AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?
ರಾಜಮೌಳಿ
TV9 Web
| Edited By: |

Updated on: Oct 02, 2021 | 6:13 PM

Share

ಎಸ್​.ಎಸ್​. ರಾಜಮೌಳಿ ನಿರ್ದೇಶನದ ಸಿನಿಮಾ ತೆರೆಗೆ ಬರುತ್ತದೆ ಎಂದರೆ ಅದರ ಸಮೀಪ ಯಾವುದೇ ಸಿನಿಮಾಗಳು ರಿಲೀಸ್​ ಆಗುವುದಿಲ್ಲ. ರಾಜಮೌಳಿ ಸಿನಿಮಾಗಳ ಅದ್ದೂರಿತನ, ಅವರು ಸಿನಿಮಾ ಕಟ್ಟಿಕೊಡುವ ರೀತಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದೇ ಬರುತ್ತಾರೆ. ಹೀಗಾಗಿ ಆ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಕೈಸುಟ್ಟಿಕೊಳ್ಳುವುದು ಪಕ್ಕಾ ಅನ್ನೋದು ಬಹುತೇಕರಿಗೆ ಅರಿವಾಗಿದೆ. ಆದರೆ, ಈಗ ರಾಜಮೌಳಿ ಆರ್​ಆರ್​ಆರ್​ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಮಾಡಿ ಎಲ್ಲರಿಗೂ ಶಾಕ್​ ನೀಡಿದ್ದಾರೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ.

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಆರ್​ಆರ್​ಆರ್​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದರಿಂದ ಅತಿ ದೊಡ್ಡ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಆಗಲಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವ್​​ಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ. ‘ಬಾಹುಬಲಿ 2’ ನಂತರ ತೆರೆಗೆ ಬರುತ್ತಿರುವ ರಾಜಮೌಳಿ ನಿರ್ದೇಶನದ ಸಿನಿಮಾ ಇದಾಗಿದೆ.

ಇದನ್ನೂ ಓದಿ: ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?