಿಕ್ರಾಂತ್ ರೋಣ’ ಸಿನಿಮಾ ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ರಾಜಮೌಳಿ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅವರು ಒಂದು ಟ್ವೀಟ್​ನಿಂದ ‘ವಿಕ್ರಾಂತ್​ ರೋಣ’ ತಂಡಕ್ಕೆ ಹೊಸ ಬಲ ಸಿಕ್ಕಂತೆ ಆಗಿದೆ.

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಂಜಾನೆ 6 ಗಂಟೆಯಿಂದಲೇ ಶೋಗಳು ಪ್ರದರ್ಶನ ಕಾಣುತ್ತಿದೆ.

Published On - 10:00 pm, Wed, 27 July 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು