AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಜನವರಿಯಲ್ಲಿ ಮಹೇಶ್ ಬಾಬು ಜರ್ಮನಿಗೆ ತೆರಳಿದ್ದರು. ಅಲ್ಲಿ ಅವರು ಟ್ರೇನಿಂಗ್ ಪಡೆದರು. ಈ ತರಬೇತಿ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ಸಿದ್ಧತೆಯಲ್ಲಿ ಇದ್ದಾರೆ. ಇನ್ನೆರಡು ತಿಂಗಳು ಅವರು ಸಿನಿಮಾ ಸಿದ್ಧತೆಯಲ್ಲಿ ಇರಲಿದ್ದಾರಂತೆ

SS Rajamouli: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 01, 2024 | 7:35 AM

Share

ಮಹೇಶ್ ಬಾಬು ಹಾಗೂ ರಾಜಮೌಳಿ (SS Rajamouli) ಸಿನಿಮಾ ಮಾಡುತ್ತಾರೆ ಎಂದಾಗಲೇ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿತ್ತು. ರಾಜಮೌಳಿ ಅವರ ನಿರ್ದೇಶನದ ಕೊನೆಯ ಸಿನಿಮಾ ‘ಆರ್​ಆರ್​ಆರ್​’ ರಿಲೀಸ್ ಆಗಿ ಎರಡು ವರ್ಷ ಕಳೆದಿದೆ. ಈ ಅವಧಿಯಲ್ಲಿ ಅವರು ಮುಂದಿನ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲೇ ಬ್ಯುಸಿ ಆದರು. ಮಹೇಶ್ ಬಾಬು ಅವರ ನಟನೆಯ ‘ಗುಂಟೂರು ಖಾರಂ’ ರಿಲೀಸ್ ಆಗಿ ಸೋಲು ಕಂಡಿತು. ಈಗ ಇಬ್ಬರೂ ಒಂದಾಗುತ್ತಿದ್ದಾರೆ. ಈ ಸಿನಿಮಾ ಸೆಟ್ಟೋರೋದು ಯಾವಾಗ ಎನ್ನುವುದು ಇನ್ನೂ ಘೋಷಣೆ ಆಗಿಲ್ಲ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ.

ಸದ್ಯ ಮಹೇಶ್ ಬಾಬು ಅವರು ರಾಜಮೌಳಿ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ಗುಂಟೂರು ಖಾರಂ’ ರಿಲೀಸ್ ಆದ ಬಳಿಕ ಜನವರಿಯಲ್ಲಿ ಅವರು ಜರ್ಮನಿಗೆ ತೆರಳಿದ್ದರು. ಅಲ್ಲಿ ಅವರು ಟ್ರೇನಿಂಗ್ ಪಡೆದರು. ಈ ತರಬೇತಿ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ಸಿದ್ಧತೆಯಲ್ಲಿ ಇದ್ದಾರೆ. ಇನ್ನೆರಡು ತಿಂಗಳು ಅವರು ಸಿನಿಮಾ ಸಿದ್ಧತೆಯಲ್ಲಿ ಇರಲಿದ್ದಾರಂತೆ. ಆಗಸ್ಟ್ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ.

ರಾಜಮೌಳಿ ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ಅದಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಪ್ರತಿಯೊಂದು ವಿಚಾರವನ್ನೂ ಅವರು ಬರೆದಿಡುತ್ತಾರೆ. ಅದರಂತೆ ಸಿನಿಮಾ ಮೂಡಿ ಬರಲು ಅವರು ಪ್ರಯತ್ನ ಮಾಡುತ್ತಾರೆ. ಮಹೇಶ್ ಬಾಬು ಚಿತ್ರಕ್ಕಾಗಿ ರಾಜಮೌಳಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಬೇರೆ ಬೇರೆ ಭಾಷೆಯ ಕಲಾವಿದರನ್ನು ಈ ಸಿನಿಮಾದಲ್ಲಿ ಹಾಕಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ರಾಜಮೌಳಿ ಅವರ ಸಿನಿಮಾಗಳಲ್ಲಿ ದೃಶ್ಯವೈಭವ ಇರುತ್ತದೆ. ಪ್ರತಿ ದೃಶ್ಯವನ್ನು ಅವರು ಅದ್ದೂರಿಯಾಗಿ ತೆರೆಮೇಲೆ ತರುತ್ತಾರೆ. ಈ ಕಾರಣಕ್ಕೆ ಅವರ ಸಿನಿಮಾಗಳು ಫ್ಯಾನ್ಸ್​ಗೆ ಹೆಚ್ಚು ಇಷ್ಟ ಆಗುತ್ತದೆ. ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ರಾಜಮೌಳಿ ಸಿನಿಮಾಗಳಿಗೆ ಕಥೆ ಬರೆಯುತ್ತಾರೆ. ಮಹೇಶ್ ಬಾಬು-ರಾಜಮೌಳಿ ಸಿನಿಮಾಗೆ ಅವರೇ ಕಥೆ ಬರೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ