AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ಹೊಸತನ ತಂದರು’ ಎಂದಿದ್ದಾರೆ.

ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
ರಾಜೇಶ್ ದುಗ್ಗುಮನೆ
|

Updated on:Jun 08, 2024 | 11:31 AM

Share

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ (Ramoji Rao) ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ನಿಧನ ವಾರ್ತೆ ಕೇಳಿ ಪ್ರಧಾನಿ ನರೇಂದ್ರ ಮೋದಿ, ನಟರಾದ ಅಲ್ಲು ಅರ್ಜುನ್, ರಾಮ್ ಚರಣ್​, ನಿರ್ದೇಶಕ ರಾಜಮೌಳಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ನಾವೀನ್ಯತೆಯಲ್ಲಿ ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ತಂದರು’ ಎಂದಿದ್ದಾರೆ.

‘ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಅವರ ಅಪಾರ ಜ್ಞಾನದಿಂದ ಪ್ರಯೋಜನ ಪಡೆಯುವ ಅನೇಕ ಅವಕಾಶಗಳನ್ನು ಹೊಂದಲು ನಾನು ಅದೃಷ್ಟಶಾಲಿಯಾಗಿದ್ದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪ. ಓಂ ಶಾಂತಿ’ ಎಂದು ಮೋದಿ ಬರೆದಿದ್ದಾರೆ.

ಆರ್​​ಎಸ್​ಎಸ್  ಕೂಡ ರಾಜಮೌಳಿ ನಿಧನಕ್ಕೆ ಸಂತಾಪ ಸೂಚಿಸಿದೆ. ‘ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನ ಹೊಂದಿದ್ದಾರೆ. ಅವರ ನಿಧನ ಪತ್ರಿಕೋದ್ಯಮ ಮತ್ತು ಚಲನಚಿತ್ರ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ’ ಎಂದು ಆರ್​ಎಸ್​ಎಸ್​ ಟ್ವಿಟರ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ಅಲ್ಲು ಅರ್ಜುನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ನಾನು ಅತಿ ಹೆಚ್ಚು ಗೌರವಿಸುವ ಪ್ರವರ್ತಕ ಮತ್ತು ಸ್ಫೂರ್ತಿದಾಯಕ ದಾರ್ಶನಿಕ ರಾಮೋಜಿ ರಾವ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ನಾನು ಸಿನಿಮಾ ಮತ್ತು ಇತರ ಹಲವು ಉದ್ಯಮಗಳಿಗೆ ಅವರ ಅಪ್ರತಿಮ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ. ಮಹಾನ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದಿದ್ದಾರೆ ಅಲ್ಲು ಅರ್ಜುನ್. ರಾಮ್ ಚರಣ್ ಅವರು ಶೂಟಿಂಗ್ ಸೆಟ್​ನಲ್ಲೇ ಸಂತಾಪ ಕೋರಿದ್ದಾರೆ. ನಿರ್ದೇಶಕ ರಾಜಮೌಳಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:23 am, Sat, 8 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?