AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಮೌಳಿ ಕೈಗೆ ಸಿಗುತ್ತಿಲ್ಲ, ಫೋನ್ ಕೂಡ ಸ್ವಿಚ್​ ಆಫ್​’; ಎಂಎಂ ಕೀರವಾಣಿ

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ರಾಜಮೌಳಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಕಾರಣಕ್ಕೆ ‘ನಾ ಸಾಮಿ ರಂಗ’ ಸುದ್ದಿಗೋಷ್ಠಿಯಲ್ಲಿ ಕೀರವಾಣಿಗೆ ಈ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಗಿದೆ.

‘ರಾಜಮೌಳಿ ಕೈಗೆ ಸಿಗುತ್ತಿಲ್ಲ, ಫೋನ್ ಕೂಡ ಸ್ವಿಚ್​ ಆಫ್​’; ಎಂಎಂ ಕೀರವಾಣಿ
ರಾಜಮೌಳಿ-ಕೀರವಾಣಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 09, 2024 | 8:29 AM

Share

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರ ಖ್ಯಾತಿ ಹೆಚ್ಚಿದೆ. 2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಗೆದ್ದು ಅವರು ದಾಖಲೆ ಬರೆದಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರವಾಣಿಗೆ ಬರುತ್ತಿರುವ ಆಫರ್​ ಸಂಖ್ಯೆ ಕೂಡ ಹೆಚ್ಚಿದೆ. ಅವರಿಗೆ ಎಷ್ಟೇ ಆಫರ್ ಬಂದರೂ ರಾಜಮೌಳಿ ನಿರ್ದೇಶನದ ಸಿನಿಮಾ ಕೆಲಸಕ್ಕಾಗಿ ಬಿಡುವು ಮಾಡಿಕೊಳ್ಳುತ್ತಾರೆ. ಈ ಮಧ್ಯೆ ಅವರ ಕೈಗೆ ರಾಜಮೌಳಿ ಸಿಗುತ್ತಿಲ್ಲವಂತೆ. ಫೋನ್ ಮಾಡಿದರೆ ಸ್ವಿಚ್ ಆಫ್ ಬರುತ್ತಿದೆಯಂತೆ! ಈ ಬಗ್ಗೆ ಕೀರವಾಣಿ ಅವರು ಇತ್ತೀಚೆಗೆ ಮಾತನಾಡಿದ್ದಾರೆ.

‘ನಾ ಸಾಮಿ ರಂಗ’ ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ರಿಲೀಸ್ ಆಗಲಿದೆ. ಅಕ್ಕಿನೇನಿ ನಾಗಾರ್ಜುನ, ಕನ್ನಡದ ಆಶಿಕಾ ರಂಗನಾಥ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಕೀರವಾಣಿ ಕೂಡ ಪಾಲ್ಗೊಂಡಿದ್ದಾರೆ. ಈ ವೇಳೆ ಅವರಿಗೆ SSMB29 ಬಗ್ಗೆ ಪ್ರಶ್ನೆ ಮಾಡಲಾಗಿದೆ. ಈ ವೇಳೆ ಫನ್ನಿ ಆಗಿ ಉತ್ತರಿಸಿದ್ದಾರೆ ಕೀರವಾಣಿ.

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ, ‘SSMB29’ ಎಂದು ಹೆಸರು ಇಡಲಾಗಿದೆ. ಈ ಚಿತ್ರದ ಬಗ್ಗೆ ರಾಜಮೌಳಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಕಾರಣಕ್ಕೆ ‘ನಾ ಸಾಮಿ ರಂಗ’ ಸುದ್ದಿಗೋಷ್ಠಿಯಲ್ಲಿ ಕೀರವಾಣಿಗೆ ಈ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಾನು ಉತ್ತರಿಸಲ್ಲ’ ಎಂದು ನೇರವಾಗಿ ಹೇಳಿ ಬೇಸರ ಮಾಡುವ ಬದಲು ಕೀರವಾಣಿ ನಗೆಚಟಾಕಿ ಹಾರಿಸಿದ್ದಾರೆ.

‘ನಾನು ಆ ಚಿತ್ರದ ಕೆಲಸ ಆರಂಭಿಸಿಲ್ಲ. ನಾನು ಈ ಸಿನಿಮಾ ಬಗ್ಗೆ ಕೇಳಲು ರಾಜಮೌಳಿಗೆ ಕರೆ ಮಾಡಿದೆ. ಆದರೆ, ಅವರ ಫೋನ್ ಸ್ವಿಚ್​ ಆಫ್ ಆಗಿತ್ತು’ ಎಂದು ಕೀರವಾಣಿ ಹೇಳಿದ್ದಾರೆ. ಇದನ್ನು ಕೇಳಿ ಅಲ್ಲಿದ್ದವರು ನಕ್ಕಿದ್ದಾರೆ.

ಇದನ್ನೂ ಓದಿ: ರಾಜಮೌಳಿ-ಮಹೇಶ್ ಬಾಬು ಸಿನಿಮಾದ ನಾಯಕಿ ಈ ವಿದೇಶಿ ನಟಿಯ ಹಿನ್ನೆಲೆ ಏನು?

ರಾಜಮೌಳಿ ನಿರ್ದೇಶನದ ಸಿನಿಮಾಗಳಿಗೆ ಕೀರವಾಣಿ ಅವರೇ ಸಂಗೀತ ಸಂಯೋಜನೆ ಮಾಡುತ್ತಾ ಬಂದಿದ್ದಾರೆ. ಇವರ ಕೆಮಿಸ್ಟ್ರಿ ಕೆಲಸ ಮಾಡಿದೆ. ಮಹೇಶ್ ಬಾಬು ಸದ್ಯ ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಜನವರಿ 12ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಜನರಿಗೆ ಇಷ್ಟ ಆಗಿದೆ. ಈ ಚಿತ್ರ ರಿಲೀಸ್ ಆದ ಬಳಿಕ ‘SSMB29’ ಕೆಲಸ ಆರಂಭ ಆಗಲಿದೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಚಿತ್ರಕ್ಕಾಗಿ ಮಹೇಶ್ ಬಾಬು ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು