AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಜನವರಿಯಲ್ಲಿ ಮಹೇಶ್ ಬಾಬು ಜರ್ಮನಿಗೆ ತೆರಳಿದ್ದರು. ಅಲ್ಲಿ ಅವರು ಟ್ರೇನಿಂಗ್ ಪಡೆದರು. ಈ ತರಬೇತಿ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ಸಿದ್ಧತೆಯಲ್ಲಿ ಇದ್ದಾರೆ. ಇನ್ನೆರಡು ತಿಂಗಳು ಅವರು ಸಿನಿಮಾ ಸಿದ್ಧತೆಯಲ್ಲಿ ಇರಲಿದ್ದಾರಂತೆ

SS Rajamouli: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 01, 2024 | 7:35 AM

Share

ಮಹೇಶ್ ಬಾಬು ಹಾಗೂ ರಾಜಮೌಳಿ (SS Rajamouli) ಸಿನಿಮಾ ಮಾಡುತ್ತಾರೆ ಎಂದಾಗಲೇ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿತ್ತು. ರಾಜಮೌಳಿ ಅವರ ನಿರ್ದೇಶನದ ಕೊನೆಯ ಸಿನಿಮಾ ‘ಆರ್​ಆರ್​ಆರ್​’ ರಿಲೀಸ್ ಆಗಿ ಎರಡು ವರ್ಷ ಕಳೆದಿದೆ. ಈ ಅವಧಿಯಲ್ಲಿ ಅವರು ಮುಂದಿನ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲೇ ಬ್ಯುಸಿ ಆದರು. ಮಹೇಶ್ ಬಾಬು ಅವರ ನಟನೆಯ ‘ಗುಂಟೂರು ಖಾರಂ’ ರಿಲೀಸ್ ಆಗಿ ಸೋಲು ಕಂಡಿತು. ಈಗ ಇಬ್ಬರೂ ಒಂದಾಗುತ್ತಿದ್ದಾರೆ. ಈ ಸಿನಿಮಾ ಸೆಟ್ಟೋರೋದು ಯಾವಾಗ ಎನ್ನುವುದು ಇನ್ನೂ ಘೋಷಣೆ ಆಗಿಲ್ಲ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ.

ಸದ್ಯ ಮಹೇಶ್ ಬಾಬು ಅವರು ರಾಜಮೌಳಿ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ಗುಂಟೂರು ಖಾರಂ’ ರಿಲೀಸ್ ಆದ ಬಳಿಕ ಜನವರಿಯಲ್ಲಿ ಅವರು ಜರ್ಮನಿಗೆ ತೆರಳಿದ್ದರು. ಅಲ್ಲಿ ಅವರು ಟ್ರೇನಿಂಗ್ ಪಡೆದರು. ಈ ತರಬೇತಿ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ಸಿದ್ಧತೆಯಲ್ಲಿ ಇದ್ದಾರೆ. ಇನ್ನೆರಡು ತಿಂಗಳು ಅವರು ಸಿನಿಮಾ ಸಿದ್ಧತೆಯಲ್ಲಿ ಇರಲಿದ್ದಾರಂತೆ. ಆಗಸ್ಟ್ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ.

ರಾಜಮೌಳಿ ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ಅದಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಪ್ರತಿಯೊಂದು ವಿಚಾರವನ್ನೂ ಅವರು ಬರೆದಿಡುತ್ತಾರೆ. ಅದರಂತೆ ಸಿನಿಮಾ ಮೂಡಿ ಬರಲು ಅವರು ಪ್ರಯತ್ನ ಮಾಡುತ್ತಾರೆ. ಮಹೇಶ್ ಬಾಬು ಚಿತ್ರಕ್ಕಾಗಿ ರಾಜಮೌಳಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಬೇರೆ ಬೇರೆ ಭಾಷೆಯ ಕಲಾವಿದರನ್ನು ಈ ಸಿನಿಮಾದಲ್ಲಿ ಹಾಕಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ರಾಜಮೌಳಿ ಅವರ ಸಿನಿಮಾಗಳಲ್ಲಿ ದೃಶ್ಯವೈಭವ ಇರುತ್ತದೆ. ಪ್ರತಿ ದೃಶ್ಯವನ್ನು ಅವರು ಅದ್ದೂರಿಯಾಗಿ ತೆರೆಮೇಲೆ ತರುತ್ತಾರೆ. ಈ ಕಾರಣಕ್ಕೆ ಅವರ ಸಿನಿಮಾಗಳು ಫ್ಯಾನ್ಸ್​ಗೆ ಹೆಚ್ಚು ಇಷ್ಟ ಆಗುತ್ತದೆ. ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ರಾಜಮೌಳಿ ಸಿನಿಮಾಗಳಿಗೆ ಕಥೆ ಬರೆಯುತ್ತಾರೆ. ಮಹೇಶ್ ಬಾಬು-ರಾಜಮೌಳಿ ಸಿನಿಮಾಗೆ ಅವರೇ ಕಥೆ ಬರೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?