Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

RRR Movie | Tollywood: ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ
ಎಸ್ಎಸ್ ರಾಜಮೌಳಿ, ಆರ್​ಆರ್​ಆರ್​ ಸಿನಿಮಾ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on: Jan 15, 2023 | 5:17 PM

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ (RRR Movie) ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಈಗ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ (Oscar Award) ಪಡೆಯಲು ಪ್ರಯತ್ನಿಸುತ್ತಿದೆ. ಈ ಸಂದರ್ಭದಲ್ಲಿ ರಾಜಮೌಳಿ ನೀಡಿದ ಒಂದು ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಶುರುವಾಗಿದೆ. ‘ಆರ್​ಆರ್​ಆರ್​ ಬಾಲಿವುಡ್​ ಸಿನಿಮಾ’ ಅಲ್ಲ ಎಂದು ರಾಜಮೌಳಿ (SS Rajamouli) ಹೇಳಿದ್ದಾರೆ. ಈ ಹೇಳಿಕೆಯಿಂದಾಗಿ ಹಿಂದಿ ಪ್ರೇಕ್ಷಕರ ಪೈಕಿ ಕೆಲವರು ಅಸಮಾಧಾನಗೊಂಡಿದ್ದಾರೆ.

ಆಸ್ಕರ್ ಪ್ರಶಸ್ತಿಯ ಸ್ಪರ್ಧೆಯಲ್ಲಿ ‘ಆರ್​ಆರ್​ಆರ್​’ ಚಿತ್ರವನ್ನು ನಾಮಿನೇಟ್​ ಮಾಡಲು ಸಕಲ ಪ್ರಯತ್ನಗಳು ನಡೆಯುತ್ತಿವೆ. ‘ಫಾರ್​ ಯುವರ್​ ಕನ್ಸಿಡರೇಷನ್​’ ಕ್ಯಾಂಪೇನ್​ ಮೂಲಕ ಈ ಚಿತ್ರವನ್ನು ಆಸ್ಕರ್​ಗೆ ಕಳಿಸುವ ಕಸರತ್ತು ನಡೆಯುತ್ತಿವೆ. ಅದರ ಅಂಗವಾಗಿ ಇತ್ತೀಚೆಗೆ ಅಮೆರಿಕದಲ್ಲಿ ಈ ಸಿನಿಮಾದ ಪ್ರದರ್ಶನ ಮತ್ತು ಸಂವಾದ ನಡೆಯಿತು. ಸಿನಿಮಾ ಬಿತ್ತರ ಆಗುವುದಕ್ಕೂ ಮುನ್ನ ರಾಜಮೌಳಿ ಮಾತನಾಡಿದರು. ‘ಇದು ಬಾಲಿವುಡ್​ ಸಿನಿಮಾ ಅಲ್ಲ. ದಕ್ಷಿಣ ಭಾರತದ ತೆಲುಗು ಭಾಷೆಯ ಸಿನಿಮಾ ಇದು. ಅಲ್ಲಿಂದಲೇ ನಾನು ಬಂದಿರುವುದು. ಸಿನಿಮಾದ ಕಥೆಯನ್ನು ಮುಂದುವರಿಸಲು ನಾನು ಹಾಡುಗಳನ್ನು ಬಳಸುತ್ತೇನೆ’ ಎಂದು ರಾಜಮೌಳಿ ಹೇಳಿದ್ದಾರೆ.

ಇದನ್ನೂ ಓದಿ: Natu Natu Song: ಯುದ್ಧ ಶುರು ಆಗೋದಕ್ಕೂ ಮುನ್ನ ಉಕ್ರೇನ್​ನಲ್ಲಿ ‘ನಾಟು ನಾಟು..’ ಸಾಂಗ್​ ಶೂಟಿಂಗ್​ ಮಾಡಿದ್ದ ರಾಜಮೌಳಿ

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕಾರಾರು ತೆಗೆದಿದ್ದಾರೆ. ‘ಆರ್​ಆರ್​ಆರ್​ ನಾಮಿನೇಟ್​ ಆಗುವುದು ಭಾರತದಿಂದಲೇ ಹೊರತು ಸೌತ್​ ಇಂಡಿಯಾ ಅಥವಾ ತೆಲುಗು ಚಿತ್ರರಂಗದಿಂದ ಅಲ್ಲ. ಪ್ರದೇಶ ಮತ್ತು ಭಾಷೆಗಳ ವಿಚಾರದಲ್ಲಿ ಪಕ್ಷಪಾತ ಬೇಡ. ಬಾಲಿವುಡ್ ಎಂದರೆ ಒಂದು ಚಿತ್ರರಂಗವಲ್ಲ. ಅದು ಭಾರತವನ್ನು ಪ್ರತಿನಿಧಿಸುತ್ತದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಈ ಮಾತಿನಲ್ಲಿ ತರ್ಕವೇ ಇಲ್ಲ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 

‘ಭಾರತದಿಂದ ಬಂದ ಎಲ್ಲ ಸಿನಿಮಾಗಳನ್ನೂ ಬಾಲಿವುಡ್​ ಚಿತ್ರಗಳು ಎಂದು ಯಾಕೆ ಹಣೆಪಟ್ಟಿ ಕಟ್ಟಬೇಕು’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. ‘ಬಾಲಿವುಡ್​ನಲ್ಲಿ ಉತ್ತಮ ಸಿನಿಮಾಗಳು ಬರುತ್ತವೆ ಎಂಬುದು ನಿಜ. ಅದೇ ರೀತಿ ಸೌತ್​ ಇಂಡಿಯಾದಿಂದ ಒಳ್ಳೆಯ ಸಿನಿಮಾಗಳು ಬಂದಾಗ ಅವರಿಗೂ ಕ್ರೆಡಿಟ್​ ಸಿಗಬೇಕು’ ಎಂದು ಹಲವರು ಹೇಳಿದ್ದಾರೆ. ಆ ಮೂಲಕ ರಾಜಮೌಳಿ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಪರ-ವಿರೋಧ ಏನೇ ಇರಲಿ, ಭಾರತದ ಸಿನಿಮಾಗೆ ಆಸ್ಕರ್​ ಸಿಗಲಿ ಎಂದು ಸಿನಿಪ್ರಿಯರು ಬಯಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್