AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ಮರಾಠಿ ಚಿತ್ರರಂಗದ ಖ್ಯಾತ ನಟ ದೇವದತ್ತ ನಾಗೆ ಅವರನ್ನು ನಿರ್ದೇಶಕ ರಾಜಮೌಳಿ ಭೇಟಿ ಮಾಡಿದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದ ಸಲುವಾಗಿಯೇ ಈ ಭೇಟಿ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ದೇವದತ್ತ ನಾಗೆ ಮತ್ತು ರಾಜಮೌಳಿ ಅವರು ಜೊತೆಗಿರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?
ದೇವದತ್ತ ನಾಗೆ, ರಾಜಮೌಳಿ
ಮದನ್​ ಕುಮಾರ್​
|

Updated on: May 27, 2024 | 10:52 PM

Share

ನಿರ್ದೇಶಕ ರಾಜಮೌಳಿ (SS Rajamouli) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಮಹೇಶ್​ ಬಾಬು (Mahesh Babu) ಜೊತೆ ಅವರು ಹೊಸ ಸಿನಿಮಾ ಮಾಡುವುದು ಗೊತ್ತೇ ಇದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈಗ ಅವರು ಮರಾಠಿಯ ಖ್ಯಾತ ನಟ ದೇವದತ್ತ ನಾಗೆ ಜೊತೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಅಭಿಮಾನಿಗಳಿಗೆ ಕೌತುಕ ಮೂಡಿದೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ದೇವದತ್ತ ನಾಗೆ (Devdatta Nage) ಅವರು ಆಂಜನೇಯನ ಮಾತ್ರ ಮಾಡಿದ್ದರು. ಆ ಪಾತ್ರದಿಂದ ಅವರ ಜನಪ್ರಿಯತೆ ಹೆಚ್ಚಾಯಿತು.

ರಾಜಮೌಳಿ ಮತ್ತು ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಅದನ್ನು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಕೂಡ ಬಹಿರಂಗ ಆಗಿಲ್ಲ. ಸದ್ಯಕ್ಕೆ ರಾಜಮೌಳಿ ಅವರು ಪಾತ್ರವರ್ಗದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ದೇವದತ್ತ ನಾಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ನಿರ್ದೇಶಕ ರಾಜಮೌಳಿ ಅವರನ್ನು ಭೇಟಿಯಾದ ಈ ಕ್ಷಣ ತುಂಬ ವಿಶೇಷವಾದದ್ದು ಎಂದು ಅವರು ಬರೆದುಕೊಂಡಿದ್ದಾರೆ. ಈ ಭೇಟಿಗಾಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾರಣ ಇಲ್ಲದೇ ಈ ಭೇಟಿ ನಡೆದಿರಲು ಸಾಧ್ಯವಿಲ್ಲ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸುದ್ದಿ ಹೊರಬರಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಮರಾಠಿ ಕಿರುತೆರೆ ಮತ್ತು ಸಿನಿಮಾದಲ್ಲಿ ದೇವದತ್ತ ನಾಗೆ ಅವರು ಜನಪ್ರಿಯತೆ ಪಡೆದಿದ್ದಾರೆ. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ನಟನೆ ಮಾತ್ರವಲ್ಲದೇ ಕಟ್ಟುಮಸ್ತಾದ ದೇಹದ ಕಾರಣದಿಂದಲೂ ಅವರು ಗಮನ ಸೆಳೆದಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರ ಸಿಕ್ಕಾಗ ಅವರ ಅಭಿಮಾನಿಗಳಿಗೆ ಖುಷಿ ಆಗಿತ್ತು. ಆದರೆ ಆ ಸಿನಿಮಾದಲ್ಲಿ ಅವರನ್ನು ಸರಿಯಾಗಿ ತೋರಿಸಿಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದರು. ಅವರ ಪ್ರತಿಭೆಗೆ ತಕ್ಕಂತಹ ಪಾತ್ರವನ್ನು ರಾಜಮೌಳಿ ನೀಡಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!