AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ನಿರ್ದೇಶನದಲ್ಲಿ ಪಳಗಿರುವ ರಾಜಮೌಳಿ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jun 29, 2023 | 7:09 AM

Share

ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಅವರು ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಪಡೆದ ನಂತರದಲ್ಲಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈಗ ರಾಜಮೌಳಿ ಅವರು ಡಬಲ್ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಅಂದಹಾಗೆ, ರಾಜಮೌಳಿ ಅವರು ಯಾವುದೋ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರು ಅಭಿನಯಿಸಿರೋದು ಮೊಬೈಲ್ ಕಂಪೆನಿಯ ಜಾಹೀರಾತೊಂದರಲ್ಲಿ. ಈ ವಿಡಿಯೋ ವೈರಲ್ ಆಗುತ್ತಿದೆ. ರಾಜಮೌಳಿ ಅವರು ಸಿನಿಮಾದಲ್ಲೂ ನಟಿಸಬೇಕು ಎಂದು ಅನೇಕರು ಬೇಡಿಕೆ ಇಟ್ಟಿದ್ದಾರೆ.

ರಾಜಮೌಳಿ ಅವರಿಗೆ ನಟನೆ ಹೊಸದೇನು ಅಲ್ಲ. ನಿರ್ದೇಶನದಲ್ಲಿ ಪಳಗಿರುವ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು.  ಎಲ್ಲಕ್ಕಿಂತ ಮುಖ್ಯವಾಗಿ ಜನಪ್ರಿಯತೆ ಇದೆ. ಈ ಕಾರಣಕ್ಕೆ ಅನೇಕ ಕಂಪನಿಗಳು ಜಾಹೀರಾತಿಗಾಗಿ ರಾಜಮೌಳಿ ಅವರಿಗೆ ಆಹ್ವಾನ ನೀಡುತ್ತಿವೆ. ಈ ಪೈಕಿ ಮೊಬೈಲ್ ಕಂಪನಿಯ ಅಡ್ವಟೈಸ್​ಮೆಂಟ್​ನಲ್ಲಿ ಅವರು ನಟಿಸಿದ್ದಾರೆ.

ಇದರಲ್ಲಿ ರಾಜಮೌಳಿ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳಿಂದ ಇದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜಮೌಳಿ ಅವರು ನಿರ್ದೇಶನದ ಜೊತೆ ನಟನೆಯಲ್ಲೂ ಬ್ಯುಸಿ ಆಗಬೇಕು ಎಂಬುದು ಅನೇಕರ ಕೋರಿಕೆ

View this post on Instagram

A post shared by SS Rajamouli (@ssrajamouli)

ಇದನ್ನೂ ಓದಿ: SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?

ಪ್ರತಿ ಸಿನಿಮಾ ತೆರೆಕಂಡ ಬಳಿಕ ಮುಂದಿನ ಚಿತ್ರದ ಸ್ಕ್ರಿಪ್ಟ್ ಕೆಲಸಕ್ಕೆ ರಾಜಮೌಳಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ‘ಆರ್​ಆರ್​​ಆರ್​’ ರಿಲೀಸ್ ಆದ ಬಳಿಕ ಅವರ ಮುಂದಿನ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಮಹೇಶ್ ಬಾಬು ಜೊತೆ ಅವರು ಕೈ ಜೋಡಿಸಿದ್ದಾರೆ. ಇತ್ತೀಚೆಗೆ ರಾಜಮೌಳಿ ಅವರು ಕುಟುಂಬದ ಸಮೇತ ಪ್ರವಾಸಕ್ಕೆ ತೆರಳಿದ್ದರು. ತಮಿಳುನಾಡಿನ ತೂತುಕುಡಿಯಲ್ಲಿ ಅವರು ಸಮಯ ಕಳೆದಿದ್ದರು. ಈ ಫೋಟೋ ವೈರಲ್ ಆಗಿತ್ತು.

ಮಹೇಶ್ ಬಾಬು ಅವರ ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳು ವಿಳಂಬ ಆಗುತ್ತಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕವೇ ಅವರು ರಾಜಮೌಳಿ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು