AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?

ನಿರ್ದೇಶನದಲ್ಲಿ ಪಳಗಿರುವ ರಾಜಮೌಳಿ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು

SS Rajamouli: ಡಬಲ್ ರೋಲ್​ನಲ್ಲಿ ಮಿಂಚಿದ ನಟ ಎಸ್​.ಎಸ್. ರಾಜಮೌಳಿ; ಅರೆ ಇದೇನಿದು ಹೊಸ ಅಪ್​ಡೇಟ್?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jun 29, 2023 | 7:09 AM

Share

ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಅವರು ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಪಡೆದ ನಂತರದಲ್ಲಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈಗ ರಾಜಮೌಳಿ ಅವರು ಡಬಲ್ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಅಂದಹಾಗೆ, ರಾಜಮೌಳಿ ಅವರು ಯಾವುದೋ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರು ಅಭಿನಯಿಸಿರೋದು ಮೊಬೈಲ್ ಕಂಪೆನಿಯ ಜಾಹೀರಾತೊಂದರಲ್ಲಿ. ಈ ವಿಡಿಯೋ ವೈರಲ್ ಆಗುತ್ತಿದೆ. ರಾಜಮೌಳಿ ಅವರು ಸಿನಿಮಾದಲ್ಲೂ ನಟಿಸಬೇಕು ಎಂದು ಅನೇಕರು ಬೇಡಿಕೆ ಇಟ್ಟಿದ್ದಾರೆ.

ರಾಜಮೌಳಿ ಅವರಿಗೆ ನಟನೆ ಹೊಸದೇನು ಅಲ್ಲ. ನಿರ್ದೇಶನದಲ್ಲಿ ಪಳಗಿರುವ ಅವರಿಗೆ ಹೇಗೆ ನಟಿಸಬೇಕು ಎಂಬುದು ಗೊತ್ತಿದೆ. ಈ ಮೊದಲು ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು.  ಎಲ್ಲಕ್ಕಿಂತ ಮುಖ್ಯವಾಗಿ ಜನಪ್ರಿಯತೆ ಇದೆ. ಈ ಕಾರಣಕ್ಕೆ ಅನೇಕ ಕಂಪನಿಗಳು ಜಾಹೀರಾತಿಗಾಗಿ ರಾಜಮೌಳಿ ಅವರಿಗೆ ಆಹ್ವಾನ ನೀಡುತ್ತಿವೆ. ಈ ಪೈಕಿ ಮೊಬೈಲ್ ಕಂಪನಿಯ ಅಡ್ವಟೈಸ್​ಮೆಂಟ್​ನಲ್ಲಿ ಅವರು ನಟಿಸಿದ್ದಾರೆ.

ಇದರಲ್ಲಿ ರಾಜಮೌಳಿ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳಿಂದ ಇದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜಮೌಳಿ ಅವರು ನಿರ್ದೇಶನದ ಜೊತೆ ನಟನೆಯಲ್ಲೂ ಬ್ಯುಸಿ ಆಗಬೇಕು ಎಂಬುದು ಅನೇಕರ ಕೋರಿಕೆ

View this post on Instagram

A post shared by SS Rajamouli (@ssrajamouli)

ಇದನ್ನೂ ಓದಿ: SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?

ಪ್ರತಿ ಸಿನಿಮಾ ತೆರೆಕಂಡ ಬಳಿಕ ಮುಂದಿನ ಚಿತ್ರದ ಸ್ಕ್ರಿಪ್ಟ್ ಕೆಲಸಕ್ಕೆ ರಾಜಮೌಳಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ‘ಆರ್​ಆರ್​​ಆರ್​’ ರಿಲೀಸ್ ಆದ ಬಳಿಕ ಅವರ ಮುಂದಿನ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಮಹೇಶ್ ಬಾಬು ಜೊತೆ ಅವರು ಕೈ ಜೋಡಿಸಿದ್ದಾರೆ. ಇತ್ತೀಚೆಗೆ ರಾಜಮೌಳಿ ಅವರು ಕುಟುಂಬದ ಸಮೇತ ಪ್ರವಾಸಕ್ಕೆ ತೆರಳಿದ್ದರು. ತಮಿಳುನಾಡಿನ ತೂತುಕುಡಿಯಲ್ಲಿ ಅವರು ಸಮಯ ಕಳೆದಿದ್ದರು. ಈ ಫೋಟೋ ವೈರಲ್ ಆಗಿತ್ತು.

ಮಹೇಶ್ ಬಾಬು ಅವರ ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳು ವಿಳಂಬ ಆಗುತ್ತಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕವೇ ಅವರು ರಾಜಮೌಳಿ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ