AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ.

‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು
ಆರ್​ಆರ್​ಆರ್​ ತಂಡ
TV9 Web
| Edited By: |

Updated on: Dec 30, 2021 | 2:48 PM

Share

ಸಿನಿಮಾ ಸಿದ್ಧಪಡಿಸಿದರೆ ಕೆಲಸ ಅಲ್ಲಿಗೆ ಮುಗಿಯುವುದಿಲ್ಲ. ಅದನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸವೂ ಮುಖ್ಯವೇ. ಹೀಗೊಂದು ಸಿನಿಮಾ ತೆರೆಗೆ ಬರುತ್ತಿದೆ ಎನ್ನುವ ವಿಚಾರ ಎಲ್ಲರ ಕಿವಿ ತಲುಪಬೇಕು. ಹಾಗಿದ್ದರೆ ಮಾತ್ರ ಸಿನಿಮಾ ನೋಡೋಕೆ ಪ್ರೇಕ್ಷಕರು ಚಿತ್ರ ಮಂದಿರಕ್ಕೆ ಬರುತ್ತಾರೆ. ಈ ಕಾರಣಕ್ಕೆ ದೊಡ್ಡ ನಿರ್ಮಾಪಕರು ಸಿನಿಮಾಗೆ ಮಾತ್ರವಲ್ಲ, ಪ್ರಮೋಷನ್​ಗೂ ಸಾಕಷ್ಟು ಖರ್ಚು ಮಾಡುತ್ತಾರೆ. ಈಗ ಟಾಲಿವುಡ್​ನಲ್ಲಿ ಸಿದ್ಧವಾಗಿರುವ ‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೂ ನಿರ್ಮಾಪಕರು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ. ಈಗ ಚಿತ್ರದ ಪ್ರಚಾರಕ್ಕೂ ನಿರ್ಮಾಪಕ ಡಿ.ವಿ.ವಿ. ದಾನಯ್ಯ ಅವರು ದೊಡ್ಡ ಮೊತ್ತವನ್ನು ತೆಗೆದಿಟ್ಟಿದ್ದಾರೆ.

ಈಗಾಗಲೇ ‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದೆ. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಿದೆ. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆಯುತ್ತಿದೆ. ಹೀಗಾಗಿ, ಈ ಸಿನಿಮಾ ಪ್ರಮೋಷನ್​ಗೆ ನಿರ್ಮಾಪಕರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ತೆಗೆದಿಟ್ಟಿದ್ದಾರೆ.

ಸಿನಿಮಾ ರಿಲೀಸ್​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಹೀಗಾಗಿ, ಚಿತ್ರತಂಡ ಪ್ರಚಾರಕ್ಕೆ ಚುರುಕು ಮುಟ್ಟಿಸಿದೆ. ಕೊವಿಡ್ ಪ್ರಕರಣ ಹೆಚ್ಚುತ್ತಿರುವ ಮಧ್ಯೆಯೂ ಸಿನಿಮಾ ರಿಲೀಸ್ ಮಾಡುವ ನಿರ್ಧಾರದಲ್ಲಿ ಚಿತ್ರತಂಡ ಇದೆ. ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?