AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಕಿ ಹಚ್ಚಿ ಸುಡ್ತೀನಿ ಅಂದಿದ್ರು’; ‘ಆರ್​ಆರ್​ಆರ್​’ ರಿಲೀಸ್ ದಿನಗಳನ್ನು ನೆನಪಿಸಿಕೊಂಡ ರಾಜಮೌಳಿ

‘ಆರ್​ಆರ್​ಆರ್​’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಅವರು ಮುಸ್ಲಿಂ ರೀತಿ ತೋರಿಸಿದ್ದನ್ನು ತೀವ್ರವಾಗಿ ವಿರೋಧಿಸಲಾಗಿತ್ತು. ಆ ದೃಶ್ಯವನ್ನು ಕತ್ತರಿಸದೇ ಇದ್ದರೆ ಚಿತ್ರಮಂದಿರಕ್ಕೆ ಬೆಂಕಿ ಇಡುವುದಾಗಿ ಹೆದರಿಸಿದ್ದರು.

‘ಬೆಂಕಿ ಹಚ್ಚಿ ಸುಡ್ತೀನಿ ಅಂದಿದ್ರು’; ‘ಆರ್​ಆರ್​ಆರ್​’ ರಿಲೀಸ್ ದಿನಗಳನ್ನು ನೆನಪಿಸಿಕೊಂಡ ರಾಜಮೌಳಿ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Mar 15, 2023 | 2:38 PM

Share

ಎಸ್​.ಎಸ್​. ರಾಜಮೌಳಿ (SS Rajamouli) ಅವರ ಖ್ಯಾತಿ ‘ಆರ್​ಆರ್​ಆರ್​’ ಚಿತ್ರದಿಂದ ದ್ವಿಗುಣಗೊಂಡಿದೆ. ಹಾಲಿವುಡ್ ಮಂದಿಗೂ ರಾಜಮೌಳಿ ಅವರ ಪರಿಚಯ ಆಗಿದೆ. ರಾಜಮೌಳಿ ಅವರು ಮುಂಬರುವ ದಿನಗಳಲ್ಲಿ ಹಾಲಿವುಡ್ ಅಂಗಳಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.  ‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದ ನಂತರದಲ್ಲಿ ಈ ಸಿನಿಮಾನ ಕೊಂಡಾಡಿದವರು ಸಾಕಷ್ಟು ಮಂದಿ ಇದ್ದಾರೆ. ಆದರೆ, ಸಿನಿಮಾ ರಿಲೀಸ್ ಸಂದರ್ಭದಲ್ಲಿ ಚಿತ್ರಕ್ಕೆ ಅನೇಕರು ವಿರೋಧವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಜಮೌಳಿ ಅವರು ಇತ್ತೀಚಿನ ಸಂದರ್ಶನ ಒಂದರಲ್ಲಿ ಮಾತನಾಡಿದ್ದರು.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರು ‘ಆರ್​ಆರ್​ಆರ್​’ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಜೂನಿಯರ್ ಎನ್​ಟಿಆರ್ ಅವರು ಮುಸ್ಲಿಂ ರೀತಿ ತೋರಿಸಿದ್ದನ್ನು ತೀವ್ರವಾಗಿ ವಿರೋಧಿಸಿದ್ದರು. ‘ಆರ್​ಆರ್​ಆರ್​’ ಚಿತ್ರದಲ್ಲಿ ಆ ದೃಶ್ಯವನ್ನು ಕತ್ತರಿಸದೇ ಇದ್ದರೆ ಚಿತ್ರಮಂದಿರಕ್ಕೆ ಬೆಂಕಿ ಇಡುವುದಾಗಿ ಹೆದರಿಸಿದ್ದರು. ಈ ವಿಚಾರವನ್ನು ರಾಜಮೌಳಿ ಮೆಲಕು ಹಾಕಿದ್ದಾರೆ.

‘ನಾನು 12 ಸಿನಿಮಾ ಮಾಡಿದ್ದೇನೆ. ಈ ವೇಳೆ ನನಗೆ ಒಂದು ವಿಚಾರ ಅರ್ಥವಾಗಿದೆ. ಸಿನಿಮಾಗೆ ಯಾರಿಂದಲೂ ವಿರೋಧ ವ್ಯಕ್ತವಾಗಿಲ್ಲ ಎಂದರೆ ಜನರು ನಿಮ್ಮ ಸಿನಿಮಾಗಳ ಬಗ್ಗೆ ಗಮನ ನೀಡುತ್ತಿಲ್ಲ ಎಂದರ್ಥ. ಒಂದು ಸಿನಿಮಾಗೆ ಜನಪ್ರಿಯತೆ ಸಿಕ್ಕಿತು ಎಂದರೆ ಅಂಥ ಸಿನಿಮಾಗಳನ್ನು ವಿರೋಧಿಸುವವರು ಇದ್ದೇ ಇರುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್
Image
Jr NTR: ಆಸ್ಕರ್​ ಸಮಾರಂಭ ಮುಗಿಸಿ ಬಂದ ಜೂ. ಎನ್​ಟಿಆರ್​; ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಇದನ್ನೂ ಓದಿ: RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ಆರ್‌ಆರ್‌ಆರ್‌’ ಚಿತ್ರದಲ್ಲಿ ನಾಯಕ ತಲೆಗೆ ಕ್ಯಾಪ್ ಧರಿಸಿ ಮುಸ್ಲಿಮರಂತೆ ಕಾಣಿಸಿಕೊಳ್ಳುತ್ತಾರೆ. ಆ ದೃಶ್ಯ ತೆಗೆಯದೇ ಇದ್ದರೆ ಚಿತ್ರಮಂದಿರವನ್ನು ಸುಟ್ಟುಹಾಕುವುದಾಗಿ ಹಾಗೂ ನನ್ನನ್ನು ಸಾರ್ವಜನಿಕವಾಗಿ ಹೊಡೆಯುವುದಾಗಿ  ಬಲಪಂಥೀಯ ರಾಜಕಾರಣಿ ಒಬ್ಬರು ಬೆದರಿಕೆ ಹಾಕಿದರು. ಇದೇ ವೇಳೆ ನಾನು ಹಿಂದೂ ರಾಷ್ಟ್ರೀಯತೆಯನ್ನು ಪ್ರಚಾರ ಮಾಡುತ್ತಿದ್ದೇನೆ ಎಂದು ಅನೇಕ ಎಡಪಂಥೀಯರು ಆರೋಪಿಸಿದರು’ ಎಂದಿದ್ದಾರೆ ರಾಜಮೌಳಿ.

‘ಯಾವುದೇ ವಿಚಾರಕ್ಕೆ ಯಾರು ಬೇಕಾದರೂ ಜಗಳ ಆಡಲಿ, ನಾನು ತೀವ್ರವಾದಿಗಳನ್ನು ಖಂಡಿಸುತ್ತೇನೆ. ನನ್ನ ಸಿನಿಮಾದಲ್ಲಿ ಬರುವ ಪಾತ್ರವನ್ನು ಏಕೆ ಆ ರೀತಿ ತೋರಿಸಿದ್ದೇನೆ ಎಂಬುದನ್ನು ನೋಡುವ ತಾಳ್ಮೆಯೂ ಕೆಲವರಿಗೆ ಇಲ್ಲ. ನಾನು ರಾಷ್ಟ್ರೀಯತಾವಾದಿ ಹಾಗೂ ಉದಾರವಾದಿ ಎರಡೂ ಅಲ್ಲ ಎನ್ನುವ ಖುಷಿ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:38 pm, Wed, 15 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು