AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani: ಆಸ್ಕರ್ ಗೆದ್ದ ಖುಷಿಯಲ್ಲಿ ರಾಜಮೌಳಿ, ಕೀರವಾಣಿ ಮಾಡಿದ್ದೇನು ನೋಡಿ

ರಾಮ್ ಚರಣ್, ಜೂನಿಯರ್ ಎನ್​ಟಿಆರ್, ರಾಮ್ ಚರಣ್ ಪತ್ನಿ ಉಪಾಸನಾ, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಈ ಹಾಡಿಗೆ ಸಾಹಿತ್ಯ ಬರೆದ ಚಂದ್ರಬೋಸ್ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು.

MM Keeravani: ಆಸ್ಕರ್ ಗೆದ್ದ ಖುಷಿಯಲ್ಲಿ ರಾಜಮೌಳಿ, ಕೀರವಾಣಿ ಮಾಡಿದ್ದೇನು ನೋಡಿ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Mar 14, 2023 | 12:27 PM

Share

‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡು ಆಸ್ಕರ್ ವೇದಿಕೆಯಲ್ಲಿ ಟ್ರೋಫಿ ಗೆದ್ದಿದೆ. ಇದರಿಂದ ಹೊಸ ಇತಿಹಾಸ ಸೃಷ್ಟಿ ಆಗಿದೆ. ವಿಶ್ವ ಮಟ್ಟದಲ್ಲಿ ರಾಜಮೌಳಿ (SS Rajamouli) ಖ್ಯಾತಿ ಹೆಚ್ಚಿದೆ. ಹಾಲಿವುಡ್​ನಲ್ಲಿ ಸಿನಿಮಾ ಮಾಡಬೇಕು ಎನ್ನುವ ಕನಸಿಗೆ ಈ ಪ್ರಶಸ್ತಿಯಿಂದ ಬೂಸ್ಟ್ ಸಿಕ್ಕಿದೆ. ಆಸ್ಕರ್​ ಗೆದ್ದ ಖುಷಿಯಲ್ಲಿ ರಾಜಮೌಳಿ ಅವರು ಲಾಸ್ ಎಂಜಲಿಸ್​ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಭಾಗಿ ಆಗಿದ್ದ ಕೀರವಾಣಿ ಅವರು ಪಿಯಾನೋ ನುಡಿಸಿದ್ದಾರೆ.. ಈ ವಿಡಿಯೋನ ರಾಮ್ ಚರಣ್ ಪತ್ನಿ ಉಪಾಸನಾ ಅವರು ಹಂಚಿಕೊಂಡಿದ್ದಾರೆ.

ರಾಜಮೌಳಿ ಅವರು ಉಳಿದುಕೊಂಡಲ್ಲಿ ದೊಡ್ಡ ಪಾರ್ಟಿ ಆಯೋಜನೆ ಮಾಡಲಾಗಿತ್ತು. ರಾಮ್ ಚರಣ್, ಜೂನಿಯರ್ ಎನ್​ಟಿಆರ್, ರಾಮ್ ಚರಣ್ ಪತ್ನಿ ಉಪಾಸನಾ, ‘ನಾಟು ನಾಟು..’ ಹಾಡಿನ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಈ ಹಾಡಿಗೆ ಸಾಹಿತ್ಯ ಬರೆದ ಚಂದ್ರಬೋಸ್ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಇದರಲ್ಲಿ ಕೀರವಾಣಿ ಪಿಯಾನೋ ನುಡಿಸಿದ ವಿಡಿಯೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಉಪಾಸನಾ ಶೇರ್ ಮಾಡಿಕೊಂಡಿದ್ದಾರೆ.

ಕೀರವಾಣಿ ಅವರು ಕುಳಿತು ಸಂತೋಷದಿಂದ ಪಿಯಾನೋ ಬಾರಿಸುತ್ತಿದ್ದಾರೆ. ಸುತ್ತಲೂ ಇದ್ದವರು ಕ್ಲ್ಯಾಪ್ ಹೊಡೆದಿದ್ದಾರೆ. ರಾಮ್ ಚರಣ್ ಮೊದಲಾದವರು ಇದನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ‘ನಾವು ವಿಶ್ವದ ಟಾಪ್​ನಲ್ಲಿದ್ದೇವೆ. ಕೀರವಾಣಿ ಹಾಗೂ ಆರ್​ಆರ್​ಆರ್​ ಕುಟುಂಬಕ್ಕೆ ಧನ್ಯವಾದ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
19.20.21: ಹೊಸ ಕನ್ನಡ ಸಿನಿಮಾಕ್ಕೆ ಸಿಕ್ತು ಸೆಲೆಬ್ರಿಟಿಗಳ ಭರಪೂರ ಬೆಂಬಲ, ಪ್ರಶಂಸೆಯ ಸುರಿಮಳೆ
Image
19 20 21 Movie Review: ನಾಡಿನ ಜನ ನೋಡಲೇಬೇಕಾದ ಕಾಡಿನ ಮಕ್ಕಳ ಕಥೆ ಮತ್ತು ಘನತೆ
Image
Vittal Malekudiya: ‘19.20.21’ ಚಿತ್ರದಲ್ಲಿರುವ ರಿಯಲ್​ ಕಥೆ ಯಾರದ್ದು? ಫೋಟೋ ಸಹಿತ ಮಾಹಿತಿ ಹಂಚಿಕೊಂಡ ಚಿತ್ರತಂಡ
Image
Mansore: ತಮ್ಮದೇ ಕಥೆಯನ್ನು ತೆರೆ ಮೇಲೆ ನೋಡಿ ಕಣ್ಣೀರು ಹಾಕಿದ ‘19.20.21’ ಚಿತ್ರದ ನೈಜ ಪಾತ್ರಗಳು

ಉಪಾಸನಾ ಅವರು ತಾಯಿ ಆಗುತ್ತಿದ್ದಾರೆ. ಈ ವಿಚಾರವನ್ನು ಅವರು ರಿವೀಲ್ ಮಾಡಿದ್ದರು. ಈಗ ಅವರು ಆಸ್ಕರ್ ಪಡೆಯಲು ಅಮೆರಿಕಕ್ಕೆ ತೆರಳಿದ್ದರಿಂದ ಅಲ್ಲಿಯೇ ಮಗು ಜನಿಸಲಿದೆ ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ರಾಮ್ ಚರಣ್ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದರು.

ಇದನ್ನೂ ಓದಿ: ಅಮೆರಿಕದಲ್ಲಿ ಪತ್ನಿ ಜೊತೆ ರಾಮ್ ಚರಣ್ ಸುತ್ತಾಟ; ಬೇಬಿಬಂಪ್​ಗಾಗಿ ಹುಡುಕಾಡಿದ ಫ್ಯಾನ್ಸ್

‘ಆರ್​ಆರ್​ಆರ್​’ ಕಳೆದ ಮಾರ್ಚ್​ 24ರಂದು ರಿಲೀಸ್ ಆಯಿತು. ಈ ಸಿನಿಮಾ ಹಲವು ದಾಖಲೆ ಬರೆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಬೀಗಿದೆ. ರಾಜಮೌಳಿ ಅವರು ಹಾಲಿವುಡ್​ನಲ್ಲಿ ಸಿನಿಮಾ ಮಾಡುವ ಪ್ಲ್ಯಾನ್​ನಲ್ಲಿ ಇದ್ದಾರೆ. ಇದಕ್ಕೆ ಹಾಲಿವುಡ್​ನ ಅನೇಕ ನಿರ್ದೇಶಕರು ಸಹಾಯ ಮಾಡುವುದಾಗಿ ಹೇಳಿದ್ದಾರೆ. ಅವರು ಅಲ್ಲಿ ಯಾವ ರೀತಿಯ ಸಿನಿಮಾ ಮಾಡುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್