AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ.

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?
ರಾಜಮೌಳಿ
TV9 Web
| Edited By: |

Updated on: Oct 02, 2021 | 6:13 PM

Share

ಎಸ್​.ಎಸ್​. ರಾಜಮೌಳಿ ನಿರ್ದೇಶನದ ಸಿನಿಮಾ ತೆರೆಗೆ ಬರುತ್ತದೆ ಎಂದರೆ ಅದರ ಸಮೀಪ ಯಾವುದೇ ಸಿನಿಮಾಗಳು ರಿಲೀಸ್​ ಆಗುವುದಿಲ್ಲ. ರಾಜಮೌಳಿ ಸಿನಿಮಾಗಳ ಅದ್ದೂರಿತನ, ಅವರು ಸಿನಿಮಾ ಕಟ್ಟಿಕೊಡುವ ರೀತಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದೇ ಬರುತ್ತಾರೆ. ಹೀಗಾಗಿ ಆ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಕೈಸುಟ್ಟಿಕೊಳ್ಳುವುದು ಪಕ್ಕಾ ಅನ್ನೋದು ಬಹುತೇಕರಿಗೆ ಅರಿವಾಗಿದೆ. ಆದರೆ, ಈಗ ರಾಜಮೌಳಿ ಆರ್​ಆರ್​ಆರ್​ ಸಿನಿಮಾ ರಿಲೀಸ್​ ಡೇಟ್​ ಘೋಷಣೆ ಮಾಡಿ ಎಲ್ಲರಿಗೂ ಶಾಕ್​ ನೀಡಿದ್ದಾರೆ.

ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್​ ಡೇಟ್​ ಈಗಾಗಲೇ ಘೋಷಣೆ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾ ಜನವರಿ 13ರಂದು ತೆರೆಗೆ ಬರುತ್ತಿದೆ. ಬಿಗ್​ ಬಜೆಟ್​ ಸಿನಿಮಾ ಇದಾಗಿದ್ದು, ಈ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅಂದರೆ ಜನವರಿ 14ರಂದು ‘ರಾಧೆ ಶ್ಯಾಮ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಪ್ರಭಾಸ್​ ನಟನೆಯ ಈ ಸಿನಿಮಾ ಕೂಡ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.  ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಅಭಿನಯದ ‘ಭೀಮ್ಲಾ ನಾಯಕ್​’ ಸಿನಿಮಾ ಜನವರಿ 12ರಂದು ರಿಲೀಸ್​ ಆಗುತ್ತಿದೆ.

ಈ ಮೂರು ಸಿನಿಮಾಗಳು ಬಿಗ್​ ಬಜೆಟ್​ ಚಿತ್ರಗಳು. ಈ ಮೂರು ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಸಮಸ್ಯೆ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಹೀಗಿರುವಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ‘ಆರ್​ಆರ್​ಆರ್​’ ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಆರ್​ಆರ್​ಆರ್​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದರಿಂದ ಅತಿ ದೊಡ್ಡ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಆಗಲಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವ್​​ಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ. ‘ಬಾಹುಬಲಿ 2’ ನಂತರ ತೆರೆಗೆ ಬರುತ್ತಿರುವ ರಾಜಮೌಳಿ ನಿರ್ದೇಶನದ ಸಿನಿಮಾ ಇದಾಗಿದೆ.

ಇದನ್ನೂ ಓದಿ: ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮನವಿಗೂ ಬಗ್ಗದ ರಾಜಮೌಳಿ; ಬಿಗ್​ ಬಾಸ್​ ವೇದಿಕೆಯಲ್ಲಿ ಸತ್ಯ ಬಯಲು

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ