AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​​ಆರ್​ಆರ್‘ ಸಿನಿಮಾ ಸೆಂಟಿಮೆಂಟ್ ಮುಂದುವರೆಸಿದ ರಾಜಮೌಳಿ

SS Rajamouli-Mahesh Babu: ಎಸ್​ಎಸ್ ರಾಜಮೌಳಿ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಬಿಡುಗಡೆ ಬಗ್ಗೆ ಈಗಾಗಲೇ ಯೋಜನೆ ಹಾಕಿಕೊಂಡಿರುವ ನಿರ್ದೇಶಕ ರಾಜಮೌಳಿ, ಅವರ ಅತ್ಯಂತ ಯಶಸ್ವಿ ಸಿನಿಮಾ ‘ಆರ್​ಆರ್​ಆರ್​’ನ ಸೆಂಟಿಮೆಂಟ್ ಒಂದನ್ನು ಫಾಲೋ ಮಾಡಲಿದ್ದಾರೆ. ಏನು ಆ ಸೆಂಟಿಮೆಂಟ್, ಹಾಗಿದ್ದರೆ ಹೊಸ ಸಿನಿಮಾ ಬಿಡುಗಡೆ ಯಾವಾಗ?

‘ಆರ್​​ಆರ್​ಆರ್‘ ಸಿನಿಮಾ ಸೆಂಟಿಮೆಂಟ್ ಮುಂದುವರೆಸಿದ ರಾಜಮೌಳಿ
Ss Rajamouli
ಮಂಜುನಾಥ ಸಿ.
|

Updated on:Apr 11, 2025 | 6:29 PM

Share

ಎಸ್​ಎಸ್ ರಾಜಮೌಳಿ (SS Rajamouli) ಪ್ರಸ್ತುತ ಮಹೇಶ್ ಬಾಬು (Mahesh Babu) ಸಿನಿಮಾಕ್ಕಾಗಿ ನಿರ್ದೇಶನ ಮುಂದುವರೆಸಿದ್ದಾರೆ. ಇದೀಗ ಸಿನಿಮಾ ಶೂಟಿಂಗ್​ಗೆ ಸಣ್ಣ ಬ್ರೇಕ್ ನೀಡಲಾಗಿದೆ. ರಾಜಮೌಳಿ, ತಮ್ಮ ಸಿನಿಮಾದ ಎಲ್ಲ ವಿಭಾಗದಲ್ಲಿಯೂ ಕೈಯಾಡಿಸುತ್ತಾರೆ. ಪ್ರತಿಯೊಂದು ಸಣ್ಣ ಸಣ್ಣ ವಿಷಯಗಳನ್ನೂ ಸಹ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದೆಲ್ಲದರ ಜೊತೆಗೆ ಕೆಲವು ಸೆಂಟಿಮೆಂಟ್​ಗಳನ್ನು ಸಹ ಫಾಲೋ ಮಾಡುತ್ತಾರೆ ರಾಜಮೌಳಿ. ಇದೀಗ ತಮ್ಮ ಹೊಸ ಸಿನಿಮಾಕ್ಕೂ ಸಹ ಸೆಂಟಿಮೆಂಟ್ ಒಂದನ್ನು ಫಾಲೋ ಮಾಡಲು ಮುಂದಾಗಿದ್ದಾರೆ ರಾಜಮೌಳಿ.

ರಾಜಮೌಳಿ ನಿರ್ದೇಶನದ ಎಲ್ಲ ಸಿನಿಮಾಗಳೂ ಸಹ ಸೂಪರ್ ಹಿಟ್ ಆಗಿವೆ. ಆದರೆ ಅವರಿಗೆ ಅತಿ ಹೆಚ್ಚು ಯಶಸ್ಸು, ಕೀರ್ತಿ ತಂದುಕೊಟ್ಟ ಸಿನಿಮಾ ‘RRR’, ಈ ಸಿನಿಮಾದ ಸೆಂಟಿಮೆಂಟ್ ಅನ್ನು ಅವರ ಹೊಸ ಸಿನಿಮಾಕ್ಕೂ ಮುಂದುವರೆಸಲಿದ್ದಾರೆ ರಾಜಮೌಳಿ. ಅವರ ಅತ್ಯಂತ ಯಶಸ್ವಿ ಸಿನಿಮಾ ‘ಆರ್​ಆರ್​ಆರ್’ ಬಿಡುಗಡೆ ಆದ ದಿನವೇ ತಮ್ಮ ಹೊಸ ಸಿನಿಮಾ ಅನ್ನೂ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ ರಾಜಮೌಳಿ.

‘ಆರ್​ಆರ್​ಆರ್​’ ಸಿನಿಮಾ 2022 ರ ಮಾರ್ಚ್ 24 ರಂದು ಬಿಡುಗಡೆ ಆಗಿತ್ತು. ಹೀಗಾಗಿ ರಾಜಮೌಳಿ ತಮ್ಮ ಮುಂದಿನ ಸಿನಿಮಾ ಅನ್ನು 2027ರ ಮಾರ್ಚ್ 24ರಂದೇ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಆ ಮೂಲಕ ‘ಆರ್​​ಆರ್​ಆರ್’ ಸೆಂಟಿಮೆಂಟ್ ಮುಂದುವರೆಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಕೆಲ ದಿನಗಳ ಹಿಂದಷ್ಟೆ ಒಡಿಸ್ಸಾನಲ್ಲಿ ನಡೆದಿತ್ತು. ಚಿತ್ರೀಕರಣದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಇನ್ನೂ ಕೆಲವು ನಟರು ಭಾಗಿ ಆಗಿದ್ದರು. ಸಿನಿಮಾದ ಚಿತ್ರೀಕರಣ ಒಂದು ವರ್ಷ ನಡೆದರೆ ಪೋಸ್ಟ್ ಪ್ರೊಡಕ್ಷನ್ ಮತ್ತು ಪ್ರಚಾರಕ್ಕೆ ಒಂದು ವರ್ಷ ತೆಗೆದುಕೊಳ್ಳಲಿದ್ದಾರಂತೆ ರಾಜಮೌಳಿ.

ಇದನ್ನೂ ಓದಿ:ಆರ್​ಆರ್​​ಆರ್ ಸಿನಿಮಾಕ್ಕೆ ಗೌರವ ನೀಡಿದ ಆಸ್ಕರ್, ರಾಜಮೌಳಿಗೆ ಖುಷಿ

ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿರುವ ಈ ಸಿನಿಮಾ ಅಡ್ವೇಂಚರ್ ಮಾದರಿಯ ಸಿನಿಮಾ ಆಗಿರಲಿದೆ. ಸ್ವತಃ ರಾಜಮೌಳಿ ಅವರೇ ಹೇಳಿದ್ದಂತೆ ಹಾಲಿವುಡ್​ನ ‘ಇಂಡಿಯಾನಾ ಜೋನ್ಸ್’ ಮಾದರಿಯ ಕತೆ ಒಳಗೊಂಡಿದೆ. ಸಿನಿಮಾದ ಕತೆ ಹಲವು ದೇಶಗಳಲ್ಲಿ ನಡೆಯಲಿದೆಯಂತೆ. ವಿಶೇಷವಾಗಿ ಅರಣ್ಯಗಳಲ್ಲಿ ಅದ್ಭುತ ಸಾಹಸ ಸನ್ನಿವೇಶಗಳನ್ನು ಈ ಸಿನಿಮಾ ಒಳಗೊಂಡಿರಲಿದೆ. ಸಿನಿಮಾಕ್ಕೆ ಹಲವು ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಹಾಲಿವುಡ್​ನ ಕೆಲವು ಪ್ರಮುಖ ನಟರು ಸಹ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Fri, 11 April 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?