AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?
ರಾಜಮೌಳಿ
TV9 Web
| Edited By: |

Updated on: Oct 02, 2021 | 6:13 PM

Share

ಎಸ್​.ಎಸ್​. ರಾಜಮೌಳಿ ನಿರ್ದೇಶನದ ಸಿನಿಮಾ ತೆರೆಗೆ ಬರುತ್ತದೆ ಎಂದರೆ ಅದರ ಸಮೀಪ ಯಾವುದೇ ಸಿನಿಮಾಗಳು ರಿಲೀಸ್​ ಆಗುವುದಿಲ್ಲ. ರಾಜಮೌಳಿ ಸಿನಿಮಾಗಳ ಅದ್ದೂರಿತನ, ಅವರು ಸಿನಿಮಾ ಕಟ್ಟಿಕೊಡುವ ರೀತಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದೇ ಬರುತ್ತಾರೆ. ಹೀಗಾಗಿ ಆ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಕೈಸುಟ್ಟಿಕೊಳ್ಳುವುದು ಪಕ್ಕಾ ಅನ್ನೋದು ಬಹುತೇಕರಿಗೆ ಅರಿವಾಗಿದೆ. ಆದರೆ, ಈಗ ರಾಜಮೌಳಿ ಆರ್​ಆರ್​ಆರ್​ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಮಾಡಿ ಎಲ್ಲರಿಗೂ ಶಾಕ್​ ನೀಡಿದ್ದಾರೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ.

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಆರ್​ಆರ್​ಆರ್​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದರಿಂದ ಅತಿ ದೊಡ್ಡ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಆಗಲಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವ್​​ಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ. ‘ಬಾಹುಬಲಿ 2’ ನಂತರ ತೆರೆಗೆ ಬರುತ್ತಿರುವ ರಾಜಮೌಳಿ ನಿರ್ದೇಶನದ ಸಿನಿಮಾ ಇದಾಗಿದೆ.

ಇದನ್ನೂ ಓದಿ: ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ