AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸ್ಕರ್’ ಕಾರ್ಯಕ್ರಮದ ವೇಳೆ ನಡೆದಿತ್ತು ಯಾರೂ ಊಹಿಸಿದ ಘಟನೆ; ನೆನಪಿಸಿಕೊಂಡ ರಾಜಮೌಳಿ

‘ಆರ್​ಆರ್​ಆರ್’ ಚಿತ್ರದ ವಿಶೇಷ ಶೋ ಜಪಾನ್​ನಲ್ಲಿ ನಡೆದಿದೆ. 2022ರಲ್ಲೇ ಈ ಕಾರ್ಯಕ್ರಮ ಆಯೋಜನೆಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಇತ್ತೀಚೆಗೆ ಈ ವಿಶೇಷ ಶೋ ನಡೆದಿದ್ದು, ರಾಜಮೌಳಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ.

‘ಆಸ್ಕರ್’ ಕಾರ್ಯಕ್ರಮದ ವೇಳೆ ನಡೆದಿತ್ತು ಯಾರೂ ಊಹಿಸಿದ ಘಟನೆ; ನೆನಪಿಸಿಕೊಂಡ ರಾಜಮೌಳಿ
ರಾಜಮೌಳಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Mar 20, 2024 | 12:52 PM

Share

‘ಆರ್​ಆರ್​ಆರ್’ ಚಿತ್ರದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಲಭಿಸಿ ಒಂದು ವರ್ಷಗಳ ಮೇಲಾಗಿದೆ. ಆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆ ನಿಂತಿಲ್ಲ. ಸಿನಿಮಾ ತಂಡದವರು ಆಗಾಗ ಇದರ ಬಗ್ಗೆ ನೆನಪಿಸಿಕೊಳ್ಳುತ್ತಾರೆ. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. 95ನೇ ಸಾಲಿನ ಆಸ್ಕರ್ ಅವಾರ್ಡ್ ವೇದಿಕೆ ಮೇಲೆ ಏನಾಗಿತ್ತು ಎಂಬುದನ್ನು ಎಸ್​ಎಸ್ ರಾಜಮೌಳಿ ಅವರು ಹೇಳಿದ್ದಾರೆ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.

‘ಆರ್​ಆರ್​ಆರ್’ ಚಿತ್ರದ ವಿಶೇಷ ಶೋ ಜಪಾನ್​ನಲ್ಲಿ ನಡೆದಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರಲ್ಲೇ ಈ ಕಾರ್ಯಕ್ರಮ ಆಯೋಜನೆಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಇತ್ತೀಚೆಗೆ ಈ ವಿಶೇಷ ಶೋ ನಡೆದಿದ್ದು, ರಾಜಮೌಳಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ.

‘ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ನನ್ನ ಸಹೋದರ ಎಂಎಂ ಕೀರವಾಣಿ ಜೊತೆ ನಡೆದ ಒಂದು ಫನ್ ವಿಚಾರವನ್ನು ಹೇಳಿಕೊಳ್ಳಲೇಬೇಕು. ‘ನಾಟು ನಾಟು..’ ಹಾಡು ಆಸ್ಕರ್​ಗೆ ನಾಮಿನೇಟ್ ಆಗಿತ್ತು. ಈ ಅವಾರ್ಡ್​ನ ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಅವರಿಗೆ ಇತ್ತು. ಆಸ್ಕರ್​ ವೇದಿಕೆ ಮೇಲೆ 45 ಸೆಕೆಂಡ್ ಮಾತ್ರ ಮಾತನಾಡುವ ಅವಕಾಶ ಇರುತ್ತದೆ. ಅವರು ವೇದಿಕೆ ಏರುತ್ತಿದ್ದಂತೆ ಉಸಿರಾಡಲೂ ಅವರ ಬಳಿ ಸಾಧ್ಯವಾಗಿಲ್ಲ’ ಎಂದಿದ್ದಾರೆ ರಾಜಮೌಳಿ. ಈ ರೀತಿ ಆಗುತ್ತದೆ ಎಂದು ಅವರು ಯಾರೂ ಊಹಿಸಿರಲಿಲ್ಲ.

‘ಮೂರು ವಾರಗಳಿಂದ ಕೀರವಾಣಿ ಅವರು ಆಸ್ಕರ್ ವೇದಿಕೆ ಮೇಲೆ ಏನು ಮಾತನಾಡಬೇಕು ಎಂಬುದನ್ನು ಪ್ರ್ಯಾಕ್ಟಿಸ್ ಮಾಡಿಕೊಳ್ಳುತ್ತಿದ್ದರು. ನಾವು ಅವರನ್ನು ಟ್ರೇನ್ ಮಾಡುತ್ತಿದ್ದೆವು. ಹೇಗೆ ನಡೆಯಬೇಕು, ಹೇಗೆ ನಿಲ್ಲಬೇಕು, ಹೇಗೆ ಜನರತ್ತ ಕೈ ಬೀಸಬೇಕು ಎಂದು ಹೇಳಿದ್ದೆವು. ಮೂರು ವಾರ ಕೀರವಾಣಿ ಅವರು ಇದನ್ನೇ ಪ್ರ್ಯಾಕ್ಟಿಸ್ ಮಾಡಿದ್ದರು’ ಎಂದಿದ್ದಾರೆ ಅವರು.

‘ಅಕಾಡೆಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಅವರು ಎಲ್ಲವನ್ನೂ ಮರೆತರು. ಅವರು ವೇದಿಕೆ ಏರುವಾಗ ಎದುರುಸಿರು ಬಂತು. ಅದನ್ನು ನಿಯಂತ್ರಿಸಿಕೊಂಡು ಅವರು ಸ್ಪೀಚ್ ಕೊಟ್ಟರು. ಅವರು ಹಾಡನ್ನು ಕೂಡ ಹೇಳಿದರು. ನಾವು ಮರುದಿನ ಮನೆಗೆ ಬಂದೆವು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಆರ್​ಆರ್​ಆರ್ ಚಿತ್ರಕ್ಕೆ ಸೀಕ್ವೆಲ್ ಬರುತ್ತದೆ’; ಜಪಾನ್​ನಲ್ಲಿ ರಹಸ್ಯ ಬಿಚ್ಚಿಟ್ಟ ರಾಜಮೌಳಿ

ಜಪಾನ್ ವೇದಿಕೆ ಮೇಲೆ ರಾಜಮೌಳಿ ‘ಆರ್​ಆರ್​ಆರ್ 2’ ಮಾಡುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡುವುದಿಲ್ಲ ಎಂದು ಕೂಡ ಹೇಳಿದ್ದಾರೆ. ಸದ್ಯ ಅವರು ಮಹೇಶ್ ಬಾಬು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಶೀಘ್ರವೇ ಆರಂಭ ಆಗಲಿದೆ. ಮಹೇಶ್ ಬಾಬು ಅವರು ಈ ಚಿತ್ರಕ್ಕಾಗಿ ಟ್ರಾನ್ಸ್​ಫಾರ್ಮೇಷನ್ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್