AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿಗೆ ವಿಶ್ವ ಮಟ್ಟದಲ್ಲಿ ವಿಶೇಷ ಗೌರವ;  ಭಾರತದ ಯಾವ ನಿರ್ದೇಶಕನೂ ಮಾಡಿರದ ಸಾಧನೆ ಮಾಡಿದ ಡೈರೆಕ್ಟರ್​

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಕೆಲಸದ ಬಗ್ಗೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿರುವುದಕ್ಕೆ ‘ಆರ್​ಆರ್​ಆರ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ರಾಜಮೌಳಿಗೆ ವಿಶ್ವ ಮಟ್ಟದಲ್ಲಿ ವಿಶೇಷ ಗೌರವ;  ಭಾರತದ ಯಾವ ನಿರ್ದೇಶಕನೂ ಮಾಡಿರದ ಸಾಧನೆ ಮಾಡಿದ ಡೈರೆಕ್ಟರ್​
ರಾಜಮೌಳಿ
TV9 Web
| Edited By: |

Updated on: Dec 12, 2021 | 1:48 PM

Share

ಎಸ್​​.ಎಸ್​. ರಾಜಮೌಳಿ ಸಿನಿಮಾ ಬಗ್ಗೆ ಕೇವಲ ದಕ್ಷಿಣ ಭಾರತ ಮಾತ್ರ ಮಾತನಾಡುತ್ತಿಲ್ಲ. ಅವರು ಮಾಡುವ ಕೆಲಸದ ಬಗ್ಗೆ ಬಾಲಿವುಡ್​, ಹಾಲಿವುಡ್​ ಮಂದಿಗೂ ತಿಳಿದಿದೆ. ಸಾಕಷ್ಟು ಮಂದಿ ಅವರ ನಿರ್ದೇಶನವನ್ನು ಮೆಚ್ಚಿಕೊಂಡಿದ್ದಾರೆ. ‘ಈಗ’, ‘ಬಾಹುಬಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಹೊಸ ಫ್ಯಾಂಟಸಿ ಲೋಕವನ್ನೇ ಸೃಷ್ಟಿ ಮಾಡಿ, ಪ್ರೇಕ್ಷಕರನ್ನು ಅದರೊಳಗೆ ಕರೆದುಕೊಂಡು ಹೋಗುವ ಕಲೆ ರಾಜಮೌಳಿಗೆ ಕರಗತವಾಗಿದೆ. ಈಗ ರಾಜಮೌಳಿ, ‘ಆರ್​ಆರ್​ಆರ್​’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ. ಹೀಗಿರುವಾಗಲೇ ರಾಜಮೌಳಿಗೆ ವಿಶೇಷ ಗೌರವವೊಂದು ಸಂದಿದೆ. ಈ ವಿಚಾರ ಕೇಳಿ ಭಾರತೀಯರು ಹೆಮ್ಮೆಪಟ್ಟಿದ್ದಾರೆ.

ವಿದೇಶದ ಸಂಸ್ಥೆಯೊಂದು ವಿಶ್ವ ಮಟ್ಟದಲ್ಲಿ ಅಧ್ಯಯನ ನಡೆಸಿ ನಿರ್ದೇಶಕರಿಗೆ ರ‍್ಯಾಂಕ್​ ನೀಡಿದೆ. ವಿಶ್ವದ ಸೊಗಸಾದ 50 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ರಾಜಮೌಳಿ ಅವರಿಗೆ 25ನೇ ರ‍್ಯಾಂಕ್​ ಸಿಕ್ಕಿದೆ. ಭಾರತದ ಮತ್ಯಾವ ನಿರ್ದೇಶಕನಿಗೂ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ ಅನ್ನೋದು ಗಮನಾರ್ಹ ವಿಚಾರ. ಸದ್ಯ, ಈ ವಿಚಾರ ಇಟ್ಟುಕೊಂಡು ರಾಜಮೌಳಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾ ಮಾಡುವ ವಿಧಾನ, ಅವರು ನಿರ್ದೇಶನ ಮಾಡಿದ ಸಿನಿಮಾದ ಪ್ರಭಾವ ಸೇರಿ ಹಲವು ವಿಚಾರಗಳನ್ನು ಇಟ್ಟುಕೊಂಡು ರ‍್ಯಾಂಕಿಂಗ್​ ನೀಡಲಾಗಿದೆ.

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಕೆಲಸದ ಬಗ್ಗೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿರುವುದಕ್ಕೆ ‘ಆರ್​ಆರ್​ಆರ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸ್ಟಾರ್​ ನಟರ ದಂಡೇ ‘ಆರ್​ಆರ್​ಆರ್​’ನಲ್ಲಿದೆ. ಈ ಚಿತ್ರ ರಿಲೀಸ್​ ಆಗುವುದಕ್ಕೂ ಮೊದಲೇ ನೂರಾರು ಕೋಟಿ ಬಿಸ್ನೆಸ್​ ಮಾಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದು ರಾಜಮೌಳಿ ಕಡೆಯಿಂದ ಅಭಿಮಾನಿಗಳಿಗೆ ಸಂಕ್ರಾಂತಿಗೆ ಸಿಗುತ್ತಿರುವ ಅತಿ ದೊಡ್ಡ ಗಿಫ್ಟ್​. ಹಬ್ಬದ ಸಂದರ್ಭವಾದ್ದರಿಂದ ಚಿತ್ರ ಒಳ್ಳೆಯ ಗಳಿಕೆ ಮಾಡುವ ನಿರೀಕ್ಷೆ ಇದೆ. ಇನ್ನು, ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪೋಸ್ಟರ್​, ಟೀಸರ್​ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಈಗಾಗಲೇ ಹೆಚ್ಚಿಸಿದೆ. ಡಿಸೆಂಬರ್ 9ರಂದು ರಿಲೀಸ್​ ಆಗುವ ಟ್ರೇಲರ್​ ಮೇಲೆಯೂ ಹೆಚ್ಚು ಕುತೂಹಲ ಇಟ್ಟುಕೊಳ್ಳಲಾಗಿದೆ. ಈ ಎಲ್ಲಾ ಕಾರಣಗಳಿಂದ ಸಿನಿಮಾ ಒಳ್ಳೆಯ ಬಿಸ್ನೆಸ್​ ಮಾಡಿದೆ. ರಿಲೀಸ್​ಗೂ ಮೊದಲೇ ಈ ಚಿತ್ರ ಬರೋಬ್ಬರಿ 890 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಸಿನಿಮಾದ ಅಸಲಿ ಹೀರೋ ಯಾರು? ಸತ್ಯ ಬಿಚ್ಚಿಟ್ಟ ರಾಜಮೌಳಿ

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ