AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

‘ಆರ್​ಆರ್​ಆರ್’ ಚಿತ್ರದ ಗೆಲುವಿನ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರಿಗೆ ಆಸ್ಕರ್ ಅಕಾಡೆ​ಮಿ ಕಡೆಯಿಂದ ವಿಶೇಷ ಆಹ್ವಾನ ಸಿಕ್ಕಿದೆ. ಅವರು ಇದರ ಸದಸ್ಯತ್ವ ಪಡೆಯಲಿದ್ದಾರೆ. ಸ್ವತಃ ಅಕಾಡೆಮಿ ಕಡೆಯಿಂದ ಆಹ್ವಾನ ಸಿಕ್ಕಿದೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jun 26, 2024 | 7:31 AM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ‘ಆರ್​ಆರ್​ಆರ್’ ಚಿತ್ರದಿಂದ (RRR Movie) ವಿಶ್ವಾದ್ಯಂತ ಖ್ಯಾತಿ ಪಡೆದಿದ್ದಾರೆ. ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಿದೆ. ಅವರು ವಿವಿಧ ರೀತಿಯ ಗೌರವಗಳನ್ನು ಪಡೆದಿದ್ದಾರೆ. ವಿಶೇಷ ಎಂದರೆ ಈ ಬಾರಿ ಅವರಿಗೆ ಆಸ್ಕರ್​ ಅಕಾಡೆಮಿಯಲ್ಲಿ ಸದಸ್ಯತ್ವ ಪಡೆಯೋ ಅವಕಾಶ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಸಂಗೀತ ಸಂಯೋಜಕ ಎಆರ್ ರೆಹಮಾನ್ ಸೇರಿದಂತೆ ಅನೇಕರು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್​ ಆರ್ಟ್ಸ್ ಆ್ಯಂಡ್ ಸೈನ್ಸ್​ನ (ಆಸ್ಕರ್ ಅಕಾಡೆಮಿ) ಸದಸ್ಯತ್ವ ಹೊಂದಿದ್ದಾರೆ. ಈ ಬಾರಿ ರಾಜಮೌಳಿಗೆ ಆಹ್ವಾನ ಸಿಕ್ಕಿದೆ. ರಾಜಮೌಳಿ ಅವರು ಸದಸ್ಯತ್ವ ಪಡೆಯಲು ಒಪ್ಪಿದ್ದಾರೆ ಎನ್ನಲಾಗಿದೆ. ಇವರ ಜೊತೆ ಶಬಾನಾ ಆಜ್ಮಿ, ಸಿನಿಮಾಟೋಗ್ರಾಫರ್ ರವಿ ವರ್ಮನ್, ನಿರ್ಮಾಪಕ ರಿತೇಶ್ ಸಿಧ್ವಾನಿ ಹಾಗೂ ಡಾಕ್ಯುಮೆಂಟರಿ ಡೈರೆಕ್ಟರ್ ನಿಶಾ ಪಹುಜಾಗೂ ಈ ಬಾರಿ ಆಹ್ವಾನ ಸಿಕ್ಕಿದೆ. ರಾಜಮೌಳಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ರಮಾ ರಾಜಮೌಳಿಗೂ ಸದಸ್ಯತ್ವ ಸಿಕ್ಕಿದೆ ಎನ್ನಲಾಗುತ್ತಿದೆ.

ಈ ಸದಸ್ಯತ್ವ ಸಿಕ್ಕರೆ ಹಲವು ಲಾಭಗಳಾಗಲಿವೆ. ಪ್ರತಿ ವರ್ಷ ಆಸ್ಕರ್​ ಸಿನಿಮಾಗಳಿಗೆ ವೋಟ್ ಮಾಡುವ ಅವಕಾಶ ಇವರಿಗೆ ಸಿಗಲಿದೆ. ಇವರಿಗಾಗಿ ವಿಶೇಷ ಸ್ಕ್ರೀನಿಂಗ್ ಕೂಡ ಇರುತ್ತದೆ. ವರ್ಕ್​ಶಾಪ್, ಸೆಮಿನಾರ್ ಹಾಗೂ ಗ್ರಂಥಾಲಯವನ್ನು ಬಳಕೆ ಮಾಡುವ ಅವಕಾಶ ಇವರಿಗೆ ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿಷ್ಠಿತ ಸಂಸ್ಥೆಯ ಸದಸ್ಯತ್ವ ಸಿಕ್ಕ ಖುಷಿ ಇವರಿಗೆ ಇರುತ್ತದೆ.

ಇದನ್ನೂ ಓದಿ: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಸತ್ಯಜಿತ್ ರೇ, ಮೀರಾ ನಾಯರ್, ಕರಣ್ ಜೋಹರ್​ ಮೊದಲಾದವರು ಅಕಾಡೆಮಿ ಸೇರಿದ್ದಾರೆ. ‘ಆರ್​ಆರ್​ಆರ್’ ರಿಲೀಸ್ ಆದ ಬಳಿಕ ರಾಮ್ ಚರಣ್, ಜೂನಿಯರ್ ಎನ್​ಟಿಆರ್​, ಎಂಎಂ ಕೀರವಾಣಿ ಮೊಲಾದವರಿಗೆ ಆಹ್ವಾನ ನೀಡಲಾಗಿತ್ತು. ಈಗ ರಾಜಮೌಳಿಗೂ ಆಹ್ವಾನ ಸಿಕ್ಕಿದೆ. ಅವರು ಸದ್ಯ ಮಹೇಶ್ ಬಾಬು ನಿರ್ದೇಶನದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!