AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿಗೆ ವಿಶ್ವ ಮಟ್ಟದಲ್ಲಿ ವಿಶೇಷ ಗೌರವ;  ಭಾರತದ ಯಾವ ನಿರ್ದೇಶಕನೂ ಮಾಡಿರದ ಸಾಧನೆ ಮಾಡಿದ ಡೈರೆಕ್ಟರ್​

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಕೆಲಸದ ಬಗ್ಗೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿರುವುದಕ್ಕೆ ‘ಆರ್​ಆರ್​ಆರ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ರಾಜಮೌಳಿಗೆ ವಿಶ್ವ ಮಟ್ಟದಲ್ಲಿ ವಿಶೇಷ ಗೌರವ;  ಭಾರತದ ಯಾವ ನಿರ್ದೇಶಕನೂ ಮಾಡಿರದ ಸಾಧನೆ ಮಾಡಿದ ಡೈರೆಕ್ಟರ್​
ರಾಜಮೌಳಿ
TV9 Web
| Edited By: |

Updated on: Dec 12, 2021 | 1:48 PM

Share

ಎಸ್​​.ಎಸ್​. ರಾಜಮೌಳಿ ಸಿನಿಮಾ ಬಗ್ಗೆ ಕೇವಲ ದಕ್ಷಿಣ ಭಾರತ ಮಾತ್ರ ಮಾತನಾಡುತ್ತಿಲ್ಲ. ಅವರು ಮಾಡುವ ಕೆಲಸದ ಬಗ್ಗೆ ಬಾಲಿವುಡ್​, ಹಾಲಿವುಡ್​ ಮಂದಿಗೂ ತಿಳಿದಿದೆ. ಸಾಕಷ್ಟು ಮಂದಿ ಅವರ ನಿರ್ದೇಶನವನ್ನು ಮೆಚ್ಚಿಕೊಂಡಿದ್ದಾರೆ. ‘ಈಗ’, ‘ಬಾಹುಬಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಹೊಸ ಫ್ಯಾಂಟಸಿ ಲೋಕವನ್ನೇ ಸೃಷ್ಟಿ ಮಾಡಿ, ಪ್ರೇಕ್ಷಕರನ್ನು ಅದರೊಳಗೆ ಕರೆದುಕೊಂಡು ಹೋಗುವ ಕಲೆ ರಾಜಮೌಳಿಗೆ ಕರಗತವಾಗಿದೆ. ಈಗ ರಾಜಮೌಳಿ, ‘ಆರ್​ಆರ್​ಆರ್​’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ. ಹೀಗಿರುವಾಗಲೇ ರಾಜಮೌಳಿಗೆ ವಿಶೇಷ ಗೌರವವೊಂದು ಸಂದಿದೆ. ಈ ವಿಚಾರ ಕೇಳಿ ಭಾರತೀಯರು ಹೆಮ್ಮೆಪಟ್ಟಿದ್ದಾರೆ.

ವಿದೇಶದ ಸಂಸ್ಥೆಯೊಂದು ವಿಶ್ವ ಮಟ್ಟದಲ್ಲಿ ಅಧ್ಯಯನ ನಡೆಸಿ ನಿರ್ದೇಶಕರಿಗೆ ರ‍್ಯಾಂಕ್​ ನೀಡಿದೆ. ವಿಶ್ವದ ಸೊಗಸಾದ 50 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ರಾಜಮೌಳಿ ಅವರಿಗೆ 25ನೇ ರ‍್ಯಾಂಕ್​ ಸಿಕ್ಕಿದೆ. ಭಾರತದ ಮತ್ಯಾವ ನಿರ್ದೇಶಕನಿಗೂ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ ಅನ್ನೋದು ಗಮನಾರ್ಹ ವಿಚಾರ. ಸದ್ಯ, ಈ ವಿಚಾರ ಇಟ್ಟುಕೊಂಡು ರಾಜಮೌಳಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾ ಮಾಡುವ ವಿಧಾನ, ಅವರು ನಿರ್ದೇಶನ ಮಾಡಿದ ಸಿನಿಮಾದ ಪ್ರಭಾವ ಸೇರಿ ಹಲವು ವಿಚಾರಗಳನ್ನು ಇಟ್ಟುಕೊಂಡು ರ‍್ಯಾಂಕಿಂಗ್​ ನೀಡಲಾಗಿದೆ.

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಕೆಲಸದ ಬಗ್ಗೆ ಎಲ್ಲರಿಗೂ ದೊಡ್ಡ ಭರವಸೆ ಬಂದಿದೆ. ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿರುವುದಕ್ಕೆ ‘ಆರ್​ಆರ್​ಆರ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸ್ಟಾರ್​ ನಟರ ದಂಡೇ ‘ಆರ್​ಆರ್​ಆರ್​’ನಲ್ಲಿದೆ. ಈ ಚಿತ್ರ ರಿಲೀಸ್​ ಆಗುವುದಕ್ಕೂ ಮೊದಲೇ ನೂರಾರು ಕೋಟಿ ಬಿಸ್ನೆಸ್​ ಮಾಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದು ರಾಜಮೌಳಿ ಕಡೆಯಿಂದ ಅಭಿಮಾನಿಗಳಿಗೆ ಸಂಕ್ರಾಂತಿಗೆ ಸಿಗುತ್ತಿರುವ ಅತಿ ದೊಡ್ಡ ಗಿಫ್ಟ್​. ಹಬ್ಬದ ಸಂದರ್ಭವಾದ್ದರಿಂದ ಚಿತ್ರ ಒಳ್ಳೆಯ ಗಳಿಕೆ ಮಾಡುವ ನಿರೀಕ್ಷೆ ಇದೆ. ಇನ್ನು, ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪೋಸ್ಟರ್​, ಟೀಸರ್​ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಈಗಾಗಲೇ ಹೆಚ್ಚಿಸಿದೆ. ಡಿಸೆಂಬರ್ 9ರಂದು ರಿಲೀಸ್​ ಆಗುವ ಟ್ರೇಲರ್​ ಮೇಲೆಯೂ ಹೆಚ್ಚು ಕುತೂಹಲ ಇಟ್ಟುಕೊಳ್ಳಲಾಗಿದೆ. ಈ ಎಲ್ಲಾ ಕಾರಣಗಳಿಂದ ಸಿನಿಮಾ ಒಳ್ಳೆಯ ಬಿಸ್ನೆಸ್​ ಮಾಡಿದೆ. ರಿಲೀಸ್​ಗೂ ಮೊದಲೇ ಈ ಚಿತ್ರ ಬರೋಬ್ಬರಿ 890 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಸಿನಿಮಾದ ಅಸಲಿ ಹೀರೋ ಯಾರು? ಸತ್ಯ ಬಿಚ್ಚಿಟ್ಟ ರಾಜಮೌಳಿ

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!