AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ಮರಾಠಿ ಚಿತ್ರರಂಗದ ಖ್ಯಾತ ನಟ ದೇವದತ್ತ ನಾಗೆ ಅವರನ್ನು ನಿರ್ದೇಶಕ ರಾಜಮೌಳಿ ಭೇಟಿ ಮಾಡಿದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದ ಸಲುವಾಗಿಯೇ ಈ ಭೇಟಿ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ದೇವದತ್ತ ನಾಗೆ ಮತ್ತು ರಾಜಮೌಳಿ ಅವರು ಜೊತೆಗಿರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?
ದೇವದತ್ತ ನಾಗೆ, ರಾಜಮೌಳಿ
ಮದನ್​ ಕುಮಾರ್​
|

Updated on: May 27, 2024 | 10:52 PM

Share

ನಿರ್ದೇಶಕ ರಾಜಮೌಳಿ (SS Rajamouli) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಮಹೇಶ್​ ಬಾಬು (Mahesh Babu) ಜೊತೆ ಅವರು ಹೊಸ ಸಿನಿಮಾ ಮಾಡುವುದು ಗೊತ್ತೇ ಇದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈಗ ಅವರು ಮರಾಠಿಯ ಖ್ಯಾತ ನಟ ದೇವದತ್ತ ನಾಗೆ ಜೊತೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳಿಗೆ ಕೌತುಕ ಮೂಡಿದೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ದೇವದತ್ತ ನಾಗೆ (Devdatta Nage) ಅವರು ಆಂಜನೇಯನ ಮಾತ್ರ ಮಾಡಿದ್ದರು. ಆ ಪಾತ್ರದಿಂದ ಅವರ ಜನಪ್ರಿಯತೆ ಹೆಚ್ಚಾಯಿತು.

ರಾಜಮೌಳಿ ಮತ್ತು ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಅದನ್ನು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಕೂಡ ಬಹಿರಂಗ ಆಗಿಲ್ಲ. ಸದ್ಯಕ್ಕೆ ರಾಜಮೌಳಿ ಅವರು ಪಾತ್ರವರ್ಗದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ದೇವದತ್ತ ನಾಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ನಿರ್ದೇಶಕ ರಾಜಮೌಳಿ ಅವರನ್ನು ಭೇಟಿಯಾದ ಈ ಕ್ಷಣ ತುಂಬ ವಿಶೇಷವಾದದ್ದು ಎಂದು ಅವರು ಬರೆದುಕೊಂಡಿದ್ದಾರೆ. ಈ ಭೇಟಿಗಾಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾರಣ ಇಲ್ಲದೇ ಈ ಭೇಟಿ ನಡೆದಿರಲು ಸಾಧ್ಯವಿಲ್ಲ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸುದ್ದಿ ಹೊರಬರಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಮರಾಠಿ ಕಿರುತೆರೆ ಮತ್ತು ಸಿನಿಮಾದಲ್ಲಿ ದೇವದತ್ತ ನಾಗೆ ಅವರು ಜನಪ್ರಿಯತೆ ಪಡೆದಿದ್ದಾರೆ. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ನಟನೆ ಮಾತ್ರವಲ್ಲದೇ ಕಟ್ಟುಮಸ್ತಾದ ದೇಹದ ಕಾರಣದಿಂದಲೂ ಅವರು ಗಮನ ಸೆಳೆದಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರ ಸಿಕ್ಕಾಗ ಅವರ ಅಭಿಮಾನಿಗಳಿಗೆ ಖುಷಿ ಆಗಿತ್ತು. ಆದರೆ ಆ ಸಿನಿಮಾದಲ್ಲಿ ಅವರನ್ನು ಸರಿಯಾಗಿ ತೋರಿಸಿಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದರು. ಅವರ ಪ್ರತಿಭೆಗೆ ತಕ್ಕಂತಹ ಪಾತ್ರವನ್ನು ರಾಜಮೌಳಿ ನೀಡಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ