AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

‘ಆರ್​ಆರ್​ಆರ್’ ಚಿತ್ರದ ಗೆಲುವಿನ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರಿಗೆ ಆಸ್ಕರ್ ಅಕಾಡೆ​ಮಿ ಕಡೆಯಿಂದ ವಿಶೇಷ ಆಹ್ವಾನ ಸಿಕ್ಕಿದೆ. ಅವರು ಇದರ ಸದಸ್ಯತ್ವ ಪಡೆಯಲಿದ್ದಾರೆ. ಸ್ವತಃ ಅಕಾಡೆಮಿ ಕಡೆಯಿಂದ ಆಹ್ವಾನ ಸಿಕ್ಕಿದೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jun 26, 2024 | 7:31 AM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ‘ಆರ್​ಆರ್​ಆರ್’ ಚಿತ್ರದಿಂದ (RRR Movie) ವಿಶ್ವಾದ್ಯಂತ ಖ್ಯಾತಿ ಪಡೆದಿದ್ದಾರೆ. ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಿದೆ. ಅವರು ವಿವಿಧ ರೀತಿಯ ಗೌರವಗಳನ್ನು ಪಡೆದಿದ್ದಾರೆ. ವಿಶೇಷ ಎಂದರೆ ಈ ಬಾರಿ ಅವರಿಗೆ ಆಸ್ಕರ್​ ಅಕಾಡೆಮಿಯಲ್ಲಿ ಸದಸ್ಯತ್ವ ಪಡೆಯೋ ಅವಕಾಶ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಸಂಗೀತ ಸಂಯೋಜಕ ಎಆರ್ ರೆಹಮಾನ್ ಸೇರಿದಂತೆ ಅನೇಕರು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್​ ಆರ್ಟ್ಸ್ ಆ್ಯಂಡ್ ಸೈನ್ಸ್​ನ (ಆಸ್ಕರ್ ಅಕಾಡೆಮಿ) ಸದಸ್ಯತ್ವ ಹೊಂದಿದ್ದಾರೆ. ಈ ಬಾರಿ ರಾಜಮೌಳಿಗೆ ಆಹ್ವಾನ ಸಿಕ್ಕಿದೆ. ರಾಜಮೌಳಿ ಅವರು ಸದಸ್ಯತ್ವ ಪಡೆಯಲು ಒಪ್ಪಿದ್ದಾರೆ ಎನ್ನಲಾಗಿದೆ. ಇವರ ಜೊತೆ ಶಬಾನಾ ಆಜ್ಮಿ, ಸಿನಿಮಾಟೋಗ್ರಾಫರ್ ರವಿ ವರ್ಮನ್, ನಿರ್ಮಾಪಕ ರಿತೇಶ್ ಸಿಧ್ವಾನಿ ಹಾಗೂ ಡಾಕ್ಯುಮೆಂಟರಿ ಡೈರೆಕ್ಟರ್ ನಿಶಾ ಪಹುಜಾಗೂ ಈ ಬಾರಿ ಆಹ್ವಾನ ಸಿಕ್ಕಿದೆ. ರಾಜಮೌಳಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ರಮಾ ರಾಜಮೌಳಿಗೂ ಸದಸ್ಯತ್ವ ಸಿಕ್ಕಿದೆ ಎನ್ನಲಾಗುತ್ತಿದೆ.

ಈ ಸದಸ್ಯತ್ವ ಸಿಕ್ಕರೆ ಹಲವು ಲಾಭಗಳಾಗಲಿವೆ. ಪ್ರತಿ ವರ್ಷ ಆಸ್ಕರ್​ ಸಿನಿಮಾಗಳಿಗೆ ವೋಟ್ ಮಾಡುವ ಅವಕಾಶ ಇವರಿಗೆ ಸಿಗಲಿದೆ. ಇವರಿಗಾಗಿ ವಿಶೇಷ ಸ್ಕ್ರೀನಿಂಗ್ ಕೂಡ ಇರುತ್ತದೆ. ವರ್ಕ್​ಶಾಪ್, ಸೆಮಿನಾರ್ ಹಾಗೂ ಗ್ರಂಥಾಲಯವನ್ನು ಬಳಕೆ ಮಾಡುವ ಅವಕಾಶ ಇವರಿಗೆ ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿಷ್ಠಿತ ಸಂಸ್ಥೆಯ ಸದಸ್ಯತ್ವ ಸಿಕ್ಕ ಖುಷಿ ಇವರಿಗೆ ಇರುತ್ತದೆ.

ಇದನ್ನೂ ಓದಿ: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಸತ್ಯಜಿತ್ ರೇ, ಮೀರಾ ನಾಯರ್, ಕರಣ್ ಜೋಹರ್​ ಮೊದಲಾದವರು ಅಕಾಡೆಮಿ ಸೇರಿದ್ದಾರೆ. ‘ಆರ್​ಆರ್​ಆರ್’ ರಿಲೀಸ್ ಆದ ಬಳಿಕ ರಾಮ್ ಚರಣ್, ಜೂನಿಯರ್ ಎನ್​ಟಿಆರ್​, ಎಂಎಂ ಕೀರವಾಣಿ ಮೊಲಾದವರಿಗೆ ಆಹ್ವಾನ ನೀಡಲಾಗಿತ್ತು. ಈಗ ರಾಜಮೌಳಿಗೂ ಆಹ್ವಾನ ಸಿಕ್ಕಿದೆ. ಅವರು ಸದ್ಯ ಮಹೇಶ್ ಬಾಬು ನಿರ್ದೇಶನದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್