AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

RRR Movie | Tollywood: ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ
ಎಸ್ಎಸ್ ರಾಜಮೌಳಿ, ಆರ್​ಆರ್​ಆರ್​ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Jan 15, 2023 | 5:17 PM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ (RRR Movie) ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಈಗ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ (Oscar Award) ಪಡೆಯಲು ಪ್ರಯತ್ನಿಸುತ್ತಿದೆ. ಈ ಸಂದರ್ಭದಲ್ಲಿ ರಾಜಮೌಳಿ ನೀಡಿದ ಒಂದು ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಶುರುವಾಗಿದೆ. ‘ಆರ್​ಆರ್​ಆರ್​ ಬಾಲಿವುಡ್​ ಸಿನಿಮಾ’ ಅಲ್ಲ ಎಂದು ರಾಜಮೌಳಿ (SS Rajamouli) ಹೇಳಿದ್ದಾರೆ. ಈ ಹೇಳಿಕೆಯಿಂದಾಗಿ ಹಿಂದಿ ಪ್ರೇಕ್ಷಕರ ಪೈಕಿ ಕೆಲವರು ಅಸಮಾಧಾನಗೊಂಡಿದ್ದಾರೆ.

ಆಸ್ಕರ್ ಪ್ರಶಸ್ತಿಯ ಸ್ಪರ್ಧೆಯಲ್ಲಿ ‘ಆರ್​ಆರ್​ಆರ್​’ ಚಿತ್ರವನ್ನು ನಾಮಿನೇಟ್​ ಮಾಡಲು ಸಕಲ ಪ್ರಯತ್ನಗಳು ನಡೆಯುತ್ತಿವೆ. ‘ಫಾರ್​ ಯುವರ್​ ಕನ್ಸಿಡರೇಷನ್​’ ಕ್ಯಾಂಪೇನ್​ ಮೂಲಕ ಈ ಚಿತ್ರವನ್ನು ಆಸ್ಕರ್​ಗೆ ಕಳಿಸುವ ಕಸರತ್ತು ನಡೆಯುತ್ತಿವೆ. ಅದರ ಅಂಗವಾಗಿ ಇತ್ತೀಚೆಗೆ ಅಮೆರಿಕದಲ್ಲಿ ಈ ಸಿನಿಮಾದ ಪ್ರದರ್ಶನ ಮತ್ತು ಸಂವಾದ ನಡೆಯಿತು. ಸಿನಿಮಾ ಬಿತ್ತರ ಆಗುವುದಕ್ಕೂ ಮುನ್ನ ರಾಜಮೌಳಿ ಮಾತನಾಡಿದರು. ‘ಇದು ಬಾಲಿವುಡ್​ ಸಿನಿಮಾ ಅಲ್ಲ. ದಕ್ಷಿಣ ಭಾರತದ ತೆಲುಗು ಭಾಷೆಯ ಸಿನಿಮಾ ಇದು. ಅಲ್ಲಿಂದಲೇ ನಾನು ಬಂದಿರುವುದು. ಸಿನಿಮಾದ ಕಥೆಯನ್ನು ಮುಂದುವರಿಸಲು ನಾನು ಹಾಡುಗಳನ್ನು ಬಳಸುತ್ತೇನೆ’ ಎಂದು ರಾಜಮೌಳಿ ಹೇಳಿದ್ದಾರೆ.

ಇದನ್ನೂ ಓದಿ: Natu Natu Song: ಯುದ್ಧ ಶುರು ಆಗೋದಕ್ಕೂ ಮುನ್ನ ಉಕ್ರೇನ್​ನಲ್ಲಿ ‘ನಾಟು ನಾಟು..’ ಸಾಂಗ್​ ಶೂಟಿಂಗ್​ ಮಾಡಿದ್ದ ರಾಜಮೌಳಿ

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕಾರಾರು ತೆಗೆದಿದ್ದಾರೆ. ‘ಆರ್​ಆರ್​ಆರ್​ ನಾಮಿನೇಟ್​ ಆಗುವುದು ಭಾರತದಿಂದಲೇ ಹೊರತು ಸೌತ್​ ಇಂಡಿಯಾ ಅಥವಾ ತೆಲುಗು ಚಿತ್ರರಂಗದಿಂದ ಅಲ್ಲ. ಪ್ರದೇಶ ಮತ್ತು ಭಾಷೆಗಳ ವಿಚಾರದಲ್ಲಿ ಪಕ್ಷಪಾತ ಬೇಡ. ಬಾಲಿವುಡ್ ಎಂದರೆ ಒಂದು ಚಿತ್ರರಂಗವಲ್ಲ. ಅದು ಭಾರತವನ್ನು ಪ್ರತಿನಿಧಿಸುತ್ತದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಈ ಮಾತಿನಲ್ಲಿ ತರ್ಕವೇ ಇಲ್ಲ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 

‘ಭಾರತದಿಂದ ಬಂದ ಎಲ್ಲ ಸಿನಿಮಾಗಳನ್ನೂ ಬಾಲಿವುಡ್​ ಚಿತ್ರಗಳು ಎಂದು ಯಾಕೆ ಹಣೆಪಟ್ಟಿ ಕಟ್ಟಬೇಕು’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. ‘ಬಾಲಿವುಡ್​ನಲ್ಲಿ ಉತ್ತಮ ಸಿನಿಮಾಗಳು ಬರುತ್ತವೆ ಎಂಬುದು ನಿಜ. ಅದೇ ರೀತಿ ಸೌತ್​ ಇಂಡಿಯಾದಿಂದ ಒಳ್ಳೆಯ ಸಿನಿಮಾಗಳು ಬಂದಾಗ ಅವರಿಗೂ ಕ್ರೆಡಿಟ್​ ಸಿಗಬೇಕು’ ಎಂದು ಹಲವರು ಹೇಳಿದ್ದಾರೆ. ಆ ಮೂಲಕ ರಾಜಮೌಳಿ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಪರ-ವಿರೋಧ ಏನೇ ಇರಲಿ, ಭಾರತದ ಸಿನಿಮಾಗೆ ಆಸ್ಕರ್​ ಸಿಗಲಿ ಎಂದು ಸಿನಿಪ್ರಿಯರು ಬಯಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!