‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ಮರಾಠಿ ಚಿತ್ರರಂಗದ ಖ್ಯಾತ ನಟ ದೇವದತ್ತ ನಾಗೆ ಅವರನ್ನು ನಿರ್ದೇಶಕ ರಾಜಮೌಳಿ ಭೇಟಿ ಮಾಡಿದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದ ಸಲುವಾಗಿಯೇ ಈ ಭೇಟಿ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ದೇವದತ್ತ ನಾಗೆ ಮತ್ತು ರಾಜಮೌಳಿ ಅವರು ಜೊತೆಗಿರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?
ದೇವದತ್ತ ನಾಗೆ, ರಾಜಮೌಳಿ
Follow us
|

Updated on: May 27, 2024 | 10:52 PM

ನಿರ್ದೇಶಕ ರಾಜಮೌಳಿ (SS Rajamouli) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಮಹೇಶ್​ ಬಾಬು (Mahesh Babu) ಜೊತೆ ಅವರು ಹೊಸ ಸಿನಿಮಾ ಮಾಡುವುದು ಗೊತ್ತೇ ಇದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈಗ ಅವರು ಮರಾಠಿಯ ಖ್ಯಾತ ನಟ ದೇವದತ್ತ ನಾಗೆ ಜೊತೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳಿಗೆ ಕೌತುಕ ಮೂಡಿದೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ದೇವದತ್ತ ನಾಗೆ (Devdatta Nage) ಅವರು ಆಂಜನೇಯನ ಮಾತ್ರ ಮಾಡಿದ್ದರು. ಆ ಪಾತ್ರದಿಂದ ಅವರ ಜನಪ್ರಿಯತೆ ಹೆಚ್ಚಾಯಿತು.

ರಾಜಮೌಳಿ ಮತ್ತು ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಅದನ್ನು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಕೂಡ ಬಹಿರಂಗ ಆಗಿಲ್ಲ. ಸದ್ಯಕ್ಕೆ ರಾಜಮೌಳಿ ಅವರು ಪಾತ್ರವರ್ಗದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ದೇವದತ್ತ ನಾಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ನಿರ್ದೇಶಕ ರಾಜಮೌಳಿ ಅವರನ್ನು ಭೇಟಿಯಾದ ಈ ಕ್ಷಣ ತುಂಬ ವಿಶೇಷವಾದದ್ದು ಎಂದು ಅವರು ಬರೆದುಕೊಂಡಿದ್ದಾರೆ. ಈ ಭೇಟಿಗಾಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾರಣ ಇಲ್ಲದೇ ಈ ಭೇಟಿ ನಡೆದಿರಲು ಸಾಧ್ಯವಿಲ್ಲ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸುದ್ದಿ ಹೊರಬರಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಮರಾಠಿ ಕಿರುತೆರೆ ಮತ್ತು ಸಿನಿಮಾದಲ್ಲಿ ದೇವದತ್ತ ನಾಗೆ ಅವರು ಜನಪ್ರಿಯತೆ ಪಡೆದಿದ್ದಾರೆ. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ನಟನೆ ಮಾತ್ರವಲ್ಲದೇ ಕಟ್ಟುಮಸ್ತಾದ ದೇಹದ ಕಾರಣದಿಂದಲೂ ಅವರು ಗಮನ ಸೆಳೆದಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರ ಸಿಕ್ಕಾಗ ಅವರ ಅಭಿಮಾನಿಗಳಿಗೆ ಖುಷಿ ಆಗಿತ್ತು. ಆದರೆ ಆ ಸಿನಿಮಾದಲ್ಲಿ ಅವರನ್ನು ಸರಿಯಾಗಿ ತೋರಿಸಿಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದರು. ಅವರ ಪ್ರತಿಭೆಗೆ ತಕ್ಕಂತಹ ಪಾತ್ರವನ್ನು ರಾಜಮೌಳಿ ನೀಡಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ