AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ನಿರ್ದೇಶನದಲ್ಲಿ ಪಳಗಿರುವ ರಾಜಮೌಳಿ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?
ರಾಜಮೌಳಿ
Follow us
ರಾಜೇಶ್ ದುಗ್ಗುಮನೆ
|

Updated on: Jun 29, 2023 | 7:09 AM

ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಅವರು ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಪಡೆದ ನಂತರದಲ್ಲಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈಗ ರಾಜಮೌಳಿ ಅವರು ಡಬಲ್ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಅಂದಹಾಗೆ, ರಾಜಮೌಳಿ ಅವರು ಯಾವುದೋ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರು ಅಭಿನಯಿಸಿರೋದು ಮೊಬೈಲ್ ಕಂಪೆನಿಯ ಜಾಹೀರಾತೊಂದರಲ್ಲಿ. ಈ ವಿಡಿಯೋ ವೈರಲ್ ಆಗುತ್ತಿದೆ. ರಾಜಮೌಳಿ ಅವರು ಸಿನಿಮಾದಲ್ಲೂ ನಟಿಸಬೇಕು ಎಂದು ಅನೇಕರು ಬೇಡಿಕೆ ಇಟ್ಟಿದ್ದಾರೆ.

ರಾಜಮೌಳಿ ಅವರಿಗೆ ನಟನೆ ಹೊಸದೇನು ಅಲ್ಲ. ನಿರ್ದೇಶನದಲ್ಲಿ ಪಳಗಿರುವ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು.  ಎಲ್ಲಕ್ಕಿಂತ ಮುಖ್ಯವಾಗಿ ಜನಪ್ರಿಯತೆ ಇದೆ. ಈ ಕಾರಣಕ್ಕೆ ಅನೇಕ ಕಂಪನಿಗಳು ಜಾಹೀರಾತಿಗಾಗಿ ರಾಜಮೌಳಿ ಅವರಿಗೆ ಆಹ್ವಾನ ನೀಡುತ್ತಿವೆ. ಈ ಪೈಕಿ ಮೊಬೈಲ್ ಕಂಪನಿಯ ಅಡ್ವಟೈಸ್​ಮೆಂಟ್​ನಲ್ಲಿ ಅವರು ನಟಿಸಿದ್ದಾರೆ.

ಇದರಲ್ಲಿ ರಾಜಮೌಳಿ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳಿಂದ ಇದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜಮೌಳಿ ಅವರು ನಿರ್ದೇಶನದ ಜೊತೆ ನಟನೆಯಲ್ಲೂ ಬ್ಯುಸಿ ಆಗಬೇಕು ಎಂಬುದು ಅನೇಕರ ಕೋರಿಕೆ

View this post on Instagram

A post shared by SS Rajamouli (@ssrajamouli)

ಇದನ್ನೂ ಓದಿ: SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?

ಪ್ರತಿ ಸಿನಿಮಾ ತೆರೆಕಂಡ ಬಳಿಕ ಮುಂದಿನ ಚಿತ್ರದ ಸ್ಕ್ರಿಪ್ಟ್ ಕೆಲಸಕ್ಕೆ ರಾಜಮೌಳಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ‘ಆರ್​ಆರ್​​ಆರ್​’ ರಿಲೀಸ್ ಆದ ಬಳಿಕ ಅವರ ಮುಂದಿನ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಮಹೇಶ್ ಬಾಬು ಜೊತೆ ಅವರು ಕೈ ಜೋಡಿಸಿದ್ದಾರೆ. ಇತ್ತೀಚೆಗೆ ರಾಜಮೌಳಿ ಅವರು ಕುಟುಂಬದ ಸಮೇತ ಪ್ರವಾಸಕ್ಕೆ ತೆರಳಿದ್ದರು. ತಮಿಳುನಾಡಿನ ತೂತುಕುಡಿಯಲ್ಲಿ ಅವರು ಸಮಯ ಕಳೆದಿದ್ದರು. ಈ ಫೋಟೋ ವೈರಲ್ ಆಗಿತ್ತು.

ಮಹೇಶ್ ಬಾಬು ಅವರ ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳು ವಿಳಂಬ ಆಗುತ್ತಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕವೇ ಅವರು ರಾಜಮೌಳಿ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ