AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ.

‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು
ಆರ್​ಆರ್​ಆರ್​ ತಂಡ
TV9 Web
| Edited By: |

Updated on: Dec 30, 2021 | 2:48 PM

Share

ಸಿನಿಮಾ ಸಿದ್ಧಪಡಿಸಿದರೆ ಕೆಲಸ ಅಲ್ಲಿಗೆ ಮುಗಿಯುವುದಿಲ್ಲ. ಅದನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸವೂ ಮುಖ್ಯವೇ. ಹೀಗೊಂದು ಸಿನಿಮಾ ತೆರೆಗೆ ಬರುತ್ತಿದೆ ಎನ್ನುವ ವಿಚಾರ ಎಲ್ಲರ ಕಿವಿ ತಲುಪಬೇಕು. ಹಾಗಿದ್ದರೆ ಮಾತ್ರ ಸಿನಿಮಾ ನೋಡೋಕೆ ಪ್ರೇಕ್ಷಕರು ಚಿತ್ರ ಮಂದಿರಕ್ಕೆ ಬರುತ್ತಾರೆ. ಈ ಕಾರಣಕ್ಕೆ ದೊಡ್ಡ ನಿರ್ಮಾಪಕರು ಸಿನಿಮಾಗೆ ಮಾತ್ರವಲ್ಲ, ಪ್ರಮೋಷನ್​ಗೂ ಸಾಕಷ್ಟು ಖರ್ಚು ಮಾಡುತ್ತಾರೆ. ಈಗ ಟಾಲಿವುಡ್​ನಲ್ಲಿ ಸಿದ್ಧವಾಗಿರುವ ‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೂ ನಿರ್ಮಾಪಕರು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ. ಈಗ ಚಿತ್ರದ ಪ್ರಚಾರಕ್ಕೂ ನಿರ್ಮಾಪಕ ಡಿ.ವಿ.ವಿ. ದಾನಯ್ಯ ಅವರು ದೊಡ್ಡ ಮೊತ್ತವನ್ನು ತೆಗೆದಿಟ್ಟಿದ್ದಾರೆ.

ಈಗಾಗಲೇ ‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದೆ. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಿದೆ. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆಯುತ್ತಿದೆ. ಹೀಗಾಗಿ, ಈ ಸಿನಿಮಾ ಪ್ರಮೋಷನ್​ಗೆ ನಿರ್ಮಾಪಕರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ತೆಗೆದಿಟ್ಟಿದ್ದಾರೆ.

ಸಿನಿಮಾ ರಿಲೀಸ್​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಹೀಗಾಗಿ, ಚಿತ್ರತಂಡ ಪ್ರಚಾರಕ್ಕೆ ಚುರುಕು ಮುಟ್ಟಿಸಿದೆ. ಕೊವಿಡ್ ಪ್ರಕರಣ ಹೆಚ್ಚುತ್ತಿರುವ ಮಧ್ಯೆಯೂ ಸಿನಿಮಾ ರಿಲೀಸ್ ಮಾಡುವ ನಿರ್ಧಾರದಲ್ಲಿ ಚಿತ್ರತಂಡ ಇದೆ. ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

Follow Us
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ