ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ಹೊಸತನ ತಂದರು’ ಎಂದಿದ್ದಾರೆ.

ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
Follow us
|

Updated on:Jun 08, 2024 | 11:31 AM

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ (Ramoji Rao) ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ನಿಧನ ವಾರ್ತೆ ಕೇಳಿ ಪ್ರಧಾನಿ ನರೇಂದ್ರ ಮೋದಿ, ನಟರಾದ ಅಲ್ಲು ಅರ್ಜುನ್, ರಾಮ್ ಚರಣ್​, ನಿರ್ದೇಶಕ ರಾಜಮೌಳಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ನಾವೀನ್ಯತೆಯಲ್ಲಿ ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ತಂದರು’ ಎಂದಿದ್ದಾರೆ.

‘ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಅವರ ಅಪಾರ ಜ್ಞಾನದಿಂದ ಪ್ರಯೋಜನ ಪಡೆಯುವ ಅನೇಕ ಅವಕಾಶಗಳನ್ನು ಹೊಂದಲು ನಾನು ಅದೃಷ್ಟಶಾಲಿಯಾಗಿದ್ದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪ. ಓಂ ಶಾಂತಿ’ ಎಂದು ಮೋದಿ ಬರೆದಿದ್ದಾರೆ.

ಆರ್​​ಎಸ್​ಎಸ್  ಕೂಡ ರಾಜಮೌಳಿ ನಿಧನಕ್ಕೆ ಸಂತಾಪ ಸೂಚಿಸಿದೆ. ‘ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನ ಹೊಂದಿದ್ದಾರೆ. ಅವರ ನಿಧನ ಪತ್ರಿಕೋದ್ಯಮ ಮತ್ತು ಚಲನಚಿತ್ರ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ’ ಎಂದು ಆರ್​ಎಸ್​ಎಸ್​ ಟ್ವಿಟರ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ಅಲ್ಲು ಅರ್ಜುನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ನಾನು ಅತಿ ಹೆಚ್ಚು ಗೌರವಿಸುವ ಪ್ರವರ್ತಕ ಮತ್ತು ಸ್ಫೂರ್ತಿದಾಯಕ ದಾರ್ಶನಿಕ ರಾಮೋಜಿ ರಾವ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ನಾನು ಸಿನಿಮಾ ಮತ್ತು ಇತರ ಹಲವು ಉದ್ಯಮಗಳಿಗೆ ಅವರ ಅಪ್ರತಿಮ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ. ಮಹಾನ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದಿದ್ದಾರೆ ಅಲ್ಲು ಅರ್ಜುನ್. ರಾಮ್ ಚರಣ್ ಅವರು ಶೂಟಿಂಗ್ ಸೆಟ್​ನಲ್ಲೇ ಸಂತಾಪ ಕೋರಿದ್ದಾರೆ. ನಿರ್ದೇಶಕ ರಾಜಮೌಳಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:23 am, Sat, 8 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ