AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ‘ಆರ್​ಆರ್​ಆರ್​ 2’ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಲ್ವಾ? ಶಾಕಿಂಗ್​ ಹೇಳಿಕೆ ನೀಡಿದ ವಿಜಯೇಂದ್ರ ಪ್ರಸಾದ್​

RRR Sequel: ರಾಜಮೌಳಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಆರ್​ಆರ್​ಆರ್​ 2’ ಸಿನಿಮಾಗೆ ಬೇರೆ ಯಾರಾದರೂ ನಿರ್ದೇಶನ ಮಾಡಿದರೆ ಅದನ್ನು ಅಭಿಮಾನಿಗಳು ಒಪ್ಪಿಕೊಳ್ಳುವುದು ಕಷ್ಟ.

SS Rajamouli: ‘ಆರ್​ಆರ್​ಆರ್​ 2’ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಲ್ವಾ? ಶಾಕಿಂಗ್​ ಹೇಳಿಕೆ ನೀಡಿದ ವಿಜಯೇಂದ್ರ ಪ್ರಸಾದ್​
ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ
Follow us
ಮದನ್​ ಕುಮಾರ್​
|

Updated on: Jul 10, 2023 | 7:00 PM

ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಕೂಡ ‘ಆರ್​ಆರ್​ಆರ್​’ ಸಿನಿಮಾ (RRR Movie) ಸದ್ದು ಮಾಡಿತು. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಬಂದವು. ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ನಟನೆ ಮತ್ತು ಆ್ಯಕ್ಷನ್​ಗೆ ಪ್ರೇಕ್ಷಕರು ಫಿದಾ ಆದರು. ಈ ಸಿನಿಮಾದಿಂದ ನಿರ್ದೇಶಕ ರಾಜಮೌಳಿ (Rajamouli) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಅಂದಹಾಗೆ, ‘ಆರ್​ಆರ್​ಆರ್​’ ಸಿನಿಮಾಗೆ ಸೀಕ್ವೆಲ್​ ಮಾಡುವ ಪ್ಲ್ಯಾನ್​ ಕೂಡ ಜಾಲ್ತಿಯಲ್ಲಿದೆ. ಆದರೆ ಅದಕ್ಕೆ ರಾಜಮೌಳಿ ಅವರು ನಿರ್ದೇಶನ ಮಾಡುತ್ತಾರೋ ಅಥವಾ ಎಲ್ಲವೋ ಎಂಬ ಬಗ್ಗೆ ಅನುಮಾನ ಮೂಡಿದೆ. ಈ ಕುರಿತು ರಾಜಮೌಳಿ ಅವರ ತಂದೆ, ಕಥೆಗಾರ ವಿಜಯೇಂದ್ರ ಪ್ರಸಾದ್​ (Vijayendra Prasad) ಅವರು ಹೇಳಿಕೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿಜಯೇಂದ್ರ ಪ್ರಸಾದ್​ ಅವರು ‘ಆರ್​ಆರ್​ಆರ್​ 2’ ಬಗ್ಗೆ ಮಾತನಾಡಿದ್ದಾರೆ. ‘ಆರ್​ಆರ್​ಆರ್​’ ಚಿತ್ರದ ಸೀಕ್ವೆಲ್​ಗೆ ಕಥೆ ಈಗಾಗಲೇ ಫೈನಲ್​ ಆಗಿದೆ. ‘ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್ ಅವರೇ ಸೀಕ್ವೆಲ್​ನಲ್ಲಿ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಇದು ಹಾಲಿವುಡ್​ ಸಿನಿಮಾಗಳ ಗುಣಮಟ್ಟದಲ್ಲಿ ಸಿದ್ಧವಾಗಲಿದೆ. ಸ್ವತಃ ರಾಜಮೌಳಿ ನಿರ್ದೇಶನ ಮಾಡಬಹುದು ಅಥವಾ ಅವರ ಮಾರ್ಗದರ್ಶನದಲ್ಲಿ ಬೇರೆ ಯಾರಾದರೂ ನಿರ್ದೇಶನ ಮಾಡಬಹುದು’ ಎಂದು ವಿಜಯೇಂದ್ರ ಪ್ರಸಾದ್​ ಅವರು ಹೇಳಿರುವುದು ಅಚ್ಚರಿ ಉಂಟು ಮಾಡಿದೆ.

ಇದನ್ನೂ ಓದಿ: SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ

ಭಾರತೀಯ ಚಿತ್ರರಂಗದಲ್ಲಿ ರಾಜಮೌಳಿ ಅವರು ಸ್ಟಾರ್​ ನಿರ್ದೇಶಕನಾಗಿ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಆರ್​ಆರ್​ಆರ್​ 2’ ಸಿನಿಮಾಗೆ ಬೇರೆ ಯಾರಾದರೂ ನಿರ್ದೇಶನ ಮಾಡಿದರೆ ಅದನ್ನು ಅಭಿಮಾನಿಗಳು ಒಪ್ಪಿಕೊಳ್ಳುವುದು ಕಷ್ಟ. ಹಾಗಾಗಿ ಅಂತಿಮವಾಗಿ ಚಿತ್ರತಂಡದವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ

ಟಾಲಿವುಡ್​ ಸ್ಟಾರ್​ ಹೀರೋ ಮಹೇಶ್​ ಬಾಬು ಜೊತೆಗೆ ರಾಜಮೌಳಿ ಅವರು ಒಂದು ಸಿನಿಮಾ ಮಾಡಬೇಕಿದೆ. ಆ ಚಿತ್ರಕ್ಕಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಳಿಕ ಅವರು ಮಹಾಭಾರತದ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಿದ್ದಾರೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಮಹಾಭಾರತದ ಕಥೆಯನ್ನು ಇಟ್ಟುಕೊಂಡು ರಾಜಮೌಳಿ ನಿರ್ದೇಶನ ಮಾಡಲಿರುವ ಚಿತ್ರವು 10 ಪಾರ್ಟ್​ಗಳಲ್ಲಿ ಮೂಡಿಬರಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ