ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ಹೊಸತನ ತಂದರು’ ಎಂದಿದ್ದಾರೆ.

ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
ರಾಮೋಜಿ ರಾವ್ ನಿಧನಕ್ಕೆ ಪ್ರಧಾನಿ ಮೋದಿ, ಅಲ್ಲು ಅರ್ಜುನ್, ರಾಮ್ ಚರಣ್, ರಾಜಮೌಳಿ ಸೇರಿ ಅನೇಕರ ಸಂತಾಪ
Follow us
|

Updated on:Jun 08, 2024 | 11:31 AM

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ (Ramoji Rao) ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ನಿಧನ ವಾರ್ತೆ ಕೇಳಿ ಪ್ರಧಾನಿ ನರೇಂದ್ರ ಮೋದಿ, ನಟರಾದ ಅಲ್ಲು ಅರ್ಜುನ್, ರಾಮ್ ಚರಣ್​, ನಿರ್ದೇಶಕ ರಾಜಮೌಳಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಮೋದಿ, ‘ರಾಮೋಜಿ ರಾವ್ ನಿಧನವು ತುಂಬಾ ದುಃಖಕ ತಂದಿದೆ. ಅವರು ಭಾರತೀಯ ಮಾಧ್ಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಅವರ ದಣಿವರಿಯದ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನೆಯ ಜಗತ್ತಿನಲ್ಲಿ ನಾವೀನ್ಯತೆಯಲ್ಲಿ ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ತಂದರು’ ಎಂದಿದ್ದಾರೆ.

‘ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಅವರ ಅಪಾರ ಜ್ಞಾನದಿಂದ ಪ್ರಯೋಜನ ಪಡೆಯುವ ಅನೇಕ ಅವಕಾಶಗಳನ್ನು ಹೊಂದಲು ನಾನು ಅದೃಷ್ಟಶಾಲಿಯಾಗಿದ್ದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪ. ಓಂ ಶಾಂತಿ’ ಎಂದು ಮೋದಿ ಬರೆದಿದ್ದಾರೆ.

ಆರ್​​ಎಸ್​ಎಸ್  ಕೂಡ ರಾಜಮೌಳಿ ನಿಧನಕ್ಕೆ ಸಂತಾಪ ಸೂಚಿಸಿದೆ. ‘ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನ ಹೊಂದಿದ್ದಾರೆ. ಅವರ ನಿಧನ ಪತ್ರಿಕೋದ್ಯಮ ಮತ್ತು ಚಲನಚಿತ್ರ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ’ ಎಂದು ಆರ್​ಎಸ್​ಎಸ್​ ಟ್ವಿಟರ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ಅಲ್ಲು ಅರ್ಜುನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ನಾನು ಅತಿ ಹೆಚ್ಚು ಗೌರವಿಸುವ ಪ್ರವರ್ತಕ ಮತ್ತು ಸ್ಫೂರ್ತಿದಾಯಕ ದಾರ್ಶನಿಕ ರಾಮೋಜಿ ರಾವ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ನಾನು ಸಿನಿಮಾ ಮತ್ತು ಇತರ ಹಲವು ಉದ್ಯಮಗಳಿಗೆ ಅವರ ಅಪ್ರತಿಮ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ. ಮಹಾನ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದಿದ್ದಾರೆ ಅಲ್ಲು ಅರ್ಜುನ್. ರಾಮ್ ಚರಣ್ ಅವರು ಶೂಟಿಂಗ್ ಸೆಟ್​ನಲ್ಲೇ ಸಂತಾಪ ಕೋರಿದ್ದಾರೆ. ನಿರ್ದೇಶಕ ರಾಜಮೌಳಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:23 am, Sat, 8 June 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್