AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ

ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ
ರಾಜಮೌಳಿ, ವಿಜಯೇಂದ್ರ ಪ್ರಸಾದ್​
ರಾಜೇಶ್ ದುಗ್ಗುಮನೆ
|

Updated on: Jul 27, 2023 | 6:30 AM

Share

ಒಂದು ಸಿನಿಮಾ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಸಿದ್ಧವಾಗೋದು ಸಾಮಾನ್ಯ. ಅದೇ ರೀತಿ ‘ಆರ್​ಆರ್​ಆರ್​’ ಸಿನಿಮಾಗೆ ಸೀಕ್ವೆಲ್ ರೆಡಿ ಆಗಲಿದೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ರಾಜಮೌಳಿ (SS Rajamouli) ಅವರ ತಂದೆ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಮೊದಲು ಮಾತನಾಡಿದ್ದರು. ಈಗ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಅವರು ಒಂದು ಬೇಸರದ ವಿಚಾರವನ್ನೂ ನೀಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಅವಾರ್ಡ್ ಒಲಿಯಿತು. ಇಷ್ಟು ದೊಡ್ಡ ಮಟ್ಟದ ಸಾಧನೆ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ಕಾರಣದಿಂದಲೇ ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್​ ಸೀಕ್ವೆಲ್​ನ ರಾಜಮೌಳಿ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಈ ಪ್ರಶ್ನೆಗೆ ಹೌದು, ಇಲ್ಲ ಎಂಬ ಎರಡೂ ಉತ್ತರ ನೀಡಬಹುದು. ಈ ಚಿತ್ರದ ಸೀಕ್ವೆಲ್ ಬಗ್ಗೆ ಅವರ ಬಳಿ ಮಾತನಾಡಿದ್ದೇನೆ. ಸಿನಿಮಾದ ಕಥೆ ಆಫ್ರಿಕಾದಲ್ಲಿ ಸಾಗುತ್ತದೆ’ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.

‘ಸದ್ಯ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಮುಗಿಯುವವರೆಗೂ ಅವರು ಸೀಕ್ವೆಲ್ ಬಗ್ಗೆ ಆಲೋಚಿಸುವುದಿಲ್ಲ. ಒಂದೊಮ್ಮೆ ಅವರಿಗೆ ಕಥೆ ಇಷ್ಟವಾದರೆ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಕಾಲ್​ಶೀಟ್ ಸಿಗಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ವಿಜಯೇಂದ್ರ ಪ್ರಸಾದ್ ಅವರು ‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮಾತನಾಡುತ್ತಿರುವ ಬಗ್ಗೆ ರಾಜಮೌಳಿಗೆ ಬೇಸರ ಇದೆ ಎಂದು ವರದಿ ಆಗಿತ್ತು. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್