AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ

ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ಸುದೀಪ್ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
ರಾಜಮೌಳಿ-ಸುದೀಪ್​
TV9 Web
| Edited By: |

Updated on:Jul 27, 2022 | 10:02 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರ ಸೃಷ್ಟಿಸಿರುವ ಹೈಪ್ ತುಂಬಾನೇ ದೊಡ್ಡ ಮಟ್ಟದಲ್ಲಿದೆ. ಈಗಾಗಲೇ ಹಲವು ಶೋಗಳು ಸೋಲ್ಡ್​ಔಟ್ ಆಗಿದೆ. 3ಡಿ ಅವತರಣಿಕೆಗೆ ಹೆಚ್ಚು ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಸೆಲೆಬ್ರಿಟಿಗಳು ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ನಂತಹ ಹಿಟ್ ಚಿತ್ರಗಳನ್ನು ನೀಡಿದ ತೆಲುಗು ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಕೂಡ ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ರಾಜಮೌಳಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಮಾಡಿದ್ದ ನೆಗೆಟಿವ್ ಶೇಡ್​​ನ​ ಪಾತ್ರ ಸಾಕಷ್ಟು ಹೈಲೈಟ್ ಆಗಿತ್ತು. ಆ ಬಳಿಕ ‘ಬಾಹುಬಲಿ’ ಚಿತ್ರದಲ್ಲಿ ಸುದೀಪ್ ಒಂದು ಅತಿಥಿ ಪಾತ್ರ ಮಾಡಿದ್ದರು. ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಪ್ರಯೋಗಗಳನ್ನು ಮಾಡುವಲ್ಲಿ ಮತ್ತು ಸವಾಲುಗಳನ್ನು ಸ್ವೀಕರಿಸುವಲ್ಲಿ ಸುದೀಪ್ ಯಾವಾಗಲೂ ಮೊದಲಿಗರು. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಅವರು ಏನು ಮಾಡಿದ್ದಾರೆ ಎಂಬುದನ್ನು ನೋಡಲು ಕಾತುರನಾಗಿದ್ದೇನೆ. ವಿಶ್ಯುವಲ್ಸ್​ ಅದ್ಭುತವಾಗಿದೆ. ಸುದೀಪ್​ ಹಾಗೂ ಅವರ ತಂಡಕ್ಕೆ ನನ್ನ ಶುಭಾಶಯ’ ಎಂದು ರಾಜಮೌಳಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಪ್ರೀ-ರಿಲೀಸ್​ನಲ್ಲಿ ಮಗಳಿಗಾಗಿ ಸುಮಧುರವಾಗಿ ಹಾಡು ಹಾಡಿದ ಸುದೀಪ್​; ಇಲ್ಲಿದೆ ವಿಡಿಯೋ

‘ವಿಕ್ರಾಂತ್ ರೋಣ’ ಸಿನಿಮಾ ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ರಾಜಮೌಳಿ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅವರು ಒಂದು ಟ್ವೀಟ್​ನಿಂದ ‘ವಿಕ್ರಾಂತ್​ ರೋಣ’ ತಂಡಕ್ಕೆ ಹೊಸ ಬಲ ಸಿಕ್ಕಂತೆ ಆಗಿದೆ.

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಂಜಾನೆ 6 ಗಂಟೆಯಿಂದಲೇ ಶೋಗಳು ಪ್ರದರ್ಶನ ಕಾಣುತ್ತಿದೆ.

Published On - 10:00 pm, Wed, 27 July 22

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!