AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸ್ಕರ್’ ಕಾರ್ಯಕ್ರಮದ ವೇಳೆ ನಡೆದಿತ್ತು ಯಾರೂ ಊಹಿಸಿದ ಘಟನೆ; ನೆನಪಿಸಿಕೊಂಡ ರಾಜಮೌಳಿ

‘ಆರ್​ಆರ್​ಆರ್’ ಚಿತ್ರದ ವಿಶೇಷ ಶೋ ಜಪಾನ್​ನಲ್ಲಿ ನಡೆದಿದೆ. 2022ರಲ್ಲೇ ಈ ಕಾರ್ಯಕ್ರಮ ಆಯೋಜನೆಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಇತ್ತೀಚೆಗೆ ಈ ವಿಶೇಷ ಶೋ ನಡೆದಿದ್ದು, ರಾಜಮೌಳಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ.

‘ಆಸ್ಕರ್’ ಕಾರ್ಯಕ್ರಮದ ವೇಳೆ ನಡೆದಿತ್ತು ಯಾರೂ ಊಹಿಸಿದ ಘಟನೆ; ನೆನಪಿಸಿಕೊಂಡ ರಾಜಮೌಳಿ
ರಾಜಮೌಳಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 20, 2024 | 12:52 PM

Share

‘ಆರ್​ಆರ್​ಆರ್’ ಚಿತ್ರದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಲಭಿಸಿ ಒಂದು ವರ್ಷಗಳ ಮೇಲಾಗಿದೆ. ಆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆ ನಿಂತಿಲ್ಲ. ಸಿನಿಮಾ ತಂಡದವರು ಆಗಾಗ ಇದರ ಬಗ್ಗೆ ನೆನಪಿಸಿಕೊಳ್ಳುತ್ತಾರೆ. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. 95ನೇ ಸಾಲಿನ ಆಸ್ಕರ್ ಅವಾರ್ಡ್ ವೇದಿಕೆ ಮೇಲೆ ಏನಾಗಿತ್ತು ಎಂಬುದನ್ನು ಎಸ್​ಎಸ್ ರಾಜಮೌಳಿ ಅವರು ಹೇಳಿದ್ದಾರೆ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.

‘ಆರ್​ಆರ್​ಆರ್’ ಚಿತ್ರದ ವಿಶೇಷ ಶೋ ಜಪಾನ್​ನಲ್ಲಿ ನಡೆದಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರಲ್ಲೇ ಈ ಕಾರ್ಯಕ್ರಮ ಆಯೋಜನೆಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಇತ್ತೀಚೆಗೆ ಈ ವಿಶೇಷ ಶೋ ನಡೆದಿದ್ದು, ರಾಜಮೌಳಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ.

‘ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ನನ್ನ ಸಹೋದರ ಎಂಎಂ ಕೀರವಾಣಿ ಜೊತೆ ನಡೆದ ಒಂದು ಫನ್ ವಿಚಾರವನ್ನು ಹೇಳಿಕೊಳ್ಳಲೇಬೇಕು. ‘ನಾಟು ನಾಟು..’ ಹಾಡು ಆಸ್ಕರ್​ಗೆ ನಾಮಿನೇಟ್ ಆಗಿತ್ತು. ಈ ಅವಾರ್ಡ್​ನ ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಅವರಿಗೆ ಇತ್ತು. ಆಸ್ಕರ್​ ವೇದಿಕೆ ಮೇಲೆ 45 ಸೆಕೆಂಡ್ ಮಾತ್ರ ಮಾತನಾಡುವ ಅವಕಾಶ ಇರುತ್ತದೆ. ಅವರು ವೇದಿಕೆ ಏರುತ್ತಿದ್ದಂತೆ ಉಸಿರಾಡಲೂ ಅವರ ಬಳಿ ಸಾಧ್ಯವಾಗಿಲ್ಲ’ ಎಂದಿದ್ದಾರೆ ರಾಜಮೌಳಿ. ಈ ರೀತಿ ಆಗುತ್ತದೆ ಎಂದು ಅವರು ಯಾರೂ ಊಹಿಸಿರಲಿಲ್ಲ.

‘ಮೂರು ವಾರಗಳಿಂದ ಕೀರವಾಣಿ ಅವರು ಆಸ್ಕರ್ ವೇದಿಕೆ ಮೇಲೆ ಏನು ಮಾತನಾಡಬೇಕು ಎಂಬುದನ್ನು ಪ್ರ್ಯಾಕ್ಟಿಸ್ ಮಾಡಿಕೊಳ್ಳುತ್ತಿದ್ದರು. ನಾವು ಅವರನ್ನು ಟ್ರೇನ್ ಮಾಡುತ್ತಿದ್ದೆವು. ಹೇಗೆ ನಡೆಯಬೇಕು, ಹೇಗೆ ನಿಲ್ಲಬೇಕು, ಹೇಗೆ ಜನರತ್ತ ಕೈ ಬೀಸಬೇಕು ಎಂದು ಹೇಳಿದ್ದೆವು. ಮೂರು ವಾರ ಕೀರವಾಣಿ ಅವರು ಇದನ್ನೇ ಪ್ರ್ಯಾಕ್ಟಿಸ್ ಮಾಡಿದ್ದರು’ ಎಂದಿದ್ದಾರೆ ಅವರು.

‘ಅಕಾಡೆಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಅವರು ಎಲ್ಲವನ್ನೂ ಮರೆತರು. ಅವರು ವೇದಿಕೆ ಏರುವಾಗ ಎದುರುಸಿರು ಬಂತು. ಅದನ್ನು ನಿಯಂತ್ರಿಸಿಕೊಂಡು ಅವರು ಸ್ಪೀಚ್ ಕೊಟ್ಟರು. ಅವರು ಹಾಡನ್ನು ಕೂಡ ಹೇಳಿದರು. ನಾವು ಮರುದಿನ ಮನೆಗೆ ಬಂದೆವು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಆರ್​ಆರ್​ಆರ್ ಚಿತ್ರಕ್ಕೆ ಸೀಕ್ವೆಲ್ ಬರುತ್ತದೆ’; ಜಪಾನ್​ನಲ್ಲಿ ರಹಸ್ಯ ಬಿಚ್ಚಿಟ್ಟ ರಾಜಮೌಳಿ

ಜಪಾನ್ ವೇದಿಕೆ ಮೇಲೆ ರಾಜಮೌಳಿ ‘ಆರ್​ಆರ್​ಆರ್ 2’ ಮಾಡುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡುವುದಿಲ್ಲ ಎಂದು ಕೂಡ ಹೇಳಿದ್ದಾರೆ. ಸದ್ಯ ಅವರು ಮಹೇಶ್ ಬಾಬು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಶೀಘ್ರವೇ ಆರಂಭ ಆಗಲಿದೆ. ಮಹೇಶ್ ಬಾಬು ಅವರು ಈ ಚಿತ್ರಕ್ಕಾಗಿ ಟ್ರಾನ್ಸ್​ಫಾರ್ಮೇಷನ್ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ