AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ಮರಾಠಿ ಚಿತ್ರರಂಗದ ಖ್ಯಾತ ನಟ ದೇವದತ್ತ ನಾಗೆ ಅವರನ್ನು ನಿರ್ದೇಶಕ ರಾಜಮೌಳಿ ಭೇಟಿ ಮಾಡಿದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದ ಸಲುವಾಗಿಯೇ ಈ ಭೇಟಿ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ದೇವದತ್ತ ನಾಗೆ ಮತ್ತು ರಾಜಮೌಳಿ ಅವರು ಜೊತೆಗಿರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?
ದೇವದತ್ತ ನಾಗೆ, ರಾಜಮೌಳಿ
ಮದನ್​ ಕುಮಾರ್​
|

Updated on: May 27, 2024 | 10:52 PM

Share

ನಿರ್ದೇಶಕ ರಾಜಮೌಳಿ (SS Rajamouli) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಮಹೇಶ್​ ಬಾಬು (Mahesh Babu) ಜೊತೆ ಅವರು ಹೊಸ ಸಿನಿಮಾ ಮಾಡುವುದು ಗೊತ್ತೇ ಇದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈಗ ಅವರು ಮರಾಠಿಯ ಖ್ಯಾತ ನಟ ದೇವದತ್ತ ನಾಗೆ ಜೊತೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳಿಗೆ ಕೌತುಕ ಮೂಡಿದೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ದೇವದತ್ತ ನಾಗೆ (Devdatta Nage) ಅವರು ಆಂಜನೇಯನ ಮಾತ್ರ ಮಾಡಿದ್ದರು. ಆ ಪಾತ್ರದಿಂದ ಅವರ ಜನಪ್ರಿಯತೆ ಹೆಚ್ಚಾಯಿತು.

ರಾಜಮೌಳಿ ಮತ್ತು ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಅದನ್ನು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಕೂಡ ಬಹಿರಂಗ ಆಗಿಲ್ಲ. ಸದ್ಯಕ್ಕೆ ರಾಜಮೌಳಿ ಅವರು ಪಾತ್ರವರ್ಗದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ದೇವದತ್ತ ನಾಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ನಿರ್ದೇಶಕ ರಾಜಮೌಳಿ ಅವರನ್ನು ಭೇಟಿಯಾದ ಈ ಕ್ಷಣ ತುಂಬ ವಿಶೇಷವಾದದ್ದು ಎಂದು ಅವರು ಬರೆದುಕೊಂಡಿದ್ದಾರೆ. ಈ ಭೇಟಿಗಾಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾರಣ ಇಲ್ಲದೇ ಈ ಭೇಟಿ ನಡೆದಿರಲು ಸಾಧ್ಯವಿಲ್ಲ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸುದ್ದಿ ಹೊರಬರಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಮರಾಠಿ ಕಿರುತೆರೆ ಮತ್ತು ಸಿನಿಮಾದಲ್ಲಿ ದೇವದತ್ತ ನಾಗೆ ಅವರು ಜನಪ್ರಿಯತೆ ಪಡೆದಿದ್ದಾರೆ. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ನಟನೆ ಮಾತ್ರವಲ್ಲದೇ ಕಟ್ಟುಮಸ್ತಾದ ದೇಹದ ಕಾರಣದಿಂದಲೂ ಅವರು ಗಮನ ಸೆಳೆದಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರ ಸಿಕ್ಕಾಗ ಅವರ ಅಭಿಮಾನಿಗಳಿಗೆ ಖುಷಿ ಆಗಿತ್ತು. ಆದರೆ ಆ ಸಿನಿಮಾದಲ್ಲಿ ಅವರನ್ನು ಸರಿಯಾಗಿ ತೋರಿಸಿಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದರು. ಅವರ ಪ್ರತಿಭೆಗೆ ತಕ್ಕಂತಹ ಪಾತ್ರವನ್ನು ರಾಜಮೌಳಿ ನೀಡಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್