AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಹಳೆ ಗೆಳೆಯ, ಲವ್ ಸ್ಟೋರಿ ಕಾರಣ

SS Rajamouli: ನಿರ್ದೇಶಕ ಎಸ್​​ಎಸ್ ರಾಜಮೌಳಿ ಯಾವುದೇ ಕಳಂಕ ಇಲ್ಲದ ಸ್ವಚ್ಛ ವ್ಯಕ್ತಿತ್ವದ ಸಿನಿಮಾ ಸೆಲೆಬ್ರಿಟಿ ಎಂದೇ ಜನಪ್ರಿಯ. ಆದರೆ ಇದೀಗ ಎಸ್​ಎಸ್ ರಾಜಮೌಳಿಯ 34 ವರ್ಷ ಹಳೆಯ ಮಿತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಆತ್ಮಹತ್ಯೆಗೆ ಎಸ್​ಎಸ್ ರಾಜಮೌಳಿ ಮತ್ತು ಅವರ ಪತ್ನಿ ರಮಾ ರಾಜಮೌಳಿ ಕಾರಣ ಎಂದು ಹೇಳಿದ್ದಾರೆ.

ರಾಜಮೌಳಿ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಹಳೆ ಗೆಳೆಯ, ಲವ್ ಸ್ಟೋರಿ ಕಾರಣ
Ss Rajamouli Srinivas Rao
ಮಂಜುನಾಥ ಸಿ.
|

Updated on:Feb 27, 2025 | 3:31 PM

Share

ಪ್ರಸ್ತುತ ಭಾರತೀಯ ಚಿತ್ರರಂಗದ ಟಾಪ್ 1 ನಿರ್ದೇಶಕ ರಾಜಮೌಳಿಗೆ (SS Rajamouli) ಸಂಕಷ್ಟವೊಂದು ಎದುರಾಗಿದೆ. ರಾಜಮೌಳಿಯ ಹಳೆಯ ಮಿತ್ರರೊಬ್ಬರು, ರಾಜಮೌಳಿಯ ಹೆಸರು ಬರೆದಿಟ್ಟು, ರಾಜಮೌಳಿಯೇ ತನ್ನ ಸಾವಿಗೆ ಕಾರಣ ಎಂದು ಹೇಳಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ರಾಜಮೌಳಿ ಅಭಿಮಾನಿಗಳಿಗೆ ಅಚ್ಚರಿ ತಂದಿದೆ. ಘಟನೆ ಬಳಿಕ ಪೊಲೀಸರು ರಾಜಮೌಳಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸುವ ಸಾಧ್ಯತೆ ದಟ್ಟವಾಗಿದೆ.

ಎಸ್​ಎಸ್ ರಾಜಮೌಳಿ ನಿರ್ದೇಶನ ಮಾಡಿ ಜೂ ಎನ್​ಟಿಆರ್ ನಟಿಸಿದ್ದ ಸೂಪರ್ ಹಿಟ್ ಸಿನಿಮಾ ‘ಯಮದೊಂಗ’ ಸಿನಿಮಾದ ಸಹ ನಿರ್ಮಾಪಕರೂ ಆಗಿದ್ದ ಶ್ರೀನಿವಾಸ್ ರಾವ್, ರಾಜಮೌಳಿಯ ಬಹು ಹಳೆಯ ಮಿತ್ರರಾಗಿದ್ದು, ಇದೀಗ ಇದೇ ಮಿತ್ರ ರಾಜಮೌಳಿ ವಿರುದ್ಧ ಆರೋಪಗಳನ್ನು ಮಾಡಿ ಪತ್ರೆ ಬರೆದಿರುವುದಲ್ಲದೆ ಸೆಲ್ಫಿ ವಿಡಿಯೋ ಮಾಡಿ ಅದನ್ನು ತಮ್ಮ ಆಪ್ತರಿಗೆ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಮೌಳಿ, ತಮಗೆ ನೀಡಿದ ಹಿಂಸೆಯಿಂದಲೇ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಸಾಯುವ ಮುಂಚೆ ಮಾಡಿರುವ ವಿಡಿಯೋನಲ್ಲಿ ಮಾತನಾಡಿರುವ ಶ್ರೀನಿವಾಸ ರಾವ್, ‘ನನ್ನ ಸಾವಿಗೆ ರಾಜಮೌಳಿ ಮತ್ತು ರಮಾ ರಾಜಮೌಳಿ ಕಾರಣ. ನಾನು ಬಹಳ ವರ್ಷಗಳಿಂದಲೂ ಚಿತ್ರರಂಗದಲ್ಲಿದ್ದೇನೆ. ನಾನು ಹಾಗೂ ರಾಜಮೌಳಿ 34 ವರ್ಷಗಳಿಂದಲೂ ಆತ್ಮೀಯ ಗೆಳೆಯರು. ನಮ್ಮ ಗೆಳೆತನದ ಬಗ್ಗೆಯೂ ಹಲವರಿಗೆ ಗೊತ್ತು. ನಾನು ಹಾಗೂ ರಾಜಮೌಳಿ ಒಬ್ಬಳೇ ಯುವತಿಯನ್ನು ಪ್ರೀತಿಸಿದ್ದೆವು. ಆದರೆ ಆಗ ರಾಜಮೌಳಿ, ನೀನು ತ್ಯಾಗ ಮಾಡು ಅಂದು, ನಾನು ಸಹ ಹಾಗೆಯೇ ಮಾಡಿದೆ. ಆ ನಂತರ ಈವರೆಗೆ ನಾನು ಯಾರನ್ನೂ ಮದುವೆ ಆಗಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?

ಮುಂದುವರೆದು, ‘ಆದರೆ ಕೆಲ ತಿಂಗಳ ಮುಂಚೆ ನನಗೆ ಮತ್ತು ರಾಜಮೌಳಿಗೆ ಸಣ್ಣ ಮಾತಿನ ಚಕಮಕಿ ನಡೆಯಿತು, ಆಗ ನಾನು ‘ನಮ್ಮಿಬ್ಬರ ಟ್ರಯಾಂಗಲ್ ಲವ್ ಸ್ಟೋರಿ’ಯನ್ನು ಸಿನಿಮಾ ಮಾಡುತ್ತೀನಿ ಎಂದೆ. ಅದು ಅವನಿಗೆ ಭಯ ಹುಟ್ಟಿಸಿತು. ನಮ್ಮ ಕತೆಯನ್ನು ಎಲ್ಲರಿಗೂ ಹೇಳಿ ಬಿಡುತ್ತಾನೆ ಎಂದುಕೊಂಡು ನನಗೆ ಹಿಂಸೆ ಕೊಡಲು ಆರಂಭಿಸಿದೆ. ಭೈರವ, ಕಾರ್ತಿಕೇಯ (ಕೀರವಾಣಿ, ರಾಜಮೌಳಿ ಮಕ್ಕಳು) ಎಲ್ಲ ನನಗೆ ಆಪ್ತರಾಗಿದ್ದರು, ಆದರೆ ಅವರೂ ಸಹ ದೂರವಾದರು. ನಾನು ಒಂಟಿಯಾಗಿಬಿಟ್ಟೆ’ ಎಂದಿದ್ದಾರೆ ಶ್ರೀನಿವಾಸ್ ರಾವ್.

‘ಮೂವರು ವ್ಯಕ್ತಿಗಳ ನಡುವೆ ನಡೆದ ಘಟನೆಗೆ ಸಾಕ್ಷ್ಯಗಳು ಇರುವುದಿಲ್ಲ. ಆದರೆ ನಾನು ಈಗ ಸಾಯುತ್ತಿದ್ದೇನೆ. ಸುಮೋಟೊ (ಸ್ವಯಂ ಪ್ರೇರಿತ ದೂರು) ದಾಖಲಿಸಿಕೊಂಡು, ರಾಜಮೌಳಿಯನ್ನು ಲೈ ಡಿಟೆಕ್ಟರ್ ಬಳಸಿ ವಿಚಾರಣೆ ನಡೆಸಿದರೆ ನಿಜಾಂಶ ಹೊರಬರುತ್ತದೆ’ ಎಂದಿದ್ದಾರೆ ಶ್ರೀನಿವಾಸ್ ರಾವ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Thu, 27 February 25

ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?