AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್​ನಲ್ಲಿ ‘ಆರ್​ಆರ್​ಆರ್​’ ಸಾಧನೆ; ಒಂದೇ ವೇದಿಕೆಯಲ್ಲಿ ನಾಲ್ಕು ಪ್ರಶಸ್ತಿ ಬಾಚಿದ ರಾಜಮೌಳಿ ಸಿನಿಮಾ

ಪ್ರಶಸ್ತಿ ಗೆದ್ದ ಖುಷಿಯಲ್ಲಿ ರಾಮ್ ಚರಣ್ ಅವರನ್ನು ವೇದಿಕೆ ಮೇಲೆ ಕರೆತಂದರು ರಾಜಮೌಳಿ. ಈ ವೇಳೆ ಮಾತನಾಡಿದ ರಾಮ್ ಚರಣ್ ಒಳ್ಳೊಳ್ಳೆಯ ಸಿನಿಮಾ ಮಾಡುವ ಭರವಸೆಯನ್ನು ನೀಡಿದರು.

ರಾಜೇಶ್ ದುಗ್ಗುಮನೆ
|

Updated on:Feb 25, 2023 | 11:33 AM

Share

‘ಆರ್​ಆರ್​ಆರ್​’ ಸಿನಿಮಾ (RRR Movie) ಭಾರತೀಯ ಚಿತ್ರರಂಗದಲ್ಲಿ ಹೊಸ ಹೊಸ ಸಾಧನೆ ಮಾಡುತ್ತಿದೆ. ಈ ಚಿತ್ರ ಈಗ ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಫಿಲ್ಮ್​ ಅವಾರ್ಡ್ಸ್​ನಲ್ಲಿ ನಾಲ್ಕು ಪ್ರಶಸ್ತಿ ಬಾಚಿಕೊಂಡಿದೆ. ಹಾಲಿವುಡ್​ ಚಿತ್ರಗಳನ್ನು ಹಿಂದಿಕ್ಕಿ ಸಿನಿಮಾ ಅವಾರ್ಡ್ ಗೆದ್ದಿರೋದು ವಿಶೇಷ. ಪ್ರಶಸ್ತಿ ಗೆದ್ದ ಖುಷಿಯಲ್ಲಿ ರಾಜಮೌಳಿ (SS Rajamoli) ಅವರು ವೇದಿಕೆ ಮೇಲೆ ಸಂತಸ ಹಂಚಿಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಆಸ್ಕರ್ ಅವಾರ್ಡ್​ ಮೇಲೆ ಭಾರತೀಯರ ದೃಷ್ಟಿ ನೆಟ್ಟಿದೆ.

ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಫಿಲ್ಮ್​ ಅವಾರ್ಡ್ಸ್​ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು. ಇಲ್ಲಿ, ಅತ್ಯುತ್ತಮ ಆ್ಯಕ್ಷನ್ ಸಿನಿಮಾ, ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ, ಅತ್ಯುತ್ತಮ ಒರಿಜಿನಲ್ ಹಾಡು ಹಾಗೂ ಅತ್ಯುತ್ತಮ ಸ್ಟಂಟ್ಸ್​ ವಿಭಾಗದಲ್ಲಿ ‘ಆರ್​ಆರ್​ಆರ್​’ ಚಿತ್ರ ಗೆಲುವು ಕಂಡಿದೆ. ಭಾರತ ಚಿತ್ರರಂಗದ ಪಾಲಿಗೆ ಈ ಅವಾರ್ಡ್ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಅತ್ಯುತ್ತಮ ಆ್ಯಕ್ಷನ್ ಸಿನಿಮಾ ಅವಾರ್ಡ್ ಗೆದ್ದ ಬಳಿಕ ಮಾತನಾಡಿದ ಎಸ್.ಎಸ್. ರಾಜಮೌಳಿ, ‘ನನಗೆ ರೆಕ್ಕೆ ಬೆಳೆಯುತ್ತಿದೆ ಅನಿಸುತ್ತಿದೆ. ನನ್ನ ಖುಷಿಯನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಎಲ್ಲರಿಗೂ ಧನ್ಯವಾದಗಳು. ಬೆಸ್ಟ್​ ಆ್ಯಕ್ಷನ್ ಸಿನಿಮಾ, ಬೆಸ್ಟ್ ಸ್ಟಂಟ್ಸ್​ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಬಹುಶಃ ಬೆಸ್ಟ್ ಸ್ಟಂಟ್ಸ್ ಸಿನಿಮಾ ಅವಾರ್ಡ್​ ಕೊರಿಯೋಗ್ರಾಫರ್​ಗೆ ಸಲ್ಲಬೇಕು. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಮುಖ್ಯ ಪ್ರಶಸ್ತಿ ವಿತರಕರು ಸ್ಟಂಟ್ಸ್​ ಕೋರಿಯೋಗ್ರಾಫರ್​ಗೋಸ್ಕರ ಒಂದು ವಿಭಾಗ ಆರಂಭಿಸಬೇಕು. ನನ್ನ ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ನಮ್ಮೆಲ್ಲರನ್ನು ರಂಜಿಸಲು ನಿಜವಾಗಿಯೂ ಶ್ರಮಿಸುವ ಎಲ್ಲಾ ಸ್ಟಂಟ್ ಕೊರಿಯೋಗ್ರಾಫರ್‌ಗಳ ಪರವಾಗಿ ನನ್ನ ಕೋರಿಕೆ’ ಎಂದು ರಾಜಮೌಳಿ ಹೇಳಿದ್ದಾರೆ.

ಪ್ರಶಸ್ತಿ ಗೆದ್ದ ಖುಷಿಯಲ್ಲಿ ರಾಮ್ ಚರಣ್ ಅವರನ್ನು ವೇದಿಕೆ ಮೇಲೆ ಕರೆತಂದರು ರಾಜಮೌಳಿ. ಈ ವೇಳೆ ಮಾತನಾಡಿದ ರಾಮ್ ಚರಣ್ ಒಳ್ಳೊಳ್ಳೆಯ ಸಿನಿಮಾ ಮಾಡುವ ಭರವಸೆಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಜೂ.ಎನ್​ಟಿಆರ್ ಕೂಡ ಭಾಗಿ ಆಗಬೇಕಿತ್ತು. ಆದರೆ, ತಾರಕ ರತ್ನ ನಿಧನ ಹಿನ್ನೆಲೆಯಲ್ಲಿ ಅವರು ಇಲ್ಲಿಗೆ ಆಗಮಿಸೋಕೆ ಸಾಧ್ಯವಾಗಿಲ್ಲ.  

ಇದನ್ನೂ ಓದಿ: ರಾಜಮೌಳಿ ಮಾತು ಕೇಳಿ ನನ್ನ ಹೃದಯ ಒಡೆದಿತ್ತು;ಗೂಳಿ ನಟಿ ಮಮತಾ ಮೋಹನ್​ದಾಸ್

ಈ ಬಾರಿ ಆಸ್ಕರ್ ಅವಾರ್ಡ್ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಇದಕ್ಕೆ ಕಾರಣ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್​ನಲ್ಲಿರುವುದು. ಮಾರ್ಚ್ 12ರಂದು (ಭಾರತೀಯ ಕಾಲಮಾನ ಮಾರ್ಚ್​ 13 ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್​’ ತಂಡ ಭಾಗಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:30 am, Sat, 25 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!