AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

‘ಆರ್​ಆರ್​ಆರ್’ ಚಿತ್ರದ ಗೆಲುವಿನ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರಿಗೆ ಆಸ್ಕರ್ ಅಕಾಡೆ​ಮಿ ಕಡೆಯಿಂದ ವಿಶೇಷ ಆಹ್ವಾನ ಸಿಕ್ಕಿದೆ. ಅವರು ಇದರ ಸದಸ್ಯತ್ವ ಪಡೆಯಲಿದ್ದಾರೆ. ಸ್ವತಃ ಅಕಾಡೆಮಿ ಕಡೆಯಿಂದ ಆಹ್ವಾನ ಸಿಕ್ಕಿದೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jun 26, 2024 | 7:31 AM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ‘ಆರ್​ಆರ್​ಆರ್’ ಚಿತ್ರದಿಂದ (RRR Movie) ವಿಶ್ವಾದ್ಯಂತ ಖ್ಯಾತಿ ಪಡೆದಿದ್ದಾರೆ. ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಿದೆ. ಅವರು ವಿವಿಧ ರೀತಿಯ ಗೌರವಗಳನ್ನು ಪಡೆದಿದ್ದಾರೆ. ವಿಶೇಷ ಎಂದರೆ ಈ ಬಾರಿ ಅವರಿಗೆ ಆಸ್ಕರ್​ ಅಕಾಡೆಮಿಯಲ್ಲಿ ಸದಸ್ಯತ್ವ ಪಡೆಯೋ ಅವಕಾಶ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ. ಈ ವೇಳೆ ಹಲವು ಸವಲತ್ತುಗಳನ್ನು ಅವರು ಅನುಭವಿಸಲಿದ್ದಾರೆ.

ಸಂಗೀತ ಸಂಯೋಜಕ ಎಆರ್ ರೆಹಮಾನ್ ಸೇರಿದಂತೆ ಅನೇಕರು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್​ ಆರ್ಟ್ಸ್ ಆ್ಯಂಡ್ ಸೈನ್ಸ್​ನ (ಆಸ್ಕರ್ ಅಕಾಡೆಮಿ) ಸದಸ್ಯತ್ವ ಹೊಂದಿದ್ದಾರೆ. ಈ ಬಾರಿ ರಾಜಮೌಳಿಗೆ ಆಹ್ವಾನ ಸಿಕ್ಕಿದೆ. ರಾಜಮೌಳಿ ಅವರು ಸದಸ್ಯತ್ವ ಪಡೆಯಲು ಒಪ್ಪಿದ್ದಾರೆ ಎನ್ನಲಾಗಿದೆ. ಇವರ ಜೊತೆ ಶಬಾನಾ ಆಜ್ಮಿ, ಸಿನಿಮಾಟೋಗ್ರಾಫರ್ ರವಿ ವರ್ಮನ್, ನಿರ್ಮಾಪಕ ರಿತೇಶ್ ಸಿಧ್ವಾನಿ ಹಾಗೂ ಡಾಕ್ಯುಮೆಂಟರಿ ಡೈರೆಕ್ಟರ್ ನಿಶಾ ಪಹುಜಾಗೂ ಈ ಬಾರಿ ಆಹ್ವಾನ ಸಿಕ್ಕಿದೆ. ರಾಜಮೌಳಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ರಮಾ ರಾಜಮೌಳಿಗೂ ಸದಸ್ಯತ್ವ ಸಿಕ್ಕಿದೆ ಎನ್ನಲಾಗುತ್ತಿದೆ.

ಈ ಸದಸ್ಯತ್ವ ಸಿಕ್ಕರೆ ಹಲವು ಲಾಭಗಳಾಗಲಿವೆ. ಪ್ರತಿ ವರ್ಷ ಆಸ್ಕರ್​ ಸಿನಿಮಾಗಳಿಗೆ ವೋಟ್ ಮಾಡುವ ಅವಕಾಶ ಇವರಿಗೆ ಸಿಗಲಿದೆ. ಇವರಿಗಾಗಿ ವಿಶೇಷ ಸ್ಕ್ರೀನಿಂಗ್ ಕೂಡ ಇರುತ್ತದೆ. ವರ್ಕ್​ಶಾಪ್, ಸೆಮಿನಾರ್ ಹಾಗೂ ಗ್ರಂಥಾಲಯವನ್ನು ಬಳಕೆ ಮಾಡುವ ಅವಕಾಶ ಇವರಿಗೆ ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿಷ್ಠಿತ ಸಂಸ್ಥೆಯ ಸದಸ್ಯತ್ವ ಸಿಕ್ಕ ಖುಷಿ ಇವರಿಗೆ ಇರುತ್ತದೆ.

ಇದನ್ನೂ ಓದಿ: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಸತ್ಯಜಿತ್ ರೇ, ಮೀರಾ ನಾಯರ್, ಕರಣ್ ಜೋಹರ್​ ಮೊದಲಾದವರು ಅಕಾಡೆಮಿ ಸೇರಿದ್ದಾರೆ. ‘ಆರ್​ಆರ್​ಆರ್’ ರಿಲೀಸ್ ಆದ ಬಳಿಕ ರಾಮ್ ಚರಣ್, ಜೂನಿಯರ್ ಎನ್​ಟಿಆರ್​, ಎಂಎಂ ಕೀರವಾಣಿ ಮೊಲಾದವರಿಗೆ ಆಹ್ವಾನ ನೀಡಲಾಗಿತ್ತು. ಈಗ ರಾಜಮೌಳಿಗೂ ಆಹ್ವಾನ ಸಿಕ್ಕಿದೆ. ಅವರು ಸದ್ಯ ಮಹೇಶ್ ಬಾಬು ನಿರ್ದೇಶನದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ