AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಆರ್​ಆರ್​ಆರ್​’; ಸ್ಪೆಷಲ್ ದಿನಕ್ಕೆ ವೀಕ್ಷಕರಿಗೆ ವಿಶೇಷ ಗಿಫ್ಟ್

‘ಆರ್​ಆರ್​ಆರ್​’ ಸಿನಿಮಾದಲ್ಲಿ ಸ್ವಾತಂತ್ರ್ಯ ಹೋರಾಟದ ಕಥೆ ಇದೆ. ಬ್ರಿಟಿಷರ ವಿರುದ್ಧ ಹೋರಾಡಿದ ಕೋಮರಂ ಭೀಮ್ ಹಾಗೂ ಅಲ್ಲುರಿ ಸೀತಾರಾಮ ರಾಜು ಅವರ ಪಾತ್ರಗಳನ್ನು ಇಟ್ಟುಕೊಂಡು ಕಾಲ್ಪನಿಕ ಕಥೆ ಹೆಣೆದು ಸಿನಿಮಾ ಮಾಡಲಾಗಿದೆ.

ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಆರ್​ಆರ್​ಆರ್​’; ಸ್ಪೆಷಲ್ ದಿನಕ್ಕೆ ವೀಕ್ಷಕರಿಗೆ ವಿಶೇಷ ಗಿಫ್ಟ್
ರಾಮ್ ಚರಣ್​-ಜ್ಯೂ.ಎನ್​ಟಿಆರ್​
TV9 Web
| Edited By: |

Updated on: Aug 11, 2022 | 9:00 AM

Share

ಎಸ್​​​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಮಾರ್ಚ್​ ತಿಂಗಳಲ್ಲಿ ತೆರೆಗೆ ಬಂದು ಸಾಕಷ್ಟು ಸದ್ದು ಮಾಡಿತು. ಈ ಚಿತ್ರ ಥಿಯೇಟರ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಈ ಮೂಲಕ ಚಿತ್ರ ಹೊಸ ಹೊಸ ದಾಖಲೆ ಬರೆದಿದೆ. ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಕಾಂಬಿನೇಷನ್, ರಾಜಮೌಳಿ ಕಲ್ಪನೆ ಪ್ರೇಕ್ಷಕರಿಗೆ ಇಷ್ಟವಾಗಿದೆ. ಕೆಲ ತಿಂಗಳ ಹಿಂದೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಚಿತ್ರಮಂದಿರ ಹಾಗೂ ಒಟಿಟಿಯಲ್ಲಿ ‘ಆರ್​ಆರ್​ಆರ್​’ ಸಿನಿಮಾ (RRR Movie) ಮಿಸ್ ಮಾಡಿಕೊಂಡವರು ಈಗ ಟಿವಿಯಲ್ಲಿ ವೀಕ್ಷಿಸಬಹುದು.

‘ಆರ್​ಆರ್​ಆರ್’ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬಂತು. ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ಬಿಡುಗಡೆ ಆಯಿತು. ಆ ಪೈಕಿ ಹಿಂದಿ ಭಾಷೆಯ ಚಿತ್ರ ಜೀ ಸಿನಿಮಾದಲ್ಲಿ ಆಗಸ್ಟ್ 15ರಂದು ಪ್ರಸಾರ ಕಾಣುತ್ತಿದೆ. ರಾತ್ರಿ 8 ಗಂಟೆಗೆ ಈ ಚಿತ್ರ ಪ್ರೀಮಿಯರ್ ಆಗಲಿದೆ. ಈ ಬಗ್ಗೆ ಜೀ ಸಿನಿಮಾದವರು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ
Image
KGF Chapter 2: ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಕೆಜಿಎಫ್ 2’; ಹೊಸ ಅಪ್ಡೇಟ್ ನೀಡಿದ ಜೀ ಕನ್ನಡ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

‘ಆರ್​ಆರ್​ಆರ್​’ ಸಿನಿಮಾದಲ್ಲಿ ಸ್ವಾತಂತ್ರ್ಯ ಹೋರಾಟದ ಕಥೆ ಇದೆ. ಬ್ರಿಟಿಷರ ವಿರುದ್ಧ ಹೋರಾಡಿದ ಕೋಮರಂ ಭೀಮ್ ಹಾಗೂ ಅಲ್ಲುರಿ ಸೀತಾರಾಮ ರಾಜು ಅವರ ಪಾತ್ರಗಳನ್ನು ಇಟ್ಟುಕೊಂಡು ಕಾಲ್ಪನಿಕ ಕಥೆ ಹೆಣೆದು ಸಿನಿಮಾ ಮಾಡಲಾಗಿದೆ. ಈ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆ ಸಮಯದಂದೇ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣುತ್ತಿದೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ತುಂಬಾನೇ ವಿಶೇಷವಾಗಿದೆ. ಇದಕ್ಕೆ ಕಾರಣವೂ ಇದೆ. ನಮಗೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದಿದೆ. ಈ ಕಾರಣದಿಂದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ‘ಆರ್​ಆರ್​ಆರ್​’ ಚಿತ್ರ ಪ್ರಸಾರ ಕಾಣುತ್ತಿರುವುದು ವಿಶೇಷ.

ಇದನ್ನೂ ಓದಿ: ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ

‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನೂರಾರು ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾಗೆ ಡಿವಿವಿ ದಾನಯ್ಯ ಅವರು ಬಂಡವಾಳ ಹೂಡಿದ್ದರು. ಎಂ.ಎಂ. ಕೀರವಾಣಿ ಅವರು ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದರು. ಚಿತ್ರದ ಹಲವು ಹಾಡುಗಳು ಸೂಪರ್ ಹಿಟ್ ಆಗಿವೆ. ಟಿವಿಯಲ್ಲಿ ಸಿನಿಮಾ ನೋಡಲು ವೀಕ್ಷಕರು ಕಾದಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು