AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆಯಲ್ಲಿ ‘ಆರ್​ಆರ್​ಆರ್ ಸಿನಿಮಾ​ ನನ್ನನ್ನು ಆಕರ್ಷಿಸಿದೆ’ ಎಂದ ಬ್ರೆಜಿಲ್ ಅಧ್ಯಕ್ಷ

ಜಿ20 ಶೃಂಗಸಭೆ ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ನಡೆದಿದೆ. ವಿವಿಧ ದೇಶದ ಗಣ್ಯರು ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೋ ಲೂಲಾ ದೆ ಸೆಲ್ವಾ ಕೂಡ ಭಾಗವಹಿಸಿದ್ದರು. ಅವರು ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

ಜಿ20 ಶೃಂಗಸಭೆಯಲ್ಲಿ ‘ಆರ್​ಆರ್​ಆರ್ ಸಿನಿಮಾ​ ನನ್ನನ್ನು ಆಕರ್ಷಿಸಿದೆ’ ಎಂದ ಬ್ರೆಜಿಲ್ ಅಧ್ಯಕ್ಷ
ಮೋದಿ, ಲೂಲಾ-ಆರ್​ರ್​​ಆರ್​
ರಾಜೇಶ್ ದುಗ್ಗುಮನೆ
|

Updated on:Sep 10, 2023 | 3:15 PM

Share

‘ಆರ್​ಆರ್​ಆರ್’ ಸಿನಿಮಾ (RRR Movie) ಮಾಡಿರುವ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ವಿಶ್ವ ಮಟ್ಟದಲ್ಲಿ ಸದ್ದು ಮಾಡಿದೆ. ಎಸ್​ಎಸ್​ ರಾಜಮೌಳಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಈಗ ಈ ಚಿತ್ರದ ಬಗ್ಗೆ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೋ ಲೂಲಾ ದೆ ಸೆಲ್ವಾ ಮಾತನಾಡಿದ್ದಾರೆ. ಶೃಂಗಸಭೆಯಲ್ಲಿ ಅವರು ಈ ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಿ20 ಶೃಂಗಸಭೆ ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ನಡೆದಿದೆ. ವಿವಿಧ ದೇಶದ ಗಣ್ಯರು ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೋ ಲೂಲಾ ದೆ ಸೆಲ್ವಾ ಕೂಡ ಭಾಗವಹಿಸಿದ್ದರು. ಅವರು ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅವರು ಈ ಚಿತ್ರವನ್ನು ಬಾಯ್ತುಂಬ ಹೊಗಳಿದ್ದಾರೆ.

‘ಆರ್​ಆರ್​ಆರ್​ ಮೂರು ಗಂಟೆಯ ಫೀಚರ್ ಸಿನಿಮಾ. ಹಲವು ಫನ್ನಿ ದೃಶ್ಯ ಇದೆ. ಅದ್ಭುತ ನೃತ್ಯವಿದೆ. ಬ್ರಿಟಿಷರ ಆಡಳಿತದ ಬಗ್ಗೆ ತೀವ್ರ ಟೀಕೆಯೂ ಇದೆ. ಈ ಚಿತ್ರ ವಿಶ್ವಾದ್ಯಂತ ಬ್ಲಾಕ್​ಬಸ್ಟರ್ ಸಿನಿಮಾ ಆಗಬೇಕು ನನ್ನ ಅಭಿಪ್ರಾಯ. ಭಾರತದ ಬಗ್ಗೆ ಯಾರೇ ಪ್ರಸ್ತಾಪಿಸಿದರೂ ನೀವು ‘ಆರ್​ಆರ್​ಆರ್’​ ಸಿನಿಮಾ ನೋಡಿದ್ದೀರಾ ಎಂದು ಕೇಳುತ್ತಾರೆ. ಚಿತ್ರದ ನಿರ್ದೇಶಕರು ಮತ್ತು ಕಲಾವಿದರನ್ನು ನಾನು ಅಭಿನಂದಿಸುತ್ತೇನೆ. ಈ ಸಿನಿಮಾ ನನ್ನನ್ನು ಮೋಡಿ ಮಾಡಿದೆ’ ಎಂದಿದ್ದಾರೆ ಲೂಯಿಸ್ ಇನಾಸಿಯೋ ಲೂಲಾ ದೆ ಸೆಲ್ವಾ.

ಇದನ್ನೂ ಓದಿ: ‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ

‘ಆರ್​ಆರ್​ಆರ್’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:03 pm, Sun, 10 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ