AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ

ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ
ರಾಜಮೌಳಿ, ವಿಜಯೇಂದ್ರ ಪ್ರಸಾದ್​
ರಾಜೇಶ್ ದುಗ್ಗುಮನೆ
|

Updated on: Jul 27, 2023 | 6:30 AM

Share

ಒಂದು ಸಿನಿಮಾ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಸಿದ್ಧವಾಗೋದು ಸಾಮಾನ್ಯ. ಅದೇ ರೀತಿ ‘ಆರ್​ಆರ್​ಆರ್​’ ಸಿನಿಮಾಗೆ ಸೀಕ್ವೆಲ್ ರೆಡಿ ಆಗಲಿದೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ರಾಜಮೌಳಿ (SS Rajamouli) ಅವರ ತಂದೆ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಮೊದಲು ಮಾತನಾಡಿದ್ದರು. ಈಗ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಅವರು ಒಂದು ಬೇಸರದ ವಿಚಾರವನ್ನೂ ನೀಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಅವಾರ್ಡ್ ಒಲಿಯಿತು. ಇಷ್ಟು ದೊಡ್ಡ ಮಟ್ಟದ ಸಾಧನೆ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ಕಾರಣದಿಂದಲೇ ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್​ ಸೀಕ್ವೆಲ್​ನ ರಾಜಮೌಳಿ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಈ ಪ್ರಶ್ನೆಗೆ ಹೌದು, ಇಲ್ಲ ಎಂಬ ಎರಡೂ ಉತ್ತರ ನೀಡಬಹುದು. ಈ ಚಿತ್ರದ ಸೀಕ್ವೆಲ್ ಬಗ್ಗೆ ಅವರ ಬಳಿ ಮಾತನಾಡಿದ್ದೇನೆ. ಸಿನಿಮಾದ ಕಥೆ ಆಫ್ರಿಕಾದಲ್ಲಿ ಸಾಗುತ್ತದೆ’ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.

‘ಸದ್ಯ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಮುಗಿಯುವವರೆಗೂ ಅವರು ಸೀಕ್ವೆಲ್ ಬಗ್ಗೆ ಆಲೋಚಿಸುವುದಿಲ್ಲ. ಒಂದೊಮ್ಮೆ ಅವರಿಗೆ ಕಥೆ ಇಷ್ಟವಾದರೆ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಕಾಲ್​ಶೀಟ್ ಸಿಗಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ವಿಜಯೇಂದ್ರ ಪ್ರಸಾದ್ ಅವರು ‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮಾತನಾಡುತ್ತಿರುವ ಬಗ್ಗೆ ರಾಜಮೌಳಿಗೆ ಬೇಸರ ಇದೆ ಎಂದು ವರದಿ ಆಗಿತ್ತು. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ