Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ

ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ
ರಾಜಮೌಳಿ, ವಿಜಯೇಂದ್ರ ಪ್ರಸಾದ್​
Follow us
ರಾಜೇಶ್ ದುಗ್ಗುಮನೆ
|

Updated on: Jul 27, 2023 | 6:30 AM

ಒಂದು ಸಿನಿಮಾ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಸಿದ್ಧವಾಗೋದು ಸಾಮಾನ್ಯ. ಅದೇ ರೀತಿ ‘ಆರ್​ಆರ್​ಆರ್​’ ಸಿನಿಮಾಗೆ ಸೀಕ್ವೆಲ್ ರೆಡಿ ಆಗಲಿದೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ರಾಜಮೌಳಿ (SS Rajamouli) ಅವರ ತಂದೆ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಮೊದಲು ಮಾತನಾಡಿದ್ದರು. ಈಗ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಅವರು ಒಂದು ಬೇಸರದ ವಿಚಾರವನ್ನೂ ನೀಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಅವಾರ್ಡ್ ಒಲಿಯಿತು. ಇಷ್ಟು ದೊಡ್ಡ ಮಟ್ಟದ ಸಾಧನೆ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ಕಾರಣದಿಂದಲೇ ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್​ ಸೀಕ್ವೆಲ್​ನ ರಾಜಮೌಳಿ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಈ ಪ್ರಶ್ನೆಗೆ ಹೌದು, ಇಲ್ಲ ಎಂಬ ಎರಡೂ ಉತ್ತರ ನೀಡಬಹುದು. ಈ ಚಿತ್ರದ ಸೀಕ್ವೆಲ್ ಬಗ್ಗೆ ಅವರ ಬಳಿ ಮಾತನಾಡಿದ್ದೇನೆ. ಸಿನಿಮಾದ ಕಥೆ ಆಫ್ರಿಕಾದಲ್ಲಿ ಸಾಗುತ್ತದೆ’ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.

‘ಸದ್ಯ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಮುಗಿಯುವವರೆಗೂ ಅವರು ಸೀಕ್ವೆಲ್ ಬಗ್ಗೆ ಆಲೋಚಿಸುವುದಿಲ್ಲ. ಒಂದೊಮ್ಮೆ ಅವರಿಗೆ ಕಥೆ ಇಷ್ಟವಾದರೆ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಕಾಲ್​ಶೀಟ್ ಸಿಗಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ವಿಜಯೇಂದ್ರ ಪ್ರಸಾದ್ ಅವರು ‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮಾತನಾಡುತ್ತಿರುವ ಬಗ್ಗೆ ರಾಜಮೌಳಿಗೆ ಬೇಸರ ಇದೆ ಎಂದು ವರದಿ ಆಗಿತ್ತು. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ